ಬಿಜೆಪಿ ಶಾಸಕ ಸಿಟಿ ರವಿ ಅವರಿದ್ದ ಕಾರು ಡಿಕ್ಕಿ ಹೊಡೆದು ಇಬ್ಬರ ದುರ್ಮರಣ
ತುಮಕೂರು, ಫೆಬ್ರವರಿ 19: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿಟಿ ರವಿ ಅವರಿದ್ದ ಕಾರು ರಸ್ತೆಯಲ್ಲಿ ನಿಂತಿದ್ದ ಎರಡು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತರಾದ ದುರ್ಘಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ.
ತುಮಕೂರು ಜಿಲ್ಲೆಯ ಕುಣಿಗಲ್ ಸಮೀಪದ ಊರ್ಕೇನಹಳ್ಳಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಘಟನೆ ನಡೆದಿದೆ. ಪ್ರವಾಸಕ್ಕೆಂದು ತೆರಳಿದ್ದ ಸುಮಾರು 12 ಯುವಕರು, ಊರ್ಕೇನಹಳ್ಳಿ ಬಳಿ ಮೂತ್ರ ವಿಸರ್ಜನೆಗಾಗಿ ಕಾರು ನಿಲ್ಲಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ವೇಗವಾಗಿ ಬಂದ ಸಿಟಿ ರವಿ ಅವರಿದ್ದ ಕಾರು ಮೂವರು ಯುವಕರಿಗೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಇಬ್ಬರು ಮೃತರಾದರೆ, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಮೂಡಿಗೆರೆಯಲ್ಲಿ ಕಾರು ಅಪಘಾತ:ಒಂದೇ ಕುಟುಂಬದ 4 ಮಂದಿ ಸಾವು
ಘಟನೆಯಲ್ಲಿ ಶಶಿಕುಮಾರ್ ಮತ್ತು ಸುನಿಲ್ ಎಂಬುವವರು ಮೃತರಾಗಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆಯ ನಂತರ ಸ್ಥಳ ಮಹಜರು ಮಾಡದೆ ವಾಹನವನ್ನು ಸ್ಥಳಾಂತರಿಸಲಾಗಿದೆ ಎಂದು ಆರೋಪಿಸಲಾಗಿದೆ.
ಕಾರವಾರ: ಅಂಕೋಲ ಬಳಿ ಭೀಕರ ಅಪಘಾತ ನಾಲ್ಕು ಸಾವು
ಬಿಎಂಟಿಸಿ-ಬೈಕ್ ಡಿಕ್ಕಿ, ಬೆಂಕಿ, ಮೂವರು ಸ್ಥಳದಲ್ಲೇ ಸಾವು
ಎರಡು ಕಾರಿನಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಕೆಲ ಸ್ನೇಹಿತರು ತುಮಕೂರಿನ ಕುಣಿಗಲ್ ಬಳಿ ಕಾರು ನಿಲ್ಲಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ವೇಗವಾಗಿ ಬಂದ ಸಿಟಿ ರವಿ ಅವರಿದ್ದ ಕಾರು ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಸಿಟಿ ರವಿ ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಘಟನೆ ಕುರಿತು ಅವರೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ನಂತರ ಸಿಟಿ ರವಿ ಅವರು ಬೇರೆ ಕಾರಿನಲ್ಲಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಅವರ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.