Get Updates
Get notified of breaking news, exclusive insights, and must-see stories!

ಶಬರಿಮಲೆಗೆ ಬರುವ ಮಹಿಳೆಯರನ್ನು ಕತ್ತರಿಸಿ ಎಂದ ಮಲಯಾಳಂ ನಟ

ಕೊಲ್ಲಂ, ಅಕ್ಟೋಬರ್ 12: "ಕೇರಳದ ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಬರುವ ಮಹಿಳೆಯರನ್ನು ಕತ್ತರಿಸಿ, ಒಂದು ಭಾಗವನ್ನು ದೆಹಲಿಗೆ, ಇನ್ನೊಂದು ಭಾಗವನ್ನು ಕೇರಳ ಮುಖ್ಯಮಂತ್ರಿ ಕಚೇರಿಗೆ ಕಳಿಸಿ" ಎಂಬ ವಿವಾದಾತ್ಮಕ ಹೇಳಿಕೆಯನ್ನು ಮಲಯಾಳಂ ನಟ ಕೊಲ್ಲಂ ತುಳಸಿ ನೀಡಿದ್ದಾರೆ.

ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ವಿರೋಧಿಸಿ ಅವರು ಮಾತನಾಡುತ್ತಿದ್ದರು.

ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶ ನೀಡಬಾರದು, ಅದರಿಂದ ದೇವಾಳಯದ ಪಾವಿತ್ರ್ಯಕ್ಕೆ ಧಕ್ಕೆ ಬರುತ್ತದೆ ಎಂಬ ಕಾರಣಕ್ಕೆ ಈ ಪದ್ಧತಿಯನ್ನು ಎಷ್ಟೋ ಶತಮಾನಗಳಿಂದ ನಡೆಸಿಕೊಂಡು ಬಂದಿದ್ದೇವೆ. ಆದರೆ ಸುಪ್ರೀಂ ಕೋರ್ಟ್ ಇದ್ಯಾವುದನ್ನೂ ಪರಿಗಣಿಸದೆ, ಮಹಿಳೆಯರಿಗೆ ಪ್ರವೇಶ ನೀಡಲು ಅನುಮತಿ ನೀಡಿದೆ. ಇದು ಸರಿಯಲ್ಲ. ಸುಪ್ರೀಂ ಕೋರ್ಟ್ ತೀರ್ಪನ್ನು ಕೇಳಿ ಯಾವುದಾದರೂ ಮಹಿಳೆಯರು ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಬಂದರೆ ಅವರನ್ನು ಎರಡು ಭಾಗವಾಗಿ ಸೀಳಿ ಎಂದು ಅವರು ಆಕ್ರೋಶದಿಂದ ನುಡಿದರು.

Women coming to Sabarimala temple should be ripped in half says Malayalam Actor

'ಎರಡು ಭಾಗವಾಗಿ ಸೀಳಿದ ಮಹಿಳೆಯರ ದೇಹದಲ್ಲಿ ಒಂದು ಭಾಗವನ್ನು ದೆಹಲಿಗೆ ಮತ್ತು ಇನ್ನೊಂದು ಭಾಗವನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಕಚೇರಿಗೆ ಕಳಿಸಿ' ಎಂದರು.

800 ವರ್ಷಗಳಿಂದ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದ ದೇವಾಲಯದ ಆಡಳಿತ ಮಂಡಳಿಯ ನಿಯಮಕ್ಕೆ ಬದಲಾಗಿ, ಮಹಿಳೆಯರಿಗೆ ಪ್ರವೇಶಕ್ಕೆ ಅನುಮತಿ ನೀಡಿ ಸೆ.28 ರಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿತ್ತು. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಕೇರಳ ಸರ್ಕಾರ ಸ್ಪಷ್ಟಪಡಿಸಿದ ಮೇಲೆ ರಾಷ್ಟ್ರೀಯ ಅಯ್ಯಪ್ಪ ಭಕ್ತರ ಸಂಘಟನೆ(National Ayyappa Devotee association) ಯು ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸೋಮವಾರ ಮೇಲ್ಮನವಿ ಸಲ್ಲಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+