ಎರಡನೇ ಹೆಂಡತಿ ವಿಷಯ ಮುಚ್ಚಿಟ್ಟಿದ್ದೇಕೆ?; ಕೇರಳ ಎಡಪಕ್ಷದ ಅಭ್ಯರ್ಥಿ ಮುಂದೆದ್ದ ಪ್ರಶ್ನೆ
ಮಲಪ್ಪುರಂ, ಮಾರ್ಚ್ 23: ಏಪ್ರಿಲ್ 6ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಂತಿಮವಾಗಿದೆ. ಆದರೆ ಕೇರಳದ ಎಡಪಕ್ಷ ಅಭ್ಯರ್ಥಿ ಕೆ.ಟಿ. ಸುಲೈಮಾನ್ ಹಾಜಿ ಅವರ ನಾಮಪತ್ರದ ಬಗ್ಗೆ ಕೇಂದ್ರ ಸಚಿವ ವಿ. ಮುರಳೀಧರನ್ ಪ್ರಶ್ನೆ ಎತ್ತಿದ್ದಾರೆ. ಅವರ ಎರಡನೇ ಹೆಂಡತಿ ವಿವರವನ್ನು ಏಕೆ ಸಾರ್ವಜನಿಕ ವಲಯದಿಂದ ಮರೆ ಮಾಚಲಾಗಿದೆ ಎಂದು ಕೇಳಿದ್ದಾರೆ.
ಈ ಬಗ್ಗೆ ದೂರಿರುವ ಅವರು, "ಕೊಂಡೊಟ್ಟಿಯಲ್ಲಿ ಸಿಪಿಐಎಂ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಕೆ.ಟಿ. ಸುಲೈಮಾನ್ ಹಾಜಿ ಅವರು ಪಾಕಿಸ್ತಾನದಲ್ಲಿರುವ ತಮ್ಮ ಎರಡನೇ ಹೆಂಡತಿ ವಿಷಯವನ್ನು ಮುಚ್ಚಿಟ್ಟಿದ್ದಾರೆ. ಈ ವಿಷಯದಲ್ಲಿ ತಮ್ಮನ್ನು ತಾವು ಉದಾರವಾದಿ ಎಂದು ಕರೆದುಕೊಂಡಿರುವ ಪಿಣರಾಯಿ ವಿಜಯನ್ ಅವರ ಮೌನದ ಮೇಲೆ ಯಾರೂ ಅವಲಂಬಿತವಾಗುವಂತಿಲ್ಲ" ಎಂದು ಟೀಕಿಸಿದ್ದಾರೆ. ಮುಂದೆ ಓದಿ...

"ಎರಡನೇ ಹೆಂಡತಿ ವಿಷಯ ಏಕೆ ಮುಚ್ಚಿಟ್ಟಿರಿ?"
ಕೆ.ಟಿ.ಸುಲೈಮಾನ್ ಅವರು ಸಲ್ಲಿಸಿರುವ ನಾಮಪತ್ರದಲ್ಲಿ, ಪಾಕಿಸ್ತಾನದಲ್ಲಿ ನೆಲೆಸಿರುವ ತಮ್ಮ ಎರಡನೇ ಹೆಂಡತಿ ಬಗ್ಗೆ ವಿವರ ನೀಡಿಲ್ಲ. 19 ವಯಸ್ಸಿನ ತಮ್ಮ ಎರಡನೇ ಹೆಂಡತಿ ಹೆಸರನ್ನು ನಾಮಪತ್ರದಲ್ಲಿ ಉಲ್ಲೇಖಿಸಿಲ್ಲ ಎಂದು ಟ್ವೀಟ್ ಮಾಡಿ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಜೆಪಿ ನಡ್ಡಾ ಹಾಗೂ ಪಕ್ಷದ ಅಧ್ಯಕ್ಷ ಕೆ ಸುರೇಂದ್ರನ್ ಅವರಿಗೆ ಟ್ಯಾಗ್ ಮಾಡಿದ್ದಾರೆ.
|
"ಜನರು ವಿವರಣೆ ಬಯಸುತ್ತಾರೆ"
ಈ ವಿಷಯದ ಕುರಿತು ಸಿಎಂ ಪಿಣರಾಯಿ ವಿಜಯನ್ ಅವರ ಮೌನವನ್ನು ಖಂಡಿಸಿರುವ ಅವರು, "ಜನರು ಈ ವಿಷಯದಲ್ಲಿ ವಿವರಣೆ ಬಯಸುತ್ತಾರೆ. ಅದರಲ್ಲೂ ಶಾಸಕನಾಗಲು ತಯಾರಿ ನಡೆಸುತ್ತಿರುವ ವ್ಯಕ್ತಿಯು ತನ್ನ ಹೆಂಡತಿ, ವಿದೇಶಿ ಪ್ರಜೆಯ ವಿವರಗಳನ್ನು ಮುಚ್ಚಿಟ್ಟಿದ್ದಾಗ ವಿವರಣೆ ಅವಶ್ಯಕವಾಗಿದೆ" ಎಂದು ಇನ್ನೊಂದು ಟ್ವೀಟ್ ಮಾಡಿದ್ದಾರೆ.

ನಾಮಪತ್ರ ತಡೆಹಿಡಿದಿದ್ದ ಚುನಾವಣಾ ಆಯೋಗ
ಕೆ.ಟಿ.ಸುಲೈಮಾನ್ ಅವರು ಸಲ್ಲಿಸಿದ್ದ ನಾಮಪತ್ರವನ್ನು ಮೊದಲ ಹಂತದ ಪರಿಶೀಲನೆ ಸಮಯ ಚುನಾವಣಾ ಆಯೋಗ ಮಾರ್ಚ್ 20ರಂದು ತಡೆಹಿಡಿದಿತ್ತು. ಆದರೆ ಆನಂತರ ಅದನ್ನು ಅಧ್ಯಕ್ಷರು ಸ್ವೀಕರಿಸಿದ್ದರು. ಈ ಬಗ್ಗೆ ಮುರಳೀಧರನ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು. ನಾಮಪತ್ರ ಸಲ್ಲಿಕೆಯಲ್ಲಿ ವಂಚನೆ ನಡೆದಿದೆ ಎಂದು ಪಿಣರಾಯಿ ವಿರುದ್ಧ ದೂರಿದ್ದರು.

ದುಬೈನಲ್ಲಿ ಮದುವೆ ನಡೆದಿದ್ದಕ್ಕೆ ಸಾಕ್ಷ್ಯ
ಸುಲೈಮಾನ್ ಅವರು ದುಬೈನಲ್ಲಿ ಎರಡನೇ ಮದುವೆಯಾಗಿದ್ದಾರೆ ಎಂದು ಮುಸ್ಲಿಂ ಲೀಗ್ ಮುಖಂಡರು ದೂರಿದ್ದರು. ಎರಡನೇ ಹೆಂಡತಿ ಬೇರೆ ದೇಶದಲ್ಲಿ ನೆಲೆಸಿದ್ದಾರೆ ಎಂದು ದುಬೈನಲ್ಲಿ ನಡೆದಿದೆ ಎನ್ನಲಾದ ಲಗ್ನಪತ್ರಿಕೆ ಸಾಕ್ಷ್ಯವನ್ನೂ ನೀಡಿದ್ದರು. ಪಾಕಿಸ್ತಾನದ ರಾವಲ್ಪಿಂಡಿಯ ಹೀರಾ ಮೊಹಮದ್ ಸಫ್ದರ್ ಇವರ ಎರಡನೇ ಹೆಂಡತಿ ಎನ್ನಲಾಗಿದೆ.
140 ಸದಸ್ಯಬಲದ ಕೇರಳ ವಿಧಾನಸಭೆ ಚುನಾವಣೆಯು ಏಪ್ರಿಲ್ 6ರಂದು ನಡೆಯಲಿದೆ. ಚುನಾವಣೆಗೆ ರಾಜ್ಯದಲ್ಲಿ ಸರ್ವ ಸಿದ್ಧತೆ ನಡೆಯುತ್ತಿದೆ.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications