Lokayukta Raid: 3 ಲಕ್ಷ ಲಂಚಕ್ಕೆ ಬೇಡಿಕೆ: ಮನೆಯಲ್ಲೇ ಲಾಕ್ ಆದ ಮಹಿಳಾ ತಹಶೀಲ್ದಾರ್
ತುಮಕೂರು, ಮಾರ್ಚ್ 21: ಲಂಚ ಸ್ವೀಕರಿಸುವ ವೇಳೆ ತನ್ನ ಮನೆಯಲ್ಲೇ ಮಹಿಳಾ ತಹಶೀಲ್ದಾರ್ ಲೋಕಾಯಕ್ತರ ಬಲೆಗೆ ಬಿದ್ದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿಯಲ್ಲಿ ನಡೆದಿದೆ. ತಹಶೀಲ್ದಾರ್ ಗೀತಾ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಅಧಿಕಾರಿ ಎಂದು ವರದಿಯಾಗಿದೆ.
ತುಮಕೂರು ಲೋಕಾಯುಕ್ತ ಡಿವೈಎಸ್ ಪಿ. ರಾಮಕೃಷ್ಣ ಹಾಗೂ ಉಮಾಶಂಕರ್ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ಮಹಿಳಾ ತಹಶೀಲ್ದಾರ್ ಗೀತಾ ಅವರನ್ನು ಲಂಚದ ಹಣ ಸಮೇತ ವಶಕ್ಕೆ ಪಡೆಯಲಾಗಿದೆ.

ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗ್ರಾಮದ ರೈತರೊಬ್ಬರಿಗೆ ಸೇರಿದ 33 ಗುಂಟೆ ಜಮೀನನ್ನು ಭೂ ಪರಿವರ್ತನೆ ಮಾಡಿಕೊಡಲು ತಹಶೀಲ್ದಾರ್ ಗೀತಾ 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಭೂ ಪರಿವರ್ತನೆ ಮಾಡಿಕೊಡಲು ಮೊದಲು ನಿನ್ನೆ (ಮಾರ್ಚ್ 20) ಬೆಳಗ್ಗೆ 20 ಸಾವಿರ ರೂಪಾಯಿ ಪಡೆದಿದ್ದು, ಸಂಜೆ ಮತ್ತೆ 30 ಸಾವಿರ ರೂಪಾಯಿ ಕೊಡುವಂತೆ ಕೇಳಿದ್ದಾರೆ. ಸಂಜೆ ಕಚೇರಿ ಇಲ್ಲದ ಕಾರಣ ಮನೆಗೆ ಬಂದು ಲಂಚದ ಹಣ ನೀಡುವಂತೆ ಕೇಳಿದ್ದಾರೆ ಎನ್ನಲಾಗಿದೆ.
ರೈತನಿಂದ ಬರೋಬ್ಬರಿ 3 ಲಕ್ಷ ರೂಪಾಯಿ ಲಂಚಕೆ ಬೇಡಿ ಇಟ್ಟಿರುವುದು ಲೋಕಾಯುಕ್ತ ಅಧಿಕಾರಿಗಳಿಗೆ ತಿಳಿದು ಬಂದಿದ್ದು, ತಹಶೀಲ್ದಾರ್ ರೈತನನ್ನು ಮನೆಗೆ ಕರೆಸಿಕೊಂಡು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಡಿವೈಎಸ್ ಪಿ. ರಾಮಕೃಷ್ಣ ಹಾಗೂ ಉಮಾಶಂಕರ್ ನೇತೃತ್ವದ ತಂಡ ದಾಳಿ ನಡೆಸಿದ್ದಾರೆ. ಸದ್ಯ ಲಂಚ ಹಣದ ಸಮೇತ ಮಹಿಳಾ ಅಧಿಕಾರಿಯನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆದಿದೆ.
ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಲಂಚ ಸ್ವೀಕರಿಸುವ ವೇಳೆಯೇ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಾರ್ಚ್ 12 ರಂದು ತುಮಕೂರಿನಲ್ಲಿ ನಡೆದಿತ್ತು.ತುಮಕೂರಿನ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಮಂಜುನಾಥ್ ವಿ.ಕೆ, ಜಿಎಸ್ಟಿ ಹಣ ಕಡಿತಗೊಳಿಸಲು ವ್ಯಕ್ತಿಯೊಬ್ಬರ ಬಳಿ ಬರೋಬ್ಬರಿ 50 ಸಾವಿರ ಲಂಚಕ್ಕೆ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.
ಇಂದು (ಮಾರ್ಚ್ 12) ಮಂಗಳವಾರ ತುಮಕೂರಿನ ಕಚೇರಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಮಂಜುನಾಥ್ ವಿ.ಕೆ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಅಧಿಕಾರಿ 40 ಸಾವಿರ ಹಣ ತೆಗೆದುಕೊಳ್ಳುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿತ್ತು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications