ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ, ಮೋದಿಗೆ ಕುಮಾರಸ್ವಾಮಿ ಪತ್ರ

|
Google Oneindia Kannada News

Recommended Video

ನರೇಂದ್ರ ಮೋದಿಗೆ ಪತ್ರ ಬರೆದ ಕುಮಾರಣ್ಣ..? | Oneindia Kannada

ಬೆಂಗಳೂರು, ಜೂನ್ 03 : ತುಮಕೂರಿನ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಬೇಕು ಎಂದು ಕೋರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಸೋಮವಾರ ಎಚ್.ಡಿ.ಕುಮಾರಸ್ವಾಮಿ ಅವರು ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿಗಳ ಕಚೇರಿ ಪತ್ರವನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿಗಳ ಅಧಿಕೃತ ಖಾತೆಯಿಂದ ಈ ಕುರಿತು ಟ್ವೀಟ್ ಮಾಡಲಾಗಿದೆ.

ಸಿದ್ಧಗಂಗಾ ಶ್ರೀಗಳಿಗೆ ಜನ್ಮದಿನದಂದು ಮೋದಿ ಅಕ್ಷರ ನಮನಸಿದ್ಧಗಂಗಾ ಶ್ರೀಗಳಿಗೆ ಜನ್ಮದಿನದಂದು ಮೋದಿ ಅಕ್ಷರ ನಮನ

'ತುಮಕೂರಿನ ಸಿದ್ದಗಂಗಾ ಮಠಕ್ಕೆ 600 ವರ್ಷಗಳ ಪರಂಪರೆ ಇದೆ. 1941 ರಿಂದ 2019ರ ತನಕ ಶ್ರೀ ಶಿವಕುಮಾರಸ್ವಾಮೀಜಿ ಅವರ ಉಸ್ತುವಾರಿಯಲ್ಲಿದ್ದ ಮಠ ಸಾಮಾಜಿಕ ಸೇವೆಯಲ್ಲಿ ಮಾದರಿ ಎನಿಸುವ ಕಾರ್ಯಗಳನ್ನು ಮಾಡಿದೆ' ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಶ್ರೀಗಳಿಗೆ ಭಾರತ ರತ್ನ ನೀಡಿ: ಸಂಸತ್‌ನಲ್ಲಿ ರಾಜ್ಯ ಸಂಸದರ ಒತ್ತಾಯಶ್ರೀಗಳಿಗೆ ಭಾರತ ರತ್ನ ನೀಡಿ: ಸಂಸತ್‌ನಲ್ಲಿ ರಾಜ್ಯ ಸಂಸದರ ಒತ್ತಾಯ

Siddaganga mutt

'ನಾಡಿನ ಗ್ರಾಮೀಣ ಪ್ರದೇಶಗಳಲ್ಲಿ ಶ್ರೀಗಳು ಸ್ಥಾಪಿಸಿದ ವಿದ್ಯಾಕೇಂದ್ರಗಳು ಶಿಕ್ಷಣ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿವೆ. ತ್ರಿವಿಧ ದಾಸೋಹಕ್ಕಾಗಿ ಶ್ರೀಗಳು ತಮ್ಮ ಜೀವನವನ್ನೇ ಮುಡುಪಾಗಿಟ್ಟವರು' ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಸಿಗದಿದ್ದಕ್ಕೆ ತೀವ್ರ ಆಕ್ರೋಶಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಸಿಗದಿದ್ದಕ್ಕೆ ತೀವ್ರ ಆಕ್ರೋಶ

ಸಿದ್ದಗಂಗಾ ಶ್ರೀಗಳು ಸಮಾಜಕ್ಕೆ ಸಲ್ಲಿಸಿರುವ ಸೇವೆಗೆ ಭಾರತದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ಸಲ್ಲುವುದು ಉಚಿತ. ಎಲ್ಲಾ ನಾಗರಿಕರು, ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳ ಆಶಯವೂ ಅದೇ ಆಗಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.

ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳ ಹೆಸರನ್ನು ಭಾರತ ರತ್ನ ಪ್ರಶಸ್ತಿಗೆ ಪರಿಗಣಿಸಬೇಕು ಎಂದು ನಾನು ಮನವಿ ಮಾಡುತ್ತೇನೆ ಎಂದು ಕುಮಾರಸ್ವಾಮಿ ಅವರು ಪತ್ರದಲ್ಲಿ ತಿಳಿಸಿದ್ದಾರೆ.

2019ರ ಜನವರಿ 21ರಂದು ಬೆಳಗ್ಗೆ 11.44ಕ್ಕೆ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದರು. ಸ್ವಾಮೀಜಿಗಳು ಅನಾರೋಗ್ಯಕ್ಕೆ ಒಳಗಾದ ಸಮಯದಿಂದ ಅವರಿಗೆ ಭಾರತ ರತ್ನ ನೀಡಬೇಕು ಎಂದು ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುತ್ತಿತ್ತು.

ಈಗ ಮರಣೋತ್ತರವಾಗಿಯಾದರೂ ಭಾರತ ರತ್ನವನ್ನು ನೀಡಲಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರಬರೆದಿದ್ದಾರೆ.

English summary
In a letter to Prime Minister Narendra Modi Chief Minister H.D.Kumaraswamy request for confer Bharat Ratna for late Siddaganga seer of Siddaganga mutt, Tumakuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X