ತುಮಕೂರು: ಅಳಿಯ ಸ್ನೇಹಿತರಿಂದಲೇ 70 ವರ್ಷದ ವೃದ್ಧೆ ಮೇಲೆ ಸಾಮೂಹಿಕ ಅತ್ಯಾಚಾರ
ತುಮಕೂರು, ಮೇ. 29: ತುಮಕೂರು ಜಿಲ್ಲೆಯ ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 70 ವರ್ಷದ ದಲಿತ ವೃದ್ಧೆ ಮೇಲೆ ಆಕೆಯ ಅಳಿಯನ ಸ್ನೇಹಿತರು ಸಾಮೂಹಿಕ ಅತ್ಯಾಚಾರವೆಸಗಿರುವ ಹೀನ ಕೃತ್ಯ ನಡೆದಿದೆ. ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
70 ವರ್ಷದ ವೃದ್ಧೆ ನೀಡಿದ ದೂರಿನ ಪ್ರಕಾರ, ಮೇ 21 ರಂದು ತನ್ನ ಮಗಳು ಮತ್ತು ಅಳಿಯ ರಘು ಅವರೊಂದಿಗೆ ತನ್ನ ನಿವಾಸದಲ್ಲಿದ್ದಾಗ ಘಟನೆ ಸಂಭವಿಸಿದೆ. ತನ್ನ ಮಗಳು ಸಂಬಂಧಿಕರ ಮನೆಗೆ ಹೋಗಿದ್ದಳು ಮತ್ತು ಅಳಿಯ ರಘು ತನ್ನ ಇಬ್ಬರು ಸ್ನೇಹಿತರಾದ ರಾಜೇಶ್ ಮತ್ತು ಮಂಜುನಾಥ್ ಅವರೊಂದಿಗೆ ರಾತ್ರಿ 10 ಗಂಟೆಗೆ ಕುಡಿದ ಅಮಲಿನಲ್ಲಿ ಮನೆಗೆ ಬಂದರು ಎಂದು ಅವರು ಆರೋಪಿಸಿದ್ದಾರೆ.

ತನ್ನ ಅಳಿಯ ರಘು ನಿದ್ರೆಗೆ ಜಾರಿದಾಗ ಆತನ ಇಬ್ಬರು ಸ್ನೇಹಿತರು ವೃದ್ಧೆಗೆ ಬೆದರಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಮರುದಿನ, ಪ್ರಜ್ಞಾಹೀನರಾಗಿದ್ದ ಅವರನ್ನು ನೋಡಿ ಅತ್ತೆ ಮಲಗಿದ್ದಾಳೆಂದು ಭಾವಿಸಿ ಅಳಿಯ ಕೆಲಸಕ್ಕೆ ಹೋಗಿದ್ದಾರೆ. ಹಲವು ಗಂಟೆಗಳ ನಂತರ ಆಕೆ ಎಚ್ಚರಗೊಳ್ಳದಿದ್ದಾಗ ನೆರೆಹೊರೆಯವರು ಬಂದು ನೋಡಿದಾಗ ವೃದ್ಧೆಯ ಮೇಲೆ ದೈಹಿಕವಾಗಿ ಹಲ್ಲೆಯಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ಆಕೆಯನ್ನು ಚಿಕಿತ್ಸೆಗಾಗಿ ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಮೇ 26 ರಂದು ಇಬ್ಬರ ಮೇಲೆ ದೂರು ದಾಖಲಾಗಿದ್ದು, ಪೊಲೀಸರು ಐಪಿಸಿ 376 (ಅತ್ಯಾಚಾರ), 506 (ಜೀವ ಬೆದರಿಕೆ) ಮತ್ತು ದೌರ್ಜನ್ಯ ತಡೆ ಕಾಯ್ದೆ 2015 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಘಟನೆಯನ್ನು ಯಾರಿಗಾದರೂ ಬಹಿರಂಗಪಡಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರೋಪಿಗಳು ಮಹಿಳೆಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಆಕೆ ದೂರಿನಲ್ಲಿ ಆರೋಪಿಸಿದ್ದಾರೆ.

ವೃದ್ಧೆಯ ದೂರಿನ ಆಧಾರದ ಮೇಲೆ ನಾವು ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಕುಣಿಗಲ್ ಪೊಲೀಸ್ ನಿರೀಕ್ಷಕ ಗುರು ಪ್ರಸಾದ್ ತಿಳಿಸಿದ್ದಾರೆ. ಚಿಕಿತ್ಸೆ ಬಳಿಕ ವೃದ್ಧೆಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications