ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಬೇಕು: ಖರ್ಗೆ ಆಗ್ರಹ

|
Google Oneindia Kannada News

ತುಮಕೂರು, ಜನವರಿ 14: ನಡೆದಾಡುವ ದೇವರೆಂದು ಖ್ಯಾತರಾದ ಶಿವಕುಮಾರಸ್ವಾಮೀಜಿ ಅವರಿಗೆ ಭಾರತ ರತ್ನ ನೀಡಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಆಗ್ರಹಿಸಿದ್ದಾರೆ.

ಪ್ರಧಾನಿ ಮೋದಿ, ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು: ಖರ್ಗೆ ಪ್ರಧಾನಿ ಮೋದಿ, ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು: ಖರ್ಗೆ

ತುಮಕೂರಿನಲ್ಲಿ ಮಾತನಾಡಿರುವ ಅವರು, ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಅವರು ಹೇಳಿದ್ದಾರೆ.

ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರದಲ್ಲಿ ತಾಳ್ಮೆ ಅಗತ್ಯ: ವೈದ್ಯರು ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರದಲ್ಲಿ ತಾಳ್ಮೆ ಅಗತ್ಯ: ವೈದ್ಯರು

ಶ್ರೀಗಳಿಗೆ ಭಾರತ ರತ್ನ ಕೊಡಬೇಕೆಂಬ ಒತ್ತಾಯದಲ್ಲಿ ಪಕ್ಷಾತೀತವಾಗಿ ಎಲ್ಲ ಸಂಸದರೂ ಪ್ರಯತ್ನಿಸುತ್ತೇವೆ ಎಂದು ಸಹ ಹೇಳಿರುವ ಅವರು, ಶ್ರೀಗಳು ಮಾಡಿರುವ ಅನನ್ಯ ಸೇವೆ ಅವರನ್ನು ಭಾರತ ರತ್ನಕ್ಕೆ ಅರ್ಹರನ್ನಾಗಿಸಿದೆ ಎಂದು ಅವರು ಹೇಳಿದ್ದಾರೆ.

Central Government should give Bharat Ratna to Siddaganga Seer: Kharge

ಆಸ್ಪತ್ರೆಗೆ ಭೇಟಿ ನೀಡಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಶ್ರೀಗಳ ಆರೋಗ್ಯ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು. ಶ್ರೀಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು. ಶ್ರೀಗಳ ಅವಶ್ಯಕತೆ ನಮ್ಮ ರಾಜ್ಯಕ್ಕೆ, ರಾಷ್ಟ್ರಕ್ಕೆ ಬಹಳಷ್ಟಿದೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅವರು ಹೇಳಿದರು.

ವೈದ್ಯರು ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಶ್ರೀಗಳ ಮೇಲೆ ಅವರು ಪುರ್ಣ ನಿಗಾವಹಿಸಿದ್ದಾರೆ. ವೈದ್ಯರ ಶ್ಸರಮ ಶ್ಲಾಘನೀಯ ಎಂದು ಖರ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

English summary
Congress leader Mallikarjun Kharge said that Central Government should give 'Bharat Rathna' award to Siddaganga Seer by considering his service to the society.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X