ನೆರೆ ಪರಿಹಾರ ಬಂದಿಲ್ಲ: ಮೋದಿ ಎದುರೇ ಯಡಿಯೂರಪ್ಪ ಅಸಮಾಧಾನ
ತುಮಕೂರು, ಜನವರಿ 02: ಹೈಕಮಾಂಡ್ ಎದುರು ಯಡಿಯೂರಪ್ಪ ಮೌನವಾಗಿರುತ್ತಾರೆ. ಹೈಕಮಾಂಡ್ ನ ಕೈಗೊಂಬೆಯಾಗಿ ಯಡಿಯೂರಪ್ಪ ವರ್ತಿಸುತ್ತಾರೆ ಎಂದೆಲ್ಲಾ ವಿಪಕ್ಷಗಳು ಸಿಎಂ ಬಗ್ಗೆ ಟೀಕೆ ಮಾಡುತ್ತಲೇ ಇರುತ್ತಾರೆ. ಆದರೆ ಯಡಿಯೂರಪ್ಪ ಈ ಅಪವಾದಗಳಿಗೆ ವಿರುದ್ಧ ವರ್ತನೆಯನ್ನು ತೋರಿದ್ದಾರೆ.
ತುಮಕೂರಿನಲ್ಲಿ ಆಯೋಜಿಸಿದ್ದ 'ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ' ಅಡಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ, 'ಕೇಂದ್ರದಿಂದ ಬರಬೇಕಾದ ನೆರೆ ಪರಿಹಾರ ಇನ್ನೂ ಬಂದಿಲ್ಲ' ಎಂದು ಹೇಳಿದರು.
'ನೆರೆಯಿಂದಾಗಿ ಕರ್ನಾಟಕಕ್ಕೆ ಸಾವಿರಾರು ಕೋಟಿ ನಷ್ಟವಾಗಿದೆ. ನೆರೆ ಪರಿಹಾರದ ಮೊದಲ ಹಂತದ ಪರಿಹಾರ ಕೇಂದ್ರದಿಂದ ಬಂದಿದೆ, ಆದರೆ ಎರಡನೇಯ ಹಂತದ ಪರಿಹಾರ ಇನ್ನೂ ಬಂದಿಲ್ಲ' ಎಂದು ಯಡಿಯೂರಪ್ಪ ವೇದಿಕೆ ಮೇಲೆ ಹೇಳಿದರು.

'ಎರಡನೇ ಹಂತದ ಪರಿಹಾರವನ್ನು ಆದಷ್ಟು ಶೀಘ್ರವಾಗಿ ಬಿಡುಗಡೆ ಮಾಡಬೇಕು ಎಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ' ಎಂದು ಯಡಿಯೂರಪ್ಪ ಮೋದಿ ಅವರಿಗೆ ನೇರ ಮನವಿಯನ್ನು ಭಾಷಣದ ಮುಖಾಂತರ ಮಾಡಿದರು.
ಯಡಿಯೂರಪ್ಪ ಅವರು ತಮ್ಮ ಭಾಷಣ ಮುಗಿಸಿದ ಬಳಿಕ ಮೋದಿ ಅವರ ಬಳಿ ತೆರಳು ಚರ್ಚೆ ಮಾಡಿದರು. ನೆರೆ ಪರಿಹಾರದ ಬಗ್ಗೆಯೇ ಮೋದಿ ಅವರೊಂದಿಗೆ ಸಿಎಂ ಚರ್ಚಿಸಿದರು ಎನ್ನಲಾಗುತ್ತಿದೆ.
ಭಾಷಣದ ವೇಳೆ ಮತ್ತೊಂದು ಮನವಿಯನ್ನು ಮೋದಿ ಮುಂದಿಟ್ಟ ಯಡಿಯೂರಪ್ಪ, ರಾಜ್ಯಕ್ಕೆ 50,000 ಕೋಟಿ ಅನುದಾನವನ್ನು ನೀರಾವರಿಗಾಗಿ ಬಿಡುಗಡೆ ಮಾಡಬೇಕು ಎಂದು ಸಹ ಕೇಳಿದರು.
ಮೋದಿ ಅವರು ತಮ್ಮ ಭಾಷಣದಲ್ಲಿ ನೆರೆ ಪರಿಹಾರ ಬಿಡುಗಡೆ ವಿಷಯವಾಗಲಿ ಅಥವಾ ನೀರಾವರಿಗೆ ಹೆಚ್ಚುವರಿ ಅನುದಾನ ನೀಡುವ ವಿಷಯವಾಗಲಿ ಪ್ರಸ್ತಾಪ ಮಾಡಲೇ ಇಲ್ಲ.
ಯಡಿಯೂರಪ್ಪ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದ ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಭಾರಿ ನೆರೆ ಬಂದಿತ್ತು. ನೆರೆಯಿಂದಾಗಿ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications