ತುಮಕೂರು: ಸಿದ್ಧಗಂಗಾ ಮಠದ ಜಾತ್ರೆಗೆ ಬಂದಿದ್ದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಮೂವರ ಬಂಧನ
ತುಮಕೂರು, ಮಾರ್ಚ್ 07: ಕಲಪತರು ನಾಡಿನ ಪ್ರಸಿದ್ಧ ಸಿದ್ದಗಂಗಾ ಮಠದ ಜಾತ್ರೆಗೆ ಬಂದಿಂದ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಜಾತ್ರೆಗೆ ಬಂದಿದ್ದ ಬಾಲಕಿಯನ್ನು ಕರೆದೊಯ್ದು ಮಠದ ಸಮೀಪದ ಬಂಡೆಪಾಳ್ಯದ ಮನೆಯೊಂದರಲ್ಲಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ.
ಪ್ರಕರಣ ಸಂಬಂಧ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಬಂಡೆಪಾಳ್ಯದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಅಮೋಘ, ಹನುಮಂತ, ಪ್ರತಾಪ್ ಎಂದು ಗುರುತಿಸಲಾಗಿದೆ. ಪೊಲೀಸರು ಪೋಕ್ಸೋ ಕಾಯ್ದೆ ಪ್ರಕಾರ ಎಫ್ಐಆರ್ ದಾಖಲಿಸಿ, ತನಿಖೆ ಮುಂದುವರಿಸಿದ್ದಾರೆ.

ಬೆದರಿಕೆ ಹಾಕಿ ಅತ್ಯಾಚಾರ ಮಾಡಿದ ಆರೋಪಿಗಳು
ಸಿದ್ದಗಂಗಾ ಮಠದಲ್ಲಿ ಪ್ರಸಿದ್ದ ಜಾತ್ರೆ ನಡೆಯುತ್ತಿದ್ದು, ಬಾಲಕಿ ತನ್ನ ಸ್ನೇಹಿತನ ಜೊತೆಗೆ ಜಾತ್ರೆಗೆ ಬಂದಿದ್ದಾರೆ. ಈ ವೇಳೆ ಪಕ್ಕದ ಬೆಟ್ಟದ ಹತ್ತಿರ ಮಾತನಾಡುತ್ತಾ ಕುಳಿತಿದ್ದಾರೆ. ಇಬ್ಬರು ಜೊತೆಗಿರುವ ದೃಶ್ಯಗಳನ್ನು ವಿಡಿಯೋ ಮಾಡಿಕೊಂಡ ಆರೋಪಿಗಳು ಅದನ್ನು ಬಾಲಕಿಗೆ ತೋರಿಸಿ ಬೆದರಿಕೆ ಹಾಕಿದ್ದಾರೆ.
ಜೊತೆಗಿದ್ದ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಬಾಲಕಿಯನ್ನು ಬೆದರಿಸಿದ್ದಾರೆ. ತಾವು ಹೇಳಿದಂತೆ ಕೇಳದಿದ್ದರೇ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿದ್ದು, ಬಲವಂತವಾಗಿ ಬಂಡೆಪಾಳ್ಯದ ಮನೆಯೊಂದಕ್ಕೆ ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ. ಘಟನೆ ಬಳಿಕ ಮಠದ ಬಳಿಯಲ್ಲಿ ಬಿಟ್ಟು ಹೋಗಿದ್ದಾರೆ. ಬಾಲಕಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಮನೆಯವರು ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಾಲಕಿಗೆ ಚಿಕಿತ್ಸೆ ನೀಡಲಾಗಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications