ತುಮಕೂರು : ಭೀಕರ ರಸ್ತೆ ಅಪಘಾತ, 6 ಸಾವು
ತುಮಕೂರು, ಜೂನ್ 28 : ತುಮಕೂರು ಜಿಲ್ಲೆಯ ಕುಣಿಗಲ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ. ಅಮೃತೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕುಣಿಗಲ್ ತಾಲೂಕಿನ ಸಿದ್ದಾಪುರ ಬಳಿ ಕಾರು ಪಲ್ಟಿಯಾಗಿ 6 ಜನರು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಯಡಿಯೂರಿಂದ ಬೆಂಗಳೂರಿಗೆ ತೆರಳುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು, ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

ಮೃತಪಟ್ಟವರನ್ನು ಬೆಂಗಳೂರಿನ ಸಂಜಯ ನಗರ ನಿವಾಸಿಗಳು ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳು ಸೇರಿ 11 ಮಂದಿ ಕಾರಿನಲ್ಲಿದ್ದರು. ಇವರಲ್ಲಿ 4 ಮಹಿಳೆಯರು ಸೇರಿ 6 ಜನರು ಮೃತಪಟ್ಟಿದ್ದಾರೆ.
ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯಕ್ಕೆ ಹೋಗಿ ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ. ಅಮೃತೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೃತಪಟ್ಟವರ ಹೆಸರು ಇನ್ನೂ ತಿಳಿದುಬಂದಿಲ್ಲ.












Click it and Unblock the Notifications