ಕಾರ್ಯಕರ್ತರ ಕಾವು ತಾಗಿದ ಮೇಲೆ ಸೊಗಡು ಪರ ಸುರೇಶ್ ಗೌಡ ಬ್ಯಾಟಿಂಗ್!
ತುಮಕೂರು, ಏಪ್ರಿಲ್ 7: ತುಮಕೂರು ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರದ ಬೆಂಕಿ ಇಡೀ ಜಿಲ್ಲೆಯಲ್ಲೇ ಕೇಸರಿ ಪಕ್ಷಕ್ಕೆ ಬಿಸಿ ತಾಗಿಸುವಂತೆ ಕಾಣಿಸುತ್ತಿದೆ. ಸೊಗಡು ಶಿವಣ್ಣ ಹಾಗೂ ಜಿ.ಎಸ್.ಬಸವರಾಜ್ ಮಧ್ಯೆ ಲಿಂಗಾಯತ ಮುಖಂಡರು ಮಾಡಿಸಿದ ಸಂಧಾನ ಮೇಲ್ನೋಟಕ್ಕೆ ಮಾತ್ರವೇ ಎಂಬ ಅನುಮಾನ ವ್ಯಕ್ತವಾಗುವಂಥ ಘಟನೆ ಶುಕ್ರವಾರ ನಡೆದಿದೆ.
ಅಂದ ಹಾಗೆ, ಬೆಂಗಳೂರಿನ ರಮಣಶ್ರೀ ಕ್ಯಾಲಿಫೋರ್ನಿಯಾದಲ್ಲಿ ಬಿಜೆಪಿ ಸಭೆಯೊಂದಿತ್ತು. ಅದರಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳ ಅಧ್ಯಕ್ಷರು, ಪ್ರಮುಖ ಮುಖಂಡರನ್ನು ಕರೆಯಲಾಗಿತ್ತು. ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಸಂತೋಷ್ ಜೀ ಸೇರಿದಂತೆ ಪ್ರಮುಖ ನಾಯಕರು ಕೂಡ ಈ ಸಭೆಯಲ್ಲಿ ಇದ್ದರು.
ಈ ಸಭೆಯಲ್ಲಿ ಭಾಗವಹಿಸುವವರಿಗೆ ಪಾಸ್ ವಿತರಿಸಲಾಗಿತ್ತು. ಈಗಾಗಲೇ ತಿಳಿದಿರುವಂತೆ ತುಮಕೂರಿನಲ್ಲಿ ಸೊಗಡು ಶಿವಣ್ಣ ಮೂಲ ಬಿಜೆಪಿ ಬಣ ಹಾಗೂ ಜ್ಯೋತಿ ಗಣೇಶ್- ಜಿ.ಎಸ್.ಬಸವರಾಜು ವಲಸೆ ಬಣ ಎಂಬುದು ಗೆರೆ ಕೊಯ್ದಂತೆ ಆಗಿದೆ. ಸಭೆಯ ಪಾಸ್ ವಿತರಣೆ ವಿಚಾರವಾಗಿ ಶಿವಣ್ಣ ಬಣದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮಗೆ ಸರಿಯಾದ ಪ್ರಾಶಸ್ತ್ಯ ದೊರೆತಿಲ್ಲ ಎಂಬ ಅಸಮಾಧಾನ ಹೊರ ಹಾಕಿದ್ದಾರೆ.

ಸುರೇಶ್ ಗೌಡರಿಗೆ ಬಿಸಿ ತಾಗಿತು
ಈ ಎಲ್ಲ ಬೆಳವಣಿಗೆ ಮಧ್ಯೆ ಶಿವಣ್ಣ ವಿಚಾರವಾಗಿ ನಡೆಯುತ್ತಿರುವ ಈಚೆಗಿನ ಬೆಳವಣಿಗೆಯ ಕಾವು ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಅವರಿಗೆ ತಟ್ಟಿದೆ. ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣೆ ಪ್ರಚಾರ ಕೈಗೊಳ್ಳುವ ವೇಳೆ, ಟಿಕೆಟ್ ಕೊಡಿಸಲು ಸೊಗಡು ಶಿವಣ್ಣ ಬೆಂಬಲಕ್ಕೆ ನೀವು ನಿಲ್ಲದಿದ್ದರೆ ನಮ್ಮ ಬೆಂಬಲ ನಿಮಗಿಲ್ಲ ಎಂದು ಬಿಜೆಪಿಯ ಕೆಲ ಮುಖಂಡರು ನೇರವಾಗಿಯೇ ಸುರೇಶ್ ಗೌಡರಿಗೆ ಹೇಳಿದ್ದಾರೆ.

ರಮಣಶ್ರೀ ಕ್ಯಾಲಿಫೋರ್ನಿಯಾಕ್ಕೆ ಧಾವಿಸಿದ್ದಾರೆ
ಯಾವಾಗ ಇಂಥದ್ದೊಂದು ಮುಜುಗರದ ಬೆಳವಣಿಗೆ ಎದುರಿಸಬೇಕಾಯಿತೋ ಎಚ್ಚೆತ್ತುಕೊಂಡ ಸುರೇಶ್ ಗೌಡ, ಬೆಂಗಳೂರಿನ ರಮಣಶ್ರೀ ಕ್ಯಾಲಿಫೋರ್ನಿಯಾಕ್ಕೆ ಧಾವಿಸಿದ್ದಾರೆ. ಮೊದಲಿಗೆ ಶಿವಣ್ಣನಿಗೆ ಟಿಕೆಟ್ ಅನ್ನೋದು ಖಾತ್ರಿ ಪಡಿಸಿ. ಇಲ್ಲದಿದ್ದರೆ ತುಮಕೂರು ಜಿಲ್ಲೆಯ ಎಲ್ಲ ಕಡೆ ಇರುವ ಮೂಲ ಬಿಜೆಪಿ ವರ್ಸಸ್ ವಲಸಿಗರು ಎಂಬ ಬೆಂಕಿ ದೊಡ್ಡದಾಗುತ್ತದೆ. ಅದರಲ್ಲಿ ಬಿಜೆಪಿ ಸುಟ್ಟು ಹೋಗುತ್ತದೆ ಎಂದು ಹೇಳಿದ್ದಾರೆ.

ಸಮಾಧಾನ ಪಡಿಸಿದ ಹಿರಿಯ ನಾಯಕರು
ಈ ಸಂದರ್ಭದಲ್ಲಿ ಅಲ್ಲಿದ್ದ ಬಿಜೆಪಿಯ ಪ್ರಮುಖ ನಾಯಕರೊಬ್ಬರು, ಈ ಬಗ್ಗೆ ಮಾತನಾಡುವುದಕ್ಕೆ ಈಗಾಗಲೇ ತುಮಕೂರಿನಿಂದ ಬಂದವರಿದ್ದಾರೆ. ಅವರು ಮಾತನಾಡಿ, ಮುಗಿಸಲಿ. ಆ ನಂತರ ನೀವು ಏನು ಹೇಳುತ್ತೀರೋ ಅದನ್ನು ಕೇಳೋಣ. ಆವರೆಗೆ ಸ್ವಲ್ಪ ತಾಳ್ಮೆಯಿಂದ ಕಾಯುವಂತೆ ತಿಳಿಸಿದ್ದಾರೆ.

ಇಡೀ ಜಿಲ್ಲೆಯಲ್ಲಿ ಬಿಜೆಪಿಗೆ ಬೆಂಕಿ
ತಮ್ಮ ಸರದಿ ಬರುವವರೆಗೆ ಕಾದಿದ್ದ ಸುರೇಶ್ ಗೌಡ, ಜಿಲ್ಲೆಯಲ್ಲಿ ಸೊಗಡು ಶಿವಣ್ಣ ಅವರ ವಿಚಾರದಲ್ಲಿ ಕಾರ್ಯಕರ್ತರಿಗೆ ಪ್ರೀತಿ ಇದೆ. ಜಿ.ಎಸ್.ಬಸವರಾಜು ಹಾಗೂ ಜ್ಯೋತಿಗಣೇಶ್ ಹೊರಗಿನಿಂದ ಬಂದವರು ಮತ್ತು ಮೂಲ ಹಾಗೂ ವಲಸಿಗ ಗುಂಪಾಗಲು ಕಾರಣರಾಗಿದ್ದಾರೆ ಎಂಬ ಸಿಟ್ಟಿದೆ. ಒಂದು ವೇಳೆ ಶಿವಣ್ಣ ಅವರಿಗೆ ತುಮಕೂರು ನಗರ ಕ್ಷೇತ್ರದ ಟಿಕೆಟ್ ತಪ್ಪಿಹೋದರೆ ಅದರ ಪರಿಣಾಮವನ್ನು ಇಡೀ ಜಿಲ್ಲೆಯಲ್ಲಿ ಬಿಜೆಪಿ ಅನುಭವಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications