ತುಮಕೂರು: ಹೃದಯಾಘಾತದಿಂದ ಹತ್ತನೇ ತರಗತಿ ವಿದ್ಯಾರ್ಥಿ ಸಾವು
ತುಮಕೂರು, ಫೆಬ್ರವರಿ 22: ಇತ್ತೀಚಿಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದರಲ್ಲೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ನಿಜಕ್ಕೂ ಆತಂಕಕಾರಿಯಾಗಿದೆ. ಆರೋಗ್ಯವಂತ ಮಕ್ಕಳು ಏಕಾಏಕಿ ಎದೆ ನೋವು ಕಾಣಿಸಿಕೊಂಡು ಕೊನೆಯುಸಿರೆಳೆಯುತ್ತಿರುವುದು ಪೋಷಕರಲ್ಲಿ ಆತಂಕ ಹೆಚ್ಚಿಸಿದೆ. ಇದೀಗ ಕರ್ನಾಟಕದಲ್ಲಿ ಮತ್ತೋರ್ವ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೃದಯಾಘಾತದಿಂದ ಚಿಕಿತ್ಸೆ ಫಲಕಾರಿಯಾಗದೇ ಹತ್ತನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದೆ. ಭೈರಾಪುರ ಗ್ರಾಮದ ಜಯರಾಂ ಅವರ ಪುತ್ರ ರಾಹುಲ್ (16) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಚಿಕ್ಕನಾಯಕನಹಳ್ಳಿ ಪಟ್ಟಣದ ಜಿಎಚ್ಎಸ್ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ರಾಹುಲ್ ನಿನ್ನೆ (ಫೆಬ್ರವರಿ 22) ಶುಕ್ರವಾರ ಶಾಲೆಗೆ ಹೋಗಿ ಮನೆಗೆ ವಾಪಸ್ ಬಂದಿದ್ದ. ಮನೆಯಲ್ಲೇ ಮಗಲಗಿದ್ದ ರಾಹುಲ್ಗೆ ರಾತ್ರಿ 9:30ರ ಸುಮಾರಿಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಪೋಷಕರು ಹುಳಿಯಾರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ರಾಹುಲ್ ಹುಳಿಯಾರಿನ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾನೆ.
ಎದೆ ಎತ್ತರಕ್ಕೆ ಬೆಳೆದ ಮಗನನ್ನು ಕಣ್ಣೇದುರೇ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ತೆಲಂಗಾಣ: ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ಇನ್ನು ಫೆಬ್ರವರಿ 21 ಗುರುವಾರ ತೆಲಂಗಾಣದಲ್ಲಿಯೂ ಕೂಡ ಇಂತಹದ್ದೇ ಘಟನೆ ನಡೆದಿದೆ. ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿನಿ ಎದೆ ನೋವಿನಿಂದ ಕುಸಿದು ಬಿದ್ದ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. 16 ವರ್ಷದ ಶ್ರೀನಿಧಿ ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

ಶ್ರೀನಿಧಿ ಶಾಲೆಗೆ ತೆರಳುವಾಗ ಏಕಾಏಕಿ ಎದೆ ನೋವು ಎಂದು ಕುಸಿದು ಬಿದ್ದಿದ್ದಾಳೆ. ಇದನ್ನು ಗಮನಿಸಿದ ಶಿಕ್ಷಕಿಯೊಬ್ಬರು ಕೂಡಲೇ ಆಕೆಗೆ ಪ್ರಥಮ ಚಿಕಿತ್ಸೆ ನೀಡಿ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಶ್ರೀನಿಧಿಯನ್ನು ಪರೀಕ್ಷಿಸಿದ ವೈದ್ಯರು ಸಿಪಿಆರ್ ಸೇರಿದಂತೆ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿದ್ದಾರೆ. ಆದರೆ, ಆಕೆ ಸ್ಪಂದಿಸದೇ ಇದ್ದಾಗ ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಆದರೆ ದುರಾದೃಷ್ಟವಶಾತ್ ಅದಾಗಲೇ ಶ್ರೀನಿಧಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಳೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications