ನಿಪಾಹ್ ವೈರಸ್ ಎಂದರೇನು? ಪತ್ತೆ ಹೇಗೆ, ಲಕ್ಷಣ, ಪರಿಹಾರಗಳು
ಬೆಂಗಳೂರು, ಜೂನ್ 4: ನಿಪಾಹ್ ವೈರಸ್ ಈ ವರ್ಷದ ಮೊದಲ ಪ್ರಕರಣ ಕೇರಳದ ಎರ್ನಾಕ್ಯುಲಮ್ನಲ್ಲಿ ದೃಢಪಟ್ಟಿದೆ. ಹಾಗಾದರೆ ನಿಪಾಹ್ ವೈರಸ್ ಎಂದರೇನು?, ಪತ್ತ ಮಾಡುವುದು ಹೇಗೆ, ಲಕ್ಷಣಗಳೇನು, ಪರಿಹಾರವೇನು ಎಂಬುದನ್ನು ನೋಡಬೇಕಿದೆ.
ಸಾಮಾನ್ಯವಾಗಿ ಈ ನಿಪಾಹ್ ವೈರಾಣುಗಳು, ಒಂದು ಬಗೆಯ ಬಾವಲಿಯಿಂದ (ಫ್ರೂಟ್ ಬ್ಯಾಟ್ಸ್) ಹರಡಬಹುದಾದ ವೈರಸ್ ಆಗಿದ್ದು, ಈ ವೈರಸ್ ಸೋಂಕು ತಗುಲಿರುವ ವ್ಯಕ್ತಿಯ ಸಂಪರ್ಕಕ್ಕೆ ಬೇರೆ ವ್ಯಕ್ತಿ ಬಂದರೆ ಅಂದರೆ, ಸೋಂಕಿನಿಂದ ಕೂಡಿದ ವ್ಯಕ್ತಿಯ ಜೊಲ್ಲು, ಎಂಜಲು, ಅಥವಾ ವಾಂತಿಯ ಸ್ಪರ್ಶವಾದರೆ ಈ ವೈರಾಣು ಬೇರೊಬ್ಬರಿಗೆ ಹರಡುತ್ತದೆ. ಇದರಿಂದ ಕಳೆದ ವರ್ಷ 17 ಮಂದಿ ಮೃತಪಟ್ಟಿದ್ದರು.

ನಿಪಾಹ್ ವೈರಸ್ ಒಬ್ಬರಿಂದೊಬ್ಬರಿಗೆ ಹರಡುವ ರೋಗವೇ?
ಹೌದು ನಿಪಾಹ್ ವೈರಸ್ ಒಬ್ಬರಿಂದೊಬ್ಬರಿಗೆ ಹರಡುವ ರೋಗವಾಗಿದೆ. ಈ ನಿಪಾಹ್ ವೈರಾಣು ಮೂಲಸ್ಥಾನ ಪ್ಟೆರೋಪೋಡಿಡೇ ಬಾವಲಿ ಕುಟುಂಬ ಎನ್ನಲಾಗಿದೆ. ಈ ಜಾತಿಯ ಬಾವಲಿಗಲ ಮುಖಾಂತರ ಈ ಮಾರಕ ವೈರಾಣು ಹರಡುತ್ತಿದೆ. ಈ ಜಾತಿಯ ಬಾವಲಿಗಳು ತಿಂದು ಬಿಸಾಡಿದ ಅಥವಾ ಈ ಬಾವಲಿಗಳ ಜೊಲ್ಲು, ಮೂತ್ರ ಬಿದ್ದ ವಸ್ತುಗಳ ಸ್ಪರ್ಶವಾದರೆ ಈ ಸೋಂಕು ಹರಡುವ ಸಾಧ್ಯತೆ ಇದೆ ಎನ್ನಲಾಗಿದೆ.

ವೈದ್ಯಕೀಯ ಲೋಕಕ್ಕೇ ನಿಪಾಹ್ ಒಂದು ಸವಾಲು
ಈ ನಿಪಾಹ್ ವೈರಾಣು 1998ರಲ್ಲೇ ಪತ್ತೆಯಾಗಿದ್ದರೂ, ಈ ವೈರಾಣುವಿಗೆ ಈ ವರೆಗೂ ಲಸಿಕೆಯನ್ನೇ ಕಂಡು ಹಿಡಿಯಲಾಗಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯ ವರದಿಗಳ ಪ್ರಕಾರ ಇದಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆಯಿಲ್ಲ ಎನ್ನಲಾಗಿದೆ. ಮಾರಣಾಂತಿಕ ಕಾಯಿಲೆಗಳನ್ನು ತರಬಲ್ಲ ನಿಪಾಹ್ ವೈರಾಣುವಿಗೆ ಲಸಿಕೆ ತಯಾರಿಸಲು ಸಾಕಷ್ಟು ವೈದ್ಯಕೀಯ ಸಂಸ್ಥೆಗಳು ಸಂಶೋಧನೆ ನಡೆಸುತ್ತಿವೆಯಾದರೂ ಲಸಿಕೆ ಮಾತ್ರ ಇನ್ನೂ ಕಂಡುಹಿಡಿಯಲಾಗಿಲ್ಲ.

ನಿಪಾಹ್ ಗುಣಲಕ್ಷಣಗಳೇನು?
ಆರಂಭದಲ್ಲಿ ಮೆದುಳಿನ ನರಮಂಡಲದ ಮೇಲೆ ದಾಳಿ ಮಾಡುವ ವೈರಾಣು ಪತ್ತೆಯಾಗಲು 5ರಿಂದ 14 ದಿನಗಳೇ ಬೇಕಾಗುತ್ತದೆ. ಸಾಮಾನ್ಯ ಜ್ವರ, ವಿಪರೀತ ತಲೆನೋವು, ಅತಿಯಾದ ಆಯಾಸ, ಅತಿಯಾದ ನಿದ್ರಾಹೀನತೆ, ದಿಗ್ಭ್ರಮೆ ಮತ್ತು ಮಾನಸಿಕ ಗೊಂದಲ ಈ ಸೋಂಕಿನ ಲಕ್ಷಣಗಳಾಗಿವೆ.ನಿಪಾಹ್ ಸೋಂಕು ನಮ್ಮನ್ನು ಆವರಿಸಿದರೆ, ಮೊದಲಿಗೆ ಅದು ಮೆದುಳಿನ ಮೇಲೆ ತನ್ನ ದುಷ್ಪರಿಣಾಮ ಬೀರುತ್ತದೆ. ಕೆಲ ಪ್ರಕರಣಗಳಲ್ಲಿ ಉಸಿರಾಟದ ತೊಂದರೆ ಕೂಡ ಕಾಣಿಸಿಕೊಂಡಿದೆ. ಈ ಸೋಂಕು ಎಷ್ಟು ಮಾರಕ ಎಂದರೆ, ಕೇವಲ 24 ರಿಂದ 48 ಗಂಟೆಗಳಲ್ಲೇ ಸೋಂಕು ಪೀಡಿತ ವ್ಯಕ್ತಿ ಕೋಮಾಗೆ ಜಾರುವ ಅಪಾಯವಿದೆ. ಅಲ್ಲದೆ ಸಾವು ಕೂಡ ಸಂಭವಿಸಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಯಾರಿಗೆ ಹೆಚ್ಚು ಅಪಾಯ, ನಿಪಾಹ್ ನಿಂದ ದೂರವಿರುವುದು ಹೇಗೆ?
ಈ ವೈರಸ್ ಮನುಷ್ಯರಿಗಷ್ಟೇ ಅಲ್ಲದೆ ಹಂದಿಗಳಿಗಳು ಹಾಗೂ ಇನ್ನಿತರೆ ಸಾಕು ಪ್ರಾಣಿಗಳಿಗೆ ಹರಡಬಲ್ಲದು. ಯಾವುದೇ ರೀತಿಯ ಸೋಂಕುಗಳಾದರೂ ಅದರ ನಿರ್ಮೂಲನೆ ಅಥವಾ ನಿಯಂತ್ರಣ ಮನಷ್ಯನ ರೋಗ ನಿರೋಧಕ ಸಾಮರ್ಥ್ಯದ ಮೇಲೆ ಆಧಾರಿತವಾಗಿರುತ್ತದೆ. ಹೀಗಾಗಿ ನಮ್ಮ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಬಲ್ಲ ಆಹಾರ ಪದಾರ್ಥಗಳು, ಡಯಟ್ ಗಳನ್ನು ಪಾಲಿಸುವುದು ಉತ್ತಮ. ಅಲ್ಲದೆ ರೋಗ ನಿರೋಧಕ ಶಕ್ತಿ ಹೆಚ್ಚಿಸಬಲ್ಲ ಹರ್ಬಲ್ ಟೀ (ಗಿಡಮೂಲಿಕಾ ಚಹಾ) ಅಥವಾ ವಿವಿಧ ಬಗೆಯ ಕಷಾಯಗಳನ್ನು ಆಗಾಗ ಸೇವಿಸುತ್ತಿರಬೇಕು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications