ತುಮಕೂರಿಗೆ ಭೇಟಿ ನೀಡಿದ ಬರ ಅಧ್ಯಯನ ತಂಡ: ಪರಿಶೀಲನೆ
ತುಮಕೂರು, ನವೆಂಬರ್,3: ಮಳೆಯಿಲ್ಲದೆ ಹತ್ತು ತಾಲೂಕನ್ನು ಬರ ಪೀಡಿತ ತಾಲ್ಲೂಕೆಂದು ಘೋಷಿಸಿರುವ ಹಿನ್ನೆಲೆ ರಾಜ್ಯಕ್ಕೆ ಬರ ಅಧ್ಯಯನ ತಂಡ ಆಗಮಿಸಿ ಇಂದು ಜಿಲ್ಲೆಗೆ ಭೇಟಿ ನೀಡಿತು.
ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಕೇಂದ್ರದ ಇಂಧನ ಇಲಾಖೆ ಉಪನಿರ್ದೇಶಕ ಕಮಲ್ ಚೌಹಾಣ್, ನೀತಿ ಆಯೋಗದ ಸಂಶೋಧನಾಧಿಕಾರಿ ಗಣೇಶ್ರಾಮ್ ಹಾಗೂ ಬೆಂಗಳೂರಿನ ಭಾರತೀಯ ಆಹಾರ ನಿಗಮದ ಕೇಂದ್ರ ಡಿಜಿಎಂ ಎಲ್. ಚಾತ್ರೂ ನಾಯ್ಕ್ ರವರನ್ನೊಳಗೊಂಡ ಕೇಂದ್ರ ಬರ ಅಧ್ಯಯನ ತಂಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ. ಜಯಚಂದ್ರ, ಸಂಸದ ಎಸ್.ಪಿ. ಮುದ್ದಹನುಮೇಗೌಡ, ಜಿಲ್ಲಾಧಿಕಾರಿ ಕೆ.ಪಿ. ಮೋಹನ್ರಾಜ್ ಬರಮಾಡಿಕೊಂಡರು.

ತಂಡಕ್ಕೆ ಜಿಲ್ಲಾಧಿಕಾರಿ ಪವರ್ ಪಾಯಿಂಟ್ ಪ್ರಸೆಂಟೇಷನ್ ಮೂಲಕ ಕೃಷಿ, ತೋಟಗಾರಿಕೆ ಸೇರಿದಂತೆ ನಾನಾ ಇಲಾಖೆಗಳಲ್ಲಿ ಬರ ಪರಿಸ್ಥಿಯಿಂದ ರೈತರಿಗಾರಿರುವ ನಷ್ಟದ ಬಗ್ಗೆ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಬೆಳೆ ನಷ್ಟದ ಬಗ್ಗೆ ಕೇಂದ್ರ ತಂಡದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಚರ್ಚಿಸಿದರು.[3 ತಂಡದಿಂದ ಬರ ಅಧ್ಯಯನ, 15 ಜಿಲ್ಲೆಗಳಲ್ಲಿ ಪ್ರವಾಸ]
ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲೆಯ ಬರ ಪರಿಸ್ಥಿತಿ ಚರ್ಚಿಸಿ ಮಾಹಿತಿ ಪಡೆದ ಕೇಂದ್ರ ತಂಡದ ಅಧಿಕಾರಿಗಳು ತುಮಕೂರು ತಾಲೂಕಿನ ಬೆಳೆದರ ಗ್ರಾಮಕ್ಕೆ ಭೇಟಿ ನೀಡಿ ರೈತರ ಹೊಲಗಳಲ್ಲಿರುವ ಬೆಳೆಗಳ ಮಾಹಿತಿ ಪಡೆದುಕೊಂಡರು.
ಮಧುಗಿರಿ ತಾಲ್ಲೂಕು ಜಡೆಗೊಂಡನಹಳ್ಳಿ, ಚಿನ್ನೇನಹಳ್ಳಿ, ಪಾವಗಡ ತಾಲೂಕು ರಾಜವಂತಿ, ಕಣಿವೇನಹಳ್ಳಿ, ಅಗಸರ ಕಟ್ಟೆ, ಕೊರಟಗೆರೆ ತಾಲೂಕಿನ ಜನಪನಹಳ್ಳಿಗೆ ಕನ್ನೇನಹಳ್ಳಿಗಳಿಗೆ ತೆರಳಿದ ಕೇಂದ್ರ ಬರ ಅಧ್ಯಯನ ತಂಡದ ಅಧಿಕಾರಿಗಳು ಶೇಂಗಾ ಮತ್ತು ಮುಸುಕಿನ ಜೋಳದ ಬೆಳೆಗಳು ಹಾಳಾಗಿರುವುದನ್ನು ಖುದ್ದು ವೀಕ್ಷಿಸಿ, ಕುಡಿವ ನೀರಿನ ಸಮಸ್ಯೆ, ಜಾನುವಾರುಗಳ ಮೇವಿನ ಸಮಸ್ಯೆ ಹಾಗೂ ಗೋಶಾಲೆ ತೆರೆಯುವ ಕುರಿತು ರೈತರೊಂದಿಗೆ ಚರ್ಚೆಸಿ, ಅಗತ್ಯ ನೆರವು ಕೊಡಿಸುವುದಾಗಿ ತಿಳಿಸಿದರು.

ವಿವಿಧ ಜಿಲ್ಲೆಗಳನ್ನು ಅವಲೋಕಿಸಿದ ಕೇಂದ್ರ ತಂಡದ ಅಧಿಕಾರಿಗಳು ರೈತರು, ಸ್ಥಳೀಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಂದ ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಮಾಹಿತಿ ಕಲೆ ಹಾಕಿದರು.[ನ.2ಕ್ಕೆ ಕೇಂದ್ರ ಬರ ಅಧ್ಯಯನ ತಂಡ ರಾಜ್ಯ ಪ್ರವಾಸ]
ಜಿಲ್ಲೆಯಲ್ಲಿ 3-4 ವರ್ಷಗಳಿಂದ ಬರ ಪರಿಸ್ಥಿತಿಯಿದ್ದು, ಕೃಷಿ ಇಲಾಖೆಯಿಂದ ರೈತರಿಗೆ ಬೆಳೆ ನಷ್ಟ, ಕುಡಿಯುವ ನೀರಿನ ಸಮಸ್ಯೆ, ಕಿರುನೀರು ಸರಬರಾಜಿನ ತೊಂದರೆ, ರಾಸುಗಳಿಗೆ ಪೌಷ್ಠಿಕ ಆಹಾರ ಒದಗಿಸಲು 79 ಗೋಶಾಲೆ ತೆರೆಯಲು,153 ಮೇವು ಕೇಂದ್ರ ತೆರೆಯಲು ಕೇಂದ್ರ ಸರ್ಕಾರಕ್ಕೆ ವರದಿ ನೀಡಿ ಶಿಫಾರಸ್ಸು ಮಾಡುವಂತೆ ಕೇಂದ್ರ ಬರ ಅಧ್ಯಯನ ತಂಡಕ್ಕೆ ಜಿಲ್ಲಾಡಳಿತ ಪ್ರಸ್ತಾವನೆ ಸಲ್ಲಿಸಿ ಮನವಿ ಮಾಡಿತು.
ಜಿಲ್ಲೆಗೆ ವಾಡಿಕೆಯಂತೆ ಮಳೆಯಾಗಿಲ್ಲ. ಸಾಲ ಸೂಲ ಮಾಡಿ ರೈತರು ಇಟ್ಟ ಬೆಳೆ ಕೈಗೆ ಸಿಗದೆ ಹಾಳಾಗುತ್ತಿದೆ, ಸಾಲ ತೀರಿಸಲಾಗದೆ ರೈತರು ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ. ಮಳೆ ಇಲ್ಲದ ಕಾರಣ ಅಂತರ್ಜಲ ಕುಸಿದಿದೆ. ಹೊಸದಾಗಿ 1400 ಅಡಿ ವರೆಗೂ ಕೊಳವೆ ಬಾವಿ ಕೊರೆಸಿದರೂ ನೀರು ಸಿಗುತ್ತಿಲ್ಲ. ಜಿಲ್ಲೆಯ ರೈತರ ಸ್ಥಿತಿ ತುಂಬಾ ಚಿಂತಾಜನಕವಾಗಿದೆ ಎಂದು ಕೇಂದ್ರ ಬರ ಅಧ್ಯಯನ ತಂಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ. ಜಯಚಂದ್ರ ಮನವರಿಕೆ ಮಾಡಿಕೊಟ್ಟರು.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications