ವಯನಾಡಿನಲ್ಲಿ ನಿಂತು ಸಿಪಿಐಎಂ ಬಗ್ಗೆ ಸೊಲ್ಲೆತ್ತಲ್ಲ ಎಂದ ರಾಹುಲ್
ವಯನಾಡು, ಏಪ್ರಿಲ್ 04: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ತಮ್ಮ ಪರಿವಾರ ಸಮೇತ ದೇವರನಾಡಿನಲ್ಲಿ ಬೀಡುಬಿಟ್ಟಿದ್ದಾರೆ. ಕಲ್ಪೆಟ್ಟದಿಂದ ವಯನಾಡಿನ ಜಿಲ್ಲಾಧಿಕಾರಿಗಳ ಕಚೇರಿ ಬಂದು ಲೋಕಸಭೆಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ನಾಮಪತ್ರ ಸಲ್ಲಿಸುವ ವೇಳೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಹುಲ್ ಅವರ ಸೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉಪಸ್ಥಿತರಿದ್ದರು. ವಯನಾಡಿನ ಪ್ರಚಾರ ಕಾರ್ಯಕ್ಕೂ ಚಾಲನೆ ನೀಡಿದ ರಾಹುಲ್-ಪ್ರಿಯಾಂಕಾ ಅವರು ಅಪಾರ ಸಂಖ್ಯೆಯ ಕಾರ್ಯಕರ್ತರೊಡನೆ ರೋಡ್ ಶೋ ನಡೆಸಿ, ಮೆರವಣಿಗೆಯಲ್ಲಿ ಸಾಗಿಸಿದರು.
ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್, ನಾನು ದಕ್ಷಿಣ ಭಾರತದಲ್ಲಿ ಶಾಂತಿ, ಸೌಹಾರ್ದತೆ ಹಂಚಲು ಬಂದಿದ್ದೇನೆ. ಇದು ಸಿಪಿಎಂ ಕ್ಷೇತ್ರ ಅವರು ನನ್ನ ವಿರುದ್ಧ ವಾಗ್ದಾಳಿ ನಡೆಸುತ್ತಾರೆ. ಆದರೆ, ಅದು ಅನಿವಾರ್ಯ. ಆದರೆ, ನಾನು ಬೇಜಾರು ಮಾಡ್ಕೊಳ್ಳಲ್ಲ, ನೊಂದುಕೊಳ್ಳಲ್ಲ, ಕೋಪ ಮಾಡ್ಕೊಳ್ಳಲ್ಲ, ಅವರ ವಿರುದ್ಧ ಒಂದು ಮಾತಾಡಲ್ಲ. ನನ್ನ ಉದ್ದೇಶ ಶಾಂತಿ, ಸೌಹಾರ್ದತೆ ಸ್ಥಾಪನೆ ಎಂದಿದ್ದಾರೆ. ಇಲ್ಲಿನ ಜನರ ವಿರುದ್ಧ ಸಾಂಸ್ಕೃತಿಕವಾಗಿ, ಭಾಷೆ, ಸಿದ್ಧಾಂತ ದಾಳಿಯಾಗುತ್ತಿದೆ ಇದನ್ನು ತಪ್ಪಿಸಬೇಕಿದೆ. ಶಾಂತಿ ಸಂದೇಶವನ್ನು ಇಡೀ ಭಾರತಕ್ಕೆ ಹಂಚಬೇಕಿದೆ ಎಂದರು.

"ನಾವು ದಕ್ಷಿಣ ಭಾರತೀಯರನ್ನು ಕಡೆಗಣಿಸುತ್ತಿದ್ದೇವೆ ಎಂಬ ಭಾವನೆ ಅಲ್ಲಿನ ಜನರಲ್ಲಿದೆ. ಅಂಥ ಸನ್ನಿವೇಶವನ್ನು ಪ್ರಧಾನಿ ನರೇಂದ್ರ ಮೋದಿ ಸೃಷ್ಟಿಸಿದ್ದಾರೆ. ಈ ಭಾವನೆಯನ್ನು ಹೋಗಲಾಡಿಸಿ, ಅಲ್ಲಿನ ಜನರಲ್ಲಿ ಭದ್ರತೆಯ ಭಾವನೆ ಮೂಡಿಸಬೇಕಿದೆ. ಆದ್ದರಿಂದ ನಾನು ಅಲ್ಲಿಂದ ಚುನಾವಣೆಗೆ ನಿಂತಿದ್ದೇನೆ" ಎಂದು ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಸಂದರ್ಭದಲ್ಲಿ ಹೇಳಿದರು.
ನಾಮಪತ್ರ ಸಲ್ಲಿಕೆ ವೇಳೆ ರಾಹುಲ್ ಗಾಂಧಿ ಅವರೊಂದಿಗೆ ಕಾಂಗ್ರೆಸ್ ಮುಖಂಡರಾದ ರಮೇಶ್ ಚೆನ್ನಿತಾಲ, ಮುಕುಲ್ ವಾಸ್ನಿಕ್, ಕೆಸಿ ವೇಣುಗೋಪಾಲ್, ಉಮ್ಮನ್ ಚಾಂಡಿ, ಮುಳ್ಳಪಲ್ಲಿ ರಾಮಚಂದ್ರನ್ ಮುಂತಾದವರು ಜೊತೆಯಾಗಿದ್ದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications