ಪೊಲೀಸರ ನಿರ್ಲಕ್ಷ್ಯ: ಕಾಮುಕರ ಪಾಲಾಗುತ್ತಿರೋ ಅರೆಹುಚ್ಚಿ
ಪಾವಗಡ, ಸೆಪ್ಟೆಂಬರ್ 12: ಮಾನಸಿಕ ಸ್ಥಿಮಿತತೆ ಕಳೆದುಕೊಂಡು ಓಡಾಡುತ್ತಿದ್ದ ಹುಡುಗಿಯೊಬ್ಬಳಿಗೆ ಕಿಡಿಗೇಡಿಗಳು ಕುಡಿಸಿ, ಸಿಗರೇಟು ಸೇದಿಸಿದ್ದಲ್ಲದೆ, ಆಕೆಯನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳಲು ಯತ್ನಿಸಿದಂಥ ಅಮಾನುಷ ಘಟನೆ ಪಾವಗಡದಲ್ಲಿ ನಡೆದಿದೆ.
ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ವಿಚಾರ ಇದಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕಿರುವ ಪೊಲೀಸರೂ ಸುಮ್ಮನೇ ಕುಳಿತಿರುವುದು ನಾಗರಿಕರ ಅಸಹನೆಗೆ ಕಾರಣವಾಗಿದೆ.
ಇದರ ಪರಿಣಾಮವಾಗಿ,ಆಕೆಗೆ ಅರಿವಿಲ್ಲದಂತೆ ಆಕೆಯ ಮೇಲೆ ಲೈಂಗಿಕ ಆಕ್ರಮಣಗಳು ನಡೆಯುತ್ತಿವೆ ಎಂಬುದು ಇಲ್ಲಿನ ನಾಗರಿಕರ ಅಳಲು.

ದಯನೀಯ ಪರಿಸ್ಥಿತಿ: ಹುಚ್ಚಿಯಾಗಿರುವ ಆ ಯುವತಿ, ಸಿಕ್ಕ ಸಿಕ್ಕವರ ಹತ್ತಿರ ಹೋಗಿ ನನಗೆ ಹತ್ತು ರು. ಕೊಡಿ ನಿಮಗೆ ಮುತ್ತು ಕೊಡುತ್ತೇನೆ ಎಂದು ಕೇಳುತ್ತಿದ್ದಾಳೆ. ಇದು ಕಾಮುಕರಿಗೆ ತಮ್ಮ ದುಶ್ಚಟಗಳನ್ನು ತೋರಲು ಹೊಸ ಅವಕಾಶ ಮಾಡಿಕೊಟ್ಟಿದೆ.

ಪೊಲೀಸರ ನಿರ್ಲಕ್ಷ್ಯ: ಮಂಗಳವಾರ ರಾತ್ರಿ ಎಂಟು ಜನರ ಗ್ಯಾಂಗ್ ಒಂದು ಈ ಆಟೋದಲ್ಲಿ ಕರೆದುಕೊಂಡು ಹೋಗಿದೆ. ಇದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ, ಪೊಲೀಸರು ಇದು ನಮ್ಮ ಇಲಾಖೆ ಬರುವುದಿಲ್ಲ ಎಂದು ವಿಷಯವನ್ನು ತಮ್ಮ ಗಮನಕ್ಕೆ ತಂದವರನ್ನೇ ಬೈದು ಕಳುಹಿಸಿದ್ದಾರೆನ್ನಲಾಗಿದೆ.
ಸ್ಥಳೀಯರ ಮನವಿ: ಇಂಥ ಘಟನೆಗಳು ಆ ಯುವತಿಯ ಬಳಿ ಆಗಾಗ ನಡೆಯುತ್ತಲೇ ಇರುವುದರಿಂದ ಆಕೆಯನ್ನು ರಕ್ಷಿಸಲು ಸಂಬಂಧಪಟ್ಟ ಇಲಾಖೆಯೇ ಮುಂದೆ ಬರಬೇಕೆಂದು ಸ್ಥಳೀಯರು ಕೇಳಿಕೊಳ್ಳುತ್ತಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications