ತುಮಕೂರು: ಬಾಲಕಿಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ಸಾವು
ತುಮಕೂರು, ಜನವರಿ 01: ಇಂದು (ಜನವರಿ 1) ಹೊಸ ವರ್ಷ ಹಿನ್ನೆಲೆಯಲ್ಲಿ ಒಳ್ಳೆಯದಾಗಲಿ ಎಂದು ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ತೆರಳುತ್ತಿದ್ದವರು ಮಸಾಣ ಸೇರಿದ್ದಾರೆ.
ಕಾರಿಗೆ ಅಡ್ಡ ಬಂದ ಬಾಲಕಿಯನ್ನು ಉಳಿಸಲು ಹೋಗಿ ಒಂದೇ ಕುಟುಂಬದ ಐದು ಜನರು ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಗವಿಮಠದ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಸಿದ್ದೋಜಿರಾವ್, ಉಷಾಭಾಯಿ, ಕೀರ್ತನಾ, ಹಿತೇಶ್, ಭುವನಾ ಮೃತ ದುರ್ದೈವಿಗಳು. ಕಾರಿಗೆ ಅಡ್ಡ ಬಂದ ಬಾಲಕಿಯನ್ನು ರಕ್ಷಿಸಲು ಹೋಗಿ ನಿಂತಿದ್ದ ಟ್ಯಾಂಕರ್ ಹಿಂಬದಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಒಂದೇ ಕುಟಂಬದ ಐವರು ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ಇಂದು ಹೊಸ ವರ್ಷ ಹಿನ್ನೆಲೆಯಲ್ಲಿ ಕೊರಟಗೆರೆಯ ಗೊರವನಹಳ್ಳಿ ಲಕ್ಷ್ಮೀ ದೇವಸ್ಥಾನನಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಕುಣಿಗಲೆ ಪೊಲೀಸ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.












Click it and Unblock the Notifications