ಕರ್ಣಾಟಕ ಬ್ಯಾಂಕ್ ಗುಬ್ಬಿ ಗೇಟ್ ಎಟಿಎಂನಲ್ಲಿ ಹಣ ಕದ್ದಿದ್ದವರು ಸಿಕ್ಕಿಬಿದ್ರು
ಮೂರು ತಿಂಗಳ ಹಿಂದೆ ತುಮಕೂರಿನ ಗುಬ್ಬಿ ಗೇಟ್ ಕರ್ಣಾಟಕ ಬ್ಯಾಂಕ್ ಎಟಿಎಂನಲ್ಲಿ ಹಣ ಕಳವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ತುರುವೇಕೆರೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ
ತುಮಕೂರು, ಏಪ್ರಿಲ್ 18: ಎಟಿಎಂನಲ್ಲಿ ಹಣ ಕಳವು ಮಾಡಿದ್ದ ಆರೋಪಿಗಳು ಮೂರು ತಿಂಗಳ ನಂತರ ಸಿಕ್ಕಿಬಿದ್ದಿದ್ದಾರೆ. ತುಮಕೂರು ನಗರದ ಗುಬ್ಬಿಗೇಟ್ ಹತ್ತಿರ ಕರ್ಣಾಟಕ ಬ್ಯಾಂಕ್ ಎಟಿಎಂನಿಂದ 19 ಲಕ್ಷ ರುಪಾಯಿ ನಗದು ದೋಚಿದ್ದ ಆರೋಪಿಗಳು ಇದೀಗ ತುರುವೇಕೆರೆ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದಾರೆ.
ಡಾಬಸ್ ಪೇಟೆ ಸಮೀಪವಿರುವ ಚಿಕ್ಕಬಿದಿರೆ ಕಲ್ಲಿನ ಪ್ರಭು, ಚನ್ನರಾಯಪಟ್ಟಣ ಕಿರಿಸಾವೆಯ ಮೋಹನ್, ಅರಕಲಗೂಡು ಬನವಾಸೆಯ ಸ್ವಾಮಿ, ಬೆಂಗಳೂರು ಪೀಣ್ಯದ ಪುನೀತ, ಶಿರಾ ಕಳ್ಳಂಬೆಳ್ಳದ ರಘು ಬಂಧಿತರು. ತುರುವೇಕೆರೆಯ ಜಮೀನೊಂದರ ಬಳಿ ಪೊಲೀಸರಿಗೆ ಆರೋಪಿಗಳು ಸಿಕ್ಕಿಬಿದ್ದಿದ್ದು, ವಿಚಾರಣೆ ವೇಳೆ ಮಾಹಿತಿ ಬಾಯಿ ಬಿಟ್ಟಿದ್ದಾರೆ.[ತುಮಕೂರಿನ ಕರ್ಣಾಟಕ ಬ್ಯಾಂಕ್ ಎಟಿಎಂ ನಲ್ಲಿ ಹಣ ಕಳವು]

ಆರೋಪಿಗಳಿಂದ ಕಬ್ಬಿಣ ತುಂಡರಿಸುವ ಕಟರ್, ಲಾಂಗು ವಶಪಡಿಸಿಕೊಳ್ಳಲಾಗಿದೆ. ತುಮಕೂರಿನ ಗುಬ್ಬಿ ಗೇಟ್ ಎಟಿಎಂನಲ್ಲಿ ಹಣ ಕಳವು ಮಾಡುವ ಮುನ್ನ ಆರೋಪಿಗಳು ಹನುಮಂತಪುರದ ಎಟಿಎಂ ದರೋಡೆಗೆ ಯತ್ನಿಸಿದ್ದರು. ಆದರೆ ಅಲ್ಲಿ ಜನರು ಇವರನ್ನು ಕಂಡು ಕಿರುಚಿದ್ದರಿಂದ ಅಲ್ಲಿಂದ ಹೊರಟುಬಂದು, ಗುಬ್ಬಿ ಗೇಟ್ ಎಟಿಎಂನಲ್ಲಿ ಕಳವು ನಡೆಸಿದ್ದಾಗಿ ಬಾಯಿ ಬಿಟ್ಟಿದ್ದಾರೆ.
ಈ ಕಳವು ಪ್ರಕರಣದಲ್ಲಿ ವಿವಿಧ ಹೆಸರು ಕೇಳಿಬಂದಿದ್ದವು. ಆರೋಪಿಗಳನ್ನು ಆಗಲೇ ಬಂಧಿಸಲಾಗಿದೆ ಎಂಬ ಸುದ್ದಿ ಕೂಡ ಹರಿದಾಡಿತ್ತು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications