Get Updates
Get notified of breaking news, exclusive insights, and must-see stories!

ರಾಗಿಣಿ, ಸಂಜನಾ ಜಾಮೀನಿಗಾಗಿ ಬಾಂಬ್ ಬೆದರಿಕೆ ಪ್ರಕರಣ: ಆರೋಪಿಗಳು ವಶಕ್ಕೆ

ತುಮಕೂರು, ಅಕ್ಟೋಬರ್ 20: ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ಮತ್ತು ಸಂಜನಾಗೆ ಜಾಮೀನು ಕೊಡದಿದ್ದರೆ, ಬಾಂಬ್ ಹಾಕುತ್ತೇವೆ ಎಂದು ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಡ್ರಗ್ಸ್ ಕೇಸಿನಲ್ಲಿ ಅರೆಸ್ಟ್ ಆಗಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ಅವರಿಗೆ ಜಾಮೀನು ನೀಡದೆ ಇದ್ದರೆ, ಸಿಟಿ ಸಿವಿಲ್ ಕೋರ್ಟ್ ಮತ್ತು ಕಮೀಷನರ್ ಆಫೀಸಿಗೆ ಬಾಂಬ್ ಹಾಕುತ್ತೇವೆ ಎಂದು ನಿನ್ನೆ ಬೆದರಿಕೆ ಪತ್ರವನ್ನು ಬರೆಯಲಾಗಿತ್ತು. ಜೊತೆಗೆ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶ, ಕಮೀಷನರ್ ಕಮಲ್ ಪಂಥ್, ಜಂಟಿ ಪೊಲೀಸ್ ಆಯುಕ್ತ, ಸಂದೀಪ್ ಪಾಟೀಲ್ ಮತ್ತು ಡಿಸಿಪಿ ರವಿಕುಮಾರ್ ಅವರಿಗೆ ಪತ್ರ ಬರೆದಿದ್ದರು.

ಈಗ ಎನ್.ಡಿ.ಪಿ.ಎಸ್ ಕೋರ್ಟ್ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪಟೂರು ಮೂಲದ ರಾಜಶೇಖರ್ ಹಾಗೂ ಗುಬ್ಬಿ ತಾಲ್ಲೂಕು ಹಾಗಲವಾಡಿ ಮೂಲದ ವೇದಾಂತ ಎಂಬುವವರನ್ನು ಬಂಧನ ಮಾಡಲಾಗಿದೆ.

4 Arrested By Police Over Magistrate Gets Threat Letter Demanding Bail for Ragini And Sanjjana

ಕುಟುಂಬ ಕಲಹದ ದ್ವೇಷ ಕಾರಣದಿಂದ ಬಾಂಬ್ ಬೆದರಿಕೆ ಹಾಕಲಾಗಿದೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ. ರಾಜಶೇಖರ್ ಹಾಗೂ ರಮೇಶ್ ಇಬ್ಬರು ಒಂದೇ ಕುಟುಂಬದಲ್ಲಿ ಮದುವೆಯಾಗಿದ್ದರು.

ರಮೇಶ್ ಗೆ ತೊಂದರೆ ಕೊಡಲೆಂದೇ ರಾಜಶೇಖರ್ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ರಾಜಶೇಖರ್ ಹಾಗೂ ರಮೇಶ್ ನಡುವೆ ಆಸ್ತಿ ವಿಚಾರವಾಗಿ ಬಹಳ ದಿನಗಳಿಂದ ಜಗಳವಿತ್ತು.

ರಮೇಶ್ ನನ್ನು ಸಿಲುಕಿಸಲು ರಾಜಶೇಖರ್ ಪ್ಲಾನ್ ಮಾಡಿ ಪತ್ರ ಬರೆದಿದ್ದಾನೆ. ರಾಜಶೇಖರ್ ಅವರು ವೇದಾಂತ್ ಎಂಬುವವನ ಕೈಯಲ್ಲಿ ಪತ್ರ ಬರೆಸಿ, ಚೇಳೂರು ಅಂಚೆ ಕಚೇರಿಯಿಂದ ಪೋಸ್ಟ್ ಮಾಡಿದ್ದಾನೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+