ಕೊರಟಗೆರೆ: ಕೋಳಿ ತಿನ್ನಲು ಬಂದು ಶೆಡ್ನಲ್ಲಿ ಬಂಧಿಯಾದ ಚಿರತೆ
ತುಮಕೂರು, ಜೂನ್ 16: ಆಹಾರ ಅರಸಿ ಊರಿಗೆ ಬಂದ ಚಿರತೆಯೊಂದಕ್ಕೆ ಭೂರಿ ಭೋಜನವೇ ಸಿಕ್ಕಿದೆ.
ಕೊರಟಗೆರೆ ತಾಲ್ಲೂಕಿನ ತುಂಬಾಡಿ ಗ್ರಾಮಕ್ಕೆ ಶುಕ್ರವಾರ ರಾತ್ರಿ ಬಂದಿದ್ದ ಚಿರತೆ ಕೋಳಿ ಶೆಡ್ಗೆ ನುಗ್ಗಿತ್ತು. ನೂರಾರು ಕೋಳಿಗಳಿದ್ದ ಶೆಡ್ನಲ್ಲಿ ಕೆಲವೊಂದಿಷ್ಟು ಕೋಳಿಗಳು ಚಿರತೆಗೆ ಆಹಾರವಾದವು.
ಬೆಳಿಗ್ಗೆ ಶೆಡ್ ಬಳಿ ಬಂದ ಮಾಲೀಕರಿಗೆ ಒಳಗೆ ಚಿರತೆ ಇರುವುದು ಕಂಡುಬಂದಿದೆ. ಕೂಡಲೇ ಅಲ್ಲಿ ಜಮಾಯಿಸಿದ ಸ್ಥಳೀಯರು ಶೆಡ್ ಬಾಗಿಲು ಹಾಕಿ ಚಿರತೆಯನ್ನು ಕೂಡಿ ಹಾಕಿದ್ದಾರೆ.

ಶೆಡ್ನ ಬೇಲಿನ ಕಬ್ಬಿಣದ ಶೀಟ್ ಸಂದಿಯಿಂದ ಒಳಗೆ ಬಂದಿದ್ದ ಚಿರತೆ, ಈಗ ಕಿಟಕಿಗಳಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದು, ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.
ಹಾಸನದಿಂದ ಅರಣ್ಯ ಇಲಾಖೆಯ ನುರಿತ ಸಿಬ್ಬಂದಿ ತಂಡ ಚಿರತೆಯನ್ನು ಸೆರೆಹಿಡಿಯಲು ಬರುತ್ತಿದೆ. ಸ್ಥಳದಲ್ಲಿ ಪೊಲೀಸರು, ಅರಣ್ಯಾಧಿಕಾರಿಗಳು ಚಿರತೆ ದಾಳಿ ನಡೆಸುವ ಅಪಾಯವಿರುವುದರಿಂದ ಜನರನ್ನು ನಿಯಂತ್ರಿಸುವ ಪ್ರಯತ್ನದಲ್ಲಿದ್ದಾರೆ.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications