ತುಮಕೂರಿನಲ್ಲಿ ಬಿಜೆಪಿ ಮುಖಂಡನಿಂದ ವರದಿಗಾರನ ಮೇಲೆ ಹಲ್ಲೆ
ತುಮಕೂರು, ಡಿಸೆಂಬರ್ 02 : ಪತ್ರಿಕಾಗೋಷ್ಠಿ ನೆಪದಲ್ಲಿ ಕರೆಸಿಕೊಂಡು ಖಾಸಗಿ ಸುದ್ದಿವಾಹಿನಿ ವರದಿಗಾರನ ಮೇಲೆ ಹಲ್ಲೆ ಮಾಡಿರುವ ಘಟನೆ ತುಮಕೂರಿನಲ್ಲಿ ಶನಿವಾರ ನಡೆದಿದೆ.
ಪತ್ರಿಕಾಗೋಷ್ಠಿಗೆ ಆಗಮಿಸಿದ್ದ ಖಾಸಗಿ ವಾಹಿನಿ ವರದಿಗಾರ ವಾಗೀಶ್ ಅವರ ಮೇಲೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಹೆಬ್ಬಾಕ ರವಿ, ಪಾಲಿಕೆ ಸದಸ್ಯ ಬಾವಿಕಟ್ಟೆ ನಾಗಣ್ಣ ಅವರು ಹಲ್ಲೆ ನಡೆಸಿದ್ದಾರೆ. ತುಮಕೂರಿನ ಹೋಟೆಲ್ ವೊಂದರಲ್ಲಿ ಅಧ್ಯಕ್ಷ ಜ್ಯೋಗಣೇಶ್ ಅವರು ಪತ್ರಿಕಾಗೋಷ್ಠಿಗೆ ಆಹ್ವಾನಿಸಿದ್ದರು.

ಪತ್ರಿಕಾಗೋಷ್ಠಿ ಮಧ್ಯದಲ್ಲೇ ಗುಂಪುಕಟ್ಟಿಕೊಂಡು ಏಕಾಏಕಿ ವರದಿಗಾರನ ಮೇಲೆ ಬಿಜೆಪಿ ಕಾರ್ಯಕರ್ತರು ಎರಗಿದ್ದಾರೆ. ಹೆಬ್ಬಾಕ ರವಿ ಹಾಗೂ ಬಾವಿಕಟ್ಟೆ ನಾಗಣ್ಣನ ಅಕ್ರಮ ಗಣಿಗಾರಿಕೆ ಕುರಿತು ಹಲವು ಬಾರಿ ವಾಗೀಶ್ ಅವರು ವರದಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹಲ್ಲೆ ಮಾಡಿ ಸೇಡು ತೀರಿಸಿಕೊಂಡಿದ್ದಾರೆ. ಹೆಬ್ಬಾಕ ರವಿ ಈ ಹಿಂದೆ ಹಲವು ಪತ್ರಕರ್ತರಿಗೆ ಧಕ್ಮಿ ಹಾಕಿ ಹಲ್ಲೆ ನಡೆಸಿದ್ದ ಎನ್ನಲಾಗಿದೆ.












Click it and Unblock the Notifications