ಶಬರಿಮಲೆಗೆ ಹೊರಟ ಮಹಿಳೆಯರನ್ನು ತಡೆದ ಪ್ರತಿಭಟನಕಾರರು
ತಿರುವನಂತಪುರಂ, ಅಕ್ಟೋಬರ್ 17: ಕೇರಳದ ಶಬರಿಮಲೆಯ ಅಯ್ಯಪ್ಪ ದೇವಾಲಯವು ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಮೊದಲ ಬಾರಿಗೆ ತೆರೆದಿದ್ದು, ಮೊದಲ ದಿನವೇ ಪ್ರತಿಭಟನೆಯ ಕಾವು ತಾರಕಕ್ಕೇರಿದೆ.
ಅಯ್ಯಪ್ಪನ ದರ್ಶನಕ್ಕೆಂದು ಬರುತ್ತಿದ್ದ ಮಹಿಳೆಯರನ್ನು ಪ್ರತಿಭಟನಕಾರರು ತಡೆದ ಘಟನೆ ಇಲ್ಲಿನ ನಿಲಕ್ಕಳ್ ಶಿಬಿರದಲ್ಲಿ ನಡೆದಿದೆ. ಅಯ್ಯಪ್ಪ ದೇವಾಲಯದ ಸುತ್ತ ಬಿಗಿಬಂದೋಬಸ್ತ್ ನಿಯೋಜಿಸಲಾಗಿದ್ದು, 1000 ಕ್ಕೂ ಹೆಚ್ಚು ಪೊಲೀಸರು(ಮಹಿಳಾ ಪೊಲೀಸರೂ ಸೇರಿದಂತೆ) ದೇವಾಲಯದ ಆವರಣದಲ್ಲಿ ಬೀಡುಬಿಟ್ಟಿದ್ದಾರೆ.
ಸುಪ್ರೀಂ ತೀರ್ಪಿನ ನಂತರ ಮೊದಲ ಬಾರಿಗೆ ತೆರೆದ ಅಯ್ಯಪ್ಪ ದೇವಾಲಯ
ಪ್ರತಿಭಟನೆಯು ಹಿಂಸಾರೂಪ ಪಡೆಯುತ್ತಿದ್ದಂತೆಯೇ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ.
ಶಬರಿಮಲೆ ದೇವಳಕ್ಕೆ ಮಹಿಳೆಯರ ಪ್ರವೇಶ ನಿಷೇಧಕ್ಕೆ ಕಾರಣ ಗೊತ್ತೆ?
ಶಬರಿಮಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.
ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಲಿರುವ ರೇಷ್ಮಾ
Pamba: Police detain people protesting against the entry of women in the age group of 10-50 women to Kerala's #SabarimalaTemple pic.twitter.com/DLdoYMVz8J
— ANI (@ANI) October 17, 2018
#WATCH: Women protest in Nilakkal against the entry of women in the age group of 10-50 to #Sabarimala temple. #Kerala pic.twitter.com/GuxDZo0R7G
— ANI (@ANI) October 17, 2018