ತುಮಕೂರಿನಿಂದ ಜ್ಯೋತಿ ಗಣೇಶ್ ಅಖಾಡಕ್ಕೆ, ಶಿವಣ್ಣಗಿಲ್ಲ ಬಿಜೆಪಿ ಟಿಕೆಟ್
ತಿಪಟೂರು, ಜುಲೈ 10: ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿಯ ಜಿಲ್ಲಾಧ್ಯಕ್ಷ ಜ್ಯೋತಿಗಣೇಶ್ ಹೆಸರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ-ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಕಾರ್ಯಕ್ರಮವೊದರಲ್ಲಿ ಪಾಲ್ಗೊಂಡಿದ್ದ ಅವರು, ನನ್ನ ಎಡ-ಬಲದಲ್ಲಿ ಕೂತಿರುವವರಿಗೆ (ನಾಗೇಶ್ ಹಾಗೂ ಜ್ಯೋತಿಗಣೇಶ್) ಪಕ್ಷದ ಟಿಕೆಟ್ ಸಿಗಲಿದೆ ಎಂದು ಹೇಳಿದ್ದಾರೆ. ಅಂದರೆ ತಿಪಟೂರು ವಿಧಾನಸಭಾ ಕ್ಷೇತ್ರದಿಂದ ನಾಗೇಶ್ ಹಾಗೂ ತುಮಕೂರು ನಗರದಿಂದ ಜ್ಯೋತಿಗಣೇಶ್ ಸ್ಪರ್ಧಿಸುವುದು ಖಚಿತವಾದಂತಾಗಿದೆ.

ಅಲ್ಲಿಗೆ ಮಾಜಿ ಸಚಿವ- ಬಿಜೆಪಿ ಮುಖಂಡ ಸೊಗಡು ಶಿವಣ್ಣ ಅವರಿಗೆ ಈ ಬಾರಿ ತುಮಕೂರು ನಗರದ ಟಿಕೆಟ್ ಇಲ್ಲ ಎಂಬುದು ನಿಕ್ಕಿ ಆದಂತಾಗಿದೆ. ಬಿಎಸ್ ಯಡಿಯೂರಪ್ಪನವರ ಕೆಲವು ನಿರ್ಧಾರಗಳಿಗೆ ಅತೃಪ್ತಿ ವ್ಯಕ್ತಪಡಿಸಿದ ಮುಖಂಡರ ಪೈಕಿ ಶಿವಣ್ಣ ಕೂಡ ಇದ್ದರು. ಅವರಿಗೆ ನೋಟಿಸ್ ಕೂಡ ನೀಡಲಾಗಿತ್ತು.
ಆ ನಂತರ ಬೆಂಗಳೂರಿನಲ್ಲಿ ಕೂಡ ಅತೃಪ್ತರ ಸಮಾವೇಶ ನಡೆದಿತ್ತು. ಅದರಲ್ಲೂ ಶಿವಣ್ಣ ಕಾಣಿಸಿಕೊಂಡಿದ್ದರು. ಇದಕ್ಕೂ ಮುನ್ನ ಶಿವಣ್ಣ ಮತ್ತಿತರರಿಗೆ ನೀಡಿದ್ದ ನೋಟಿಸ್ ವಾಪಸ್ ಪಡೆಯಬೇಕು ಎಂದು ದೆಹಲಿಯಲ್ಲಿ ನಡೆದ ಸಂಧಾನ ಸಭೆಯಲ್ಲಿ ತೀರ್ಮಾನ ಆಗಿತ್ತು. ಈ ಎಲ್ಲ ಬೆಳವಣಿಗೆಗಳ ನಂತರ ಶಿವಣ್ಣ ಅವರಿಗೆ ಟಿಕೆಟ್ ಕೈ ತಪ್ಪಿದಂತಾಗಿದೆ.
ತುಮಕೂರು ನಗರ ಕ್ಷೇತ್ರದಿಂದ ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕೆಜೆಪಿಯಿಂದ ಸ್ಪರ್ಧಿಸಿದ್ದ ಜ್ಯೋತಿಗಣೇಶ್ ಮತಗಳಿಕೆಯಲ್ಲಿ ಎರಡನೇ ಸ್ಥಾನದಲ್ಲಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಶಿವಣ್ಣ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದರು. ಆದರೆ ಅದಕ್ಕೂ ಮುನ್ನ ಸತತವಾಗಿ ನಾಲ್ಕು ಬಾರಿ ಅದೇ ಕ್ಷೇತ್ರದಿಂದ ಸೊಗಡು ಶಿವಣ್ಣ ಜಯ ಗಳಿಸಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications