ಗಾಯಕ ಯೇಸುದಾಸ್ ಪತ್ರಕ್ಕೆ ಸ್ಪಂದನೆ, ಪದ್ಮನಾಭ ದೇಗುಲ ಭೇಟಿಗೆ ಒಪ್ಪಿಗೆ
ತಿರುವನಂತಪುರಂ, ಸೆಪ್ಟೆಂಬರ್ 18: "ನಮಗೆಲ್ಲ ಯೇಸುದಾಸ್ ಅವರ ಹಿಂದುತ್ವದ ಮೇಲಿನ ನಂಬಿಕೆ ಬಗ್ಗೆ ಗೊತ್ತಿದೆ. ಈ ಬಗ್ಗೆ ಅವರು ಘೋಷಣೆಯನ್ನೇ ಮಾಡಿದ್ದಾರೆ. ಅವರು ದೇವಸ್ಥಾನಕ್ಕೆ ಭೇಟಿ ನೀಡುವುದರಲ್ಲಿ ಯಾವುದೇ ಆಕ್ಷೇಪವಿಲ್ಲ" ಎಂದು ತಿರುವನಂತಪುರಂ ಅನಂತಪದ್ಮನಾಭ ದೇವಾಲಯದ ಅಧಿಕಾರಿಗಳು ಹೇಳಿದ್ದಾರೆ.
ತಿರುವನಂತಪುರದಲ್ಲಿರುವ ಅನಂತ ಪದ್ಮನಾಭ ಸ್ವಾಮಿ ದೇವರ ಪೂಜೆಗೆ ಅವಕಾಶ ಮಾಡಿಕೊಡಬೇಕು ಎಂದು ಗಾಯಕ ಯೇಸುದಾಸ್ ಅವರು ದೇವಾಲಯದ ಆಡಳಿತ ಮಂಡಳಿಗೆ ಪತ್ರ ಬರೆದಿದ್ದರು. ಅದಕ್ಕೆ ಪ್ರತಿಕ್ರಿಯೆಯಾಗಿ ಮೇಲ್ಕಂಡ ಪ್ರತಿಕ್ರಿಯೆ ಬಂದಿದೆ.
ತಿರುವನಂತಪುರದಲ್ಲಿರುವ ಅನಂತ ಪದ್ಮನಾಭ ದೇಗುಲದಲ್ಲಿ ಹಿಂದೂ ಧರ್ಮದ ಬಗ್ಗೆ ನಂಬಿಕೆ ಇರುವವರನ್ನು ಮಾತ್ರ ಒಳಗೆ ಬಿಡಲಾಗುತ್ತದೆ. "ಗಾಯಕ ಯೇಸುದಾಸ್ ಅವರ ಹುಟ್ಟಿನಿಂದ ಕ್ರಿಶ್ಚಿಯನ್ನರು. ಅವರೊಂದು ಮನವಿ ಕಳಿಸಿದ್ದಾರೆ ಮತ್ತು ಹಿಂದೂ ಧರ್ಮದ ಬಗ್ಗೆ ಅವರಿಗಿರುವ ನಂಬಿಕೆ ಬಗ್ಗೆ ಅದರಲ್ಲಿ ತಿಳಿಸಿದ್ದಾರೆ" ಎಂದು ದೇವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ವಿ.ರತೀಸನ್ ಮಾಧ್ಯಮದ ಜತೆ ಮಾತನಾಡಿ, ಗಾಯಕ ಯೇಸುದಾಸ್ ಅವರು ಯಾವ ದಿನದಂದು ದೇವಾಲಯಕ್ಕೆ ಬರುವುದಾಗಿ ತಿಳಿಸಿಲ್ಲ. ಆದರೆ ಸಂದೇಶ ತಂದವರ ಪ್ರಕಾರ ವಿಜಯದಶಮಿಯಂದು ಬರಲು ಅಪೇಕ್ಷಿಸಿದ್ದಾರೆ. ಸೆಪ್ಟೆಂಬರ್ ಮೂವತ್ತಕ್ಕೆ ವಿಜಯದಶಮಿ ಇದೆ.
ನಮ್ಮ ನಿಯಮಗಳ ಪ್ರಕಾರ, ಯಾರಿಗೆ ಹಿಂದೂ ಧರ್ಮದ ಮೇಲೆ ನಂಬಿಕೆ ಇದೆಯೋ ಅವರು ದೇವಾಲಯಕ್ಕೆ ಬರಬಹುದು ಮತ್ತು ಪೂಜೆ ಸಲ್ಲಿಸಬಹುದು. ಅದರ ಮೇಲೆ ಯಾವುದೇ ನಿರ್ಬಂಧವಿಲ್ಲ ಎಂದು ಅವರು ತಿಳಿಸಿದ್ದಾರೆ.
ವಿದೇಶೀಯರು ಹಾಗೂ ಹಿಂದೂಯೇತರರು ದೇವಾಲಯದ ಒಳಗೆ ಬರುವ ಮುಂಚೆ ಹಿಂದೂ ಧರ್ಮದ ಬಗ್ಗೆ ತಮಗಿರುವ ನಂಬಿಕೆ ಬಗ್ಗೆ ಘೋಷಣೆ ಮಾಡಬೇಕು ಎಂಬ ನಿಯಮವಿದೆ ಎಂದು ಅಧಿಕಾರಿ ಹೇಳಿದ್ದಾರೆ.
ರೋಮನ್ ಕ್ಯಾಥೋಲಿಕ್ ಕುಟುಂಬಕ್ಕೆ ಸೇರಿದ ಗಾಯಕ ಯೇಸುದಾಸ್ ಅವರಿಗೆ ಈ ಹಿಂದೆ ಗುರುವಾಯೂರಿನ ಕೃಷ್ಣ ದೇಗುಲಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಆದರೆ ಯೇಸುದಾಸ್ ಅವರು ಶಬರಿಮಲೆಯ ಅಯ್ಯಪ್ಪ ದೇಗುಲ ಹಾಗೂ ಕರ್ನಾಟಕದ ಕೊಲ್ಲೂರಿನಲ್ಲಿರುವ ಮೂಕಾಂಬಿಕಾ ದೇಗುಲಕ್ಕೆ ಆಗಾಗ ಭೇಟಿ ನೀಡುತ್ತಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications