ತುಮಕೂರು; ಭೀಕರ ರಸ್ತೆ ಅಪಘಾತ, 12 ಸಾವು
ತುಮಕೂರು, ಮಾರ್ಚ್ 06 : ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬ್ಯಾಲದಕೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 12 ಜನರು ಮೃತಪಟ್ಟಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಶುಕ್ರವಾರ ಮುಂಜಾನೆ 3 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ. ಮೃತಪಟ್ಟವರು ತಮಿಳುನಾಡಿನ ಹೊಸೂರಿನವರು ಎಂದು ತಿಳಿದುಬಂದಿದ್ದು, ಧರ್ಮಸ್ಥಳ ಪ್ರವಾಸವನ್ನು ಮುಗಿಸಿ ವಾಪಸ್ ಆಗುತ್ತಿದ್ದರು.
ಎರಡು ತಿಂಗಳ ಬಳಿಕ ನೋಯ್ಡಾ-ಫರಿದಾಬಾದ್ ರಸ್ತೆ ಸಂಚಾರಕ್ಕೆ ಮುಕ್ತ
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ 4 ಯುವಕರು ಇದ್ದ ಕಾರು ಬಾಲದಕೆರೆ ಸಮೀಪ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಬಳಿಕ ಎದುರಿಗೆ ಬರುತ್ತಿದ್ದ ಟವೇರಾ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ, 7 ಸಾವು, 15 ಮಂದಿಗೆ ಗಾಯ
ಟವೇರಾದಲ್ಲಿದ್ದ 9 ಹಾಗೂ ಕಾರಿನಲ್ಲಿದ್ದ 3 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ.
ಮೃತಪಟ್ಟವರನ್ನು ಸಂದೀಪ್ (36), ಮಧು (26), ಸರಳಾ (32), ರಾಜೇಂದ್ರ (27), ತನುಜಾ (25), ಪ್ರಶನ್ಯಾ (14), ಹರ್ಷಿತಾ (12), ಶ್ವೇತಾ (32) ಎಂದು ಗುರುತಿಸಲಾಗಿದೆ. ಒಂದು ವರ್ಷದ ಹೆಣ್ಣು ಮಗು ಸಹ ಸ್ಥಳದಲ್ಲಿಯೇ ಮೃತಪಟ್ಟಿದೆ.
ಬಳ್ಳಾರಿ ಅಪಘಾತ ಪ್ರಕರಣ ಏನಾಯಿತು? ರವಿನಾಯ್ಕ ಮನೆಯಲ್ಲಿ ಮತ್ತೊಂದು ಸಾವು
ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Karnataka: At least 12 people lost their lives after two cars collided in Tumkur at around 3 am today. pic.twitter.com/GWe5mz08rm
— ANI (@ANI) March 6, 2020