Lokayukta Raid: 3 ಲಕ್ಷ ಲಂಚಕ್ಕೆ ಬೇಡಿಕೆ: ಮನೆಯಲ್ಲೇ ಲಾಕ್ ಆದ ಮಹಿಳಾ ತಹಶೀಲ್ದಾರ್
ತುಮಕೂರು, ಮಾರ್ಚ್ 21: ಲಂಚ ಸ್ವೀಕರಿಸುವ ವೇಳೆ ತನ್ನ ಮನೆಯಲ್ಲೇ ಮಹಿಳಾ ತಹಶೀಲ್ದಾರ್ ಲೋಕಾಯಕ್ತರ ಬಲೆಗೆ ಬಿದ್ದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿಯಲ್ಲಿ ನಡೆದಿದೆ. ತಹಶೀಲ್ದಾರ್ ಗೀತಾ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಅಧಿಕಾರಿ ಎಂದು ವರದಿಯಾಗಿದೆ.
ತುಮಕೂರು ಲೋಕಾಯುಕ್ತ ಡಿವೈಎಸ್ ಪಿ. ರಾಮಕೃಷ್ಣ ಹಾಗೂ ಉಮಾಶಂಕರ್ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ಮಹಿಳಾ ತಹಶೀಲ್ದಾರ್ ಗೀತಾ ಅವರನ್ನು ಲಂಚದ ಹಣ ಸಮೇತ ವಶಕ್ಕೆ ಪಡೆಯಲಾಗಿದೆ.

ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗ್ರಾಮದ ರೈತರೊಬ್ಬರಿಗೆ ಸೇರಿದ 33 ಗುಂಟೆ ಜಮೀನನ್ನು ಭೂ ಪರಿವರ್ತನೆ ಮಾಡಿಕೊಡಲು ತಹಶೀಲ್ದಾರ್ ಗೀತಾ 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಭೂ ಪರಿವರ್ತನೆ ಮಾಡಿಕೊಡಲು ಮೊದಲು ನಿನ್ನೆ (ಮಾರ್ಚ್ 20) ಬೆಳಗ್ಗೆ 20 ಸಾವಿರ ರೂಪಾಯಿ ಪಡೆದಿದ್ದು, ಸಂಜೆ ಮತ್ತೆ 30 ಸಾವಿರ ರೂಪಾಯಿ ಕೊಡುವಂತೆ ಕೇಳಿದ್ದಾರೆ. ಸಂಜೆ ಕಚೇರಿ ಇಲ್ಲದ ಕಾರಣ ಮನೆಗೆ ಬಂದು ಲಂಚದ ಹಣ ನೀಡುವಂತೆ ಕೇಳಿದ್ದಾರೆ ಎನ್ನಲಾಗಿದೆ.
ರೈತನಿಂದ ಬರೋಬ್ಬರಿ 3 ಲಕ್ಷ ರೂಪಾಯಿ ಲಂಚಕೆ ಬೇಡಿ ಇಟ್ಟಿರುವುದು ಲೋಕಾಯುಕ್ತ ಅಧಿಕಾರಿಗಳಿಗೆ ತಿಳಿದು ಬಂದಿದ್ದು, ತಹಶೀಲ್ದಾರ್ ರೈತನನ್ನು ಮನೆಗೆ ಕರೆಸಿಕೊಂಡು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಡಿವೈಎಸ್ ಪಿ. ರಾಮಕೃಷ್ಣ ಹಾಗೂ ಉಮಾಶಂಕರ್ ನೇತೃತ್ವದ ತಂಡ ದಾಳಿ ನಡೆಸಿದ್ದಾರೆ. ಸದ್ಯ ಲಂಚ ಹಣದ ಸಮೇತ ಮಹಿಳಾ ಅಧಿಕಾರಿಯನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆದಿದೆ.
ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಲಂಚ ಸ್ವೀಕರಿಸುವ ವೇಳೆಯೇ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಾರ್ಚ್ 12 ರಂದು ತುಮಕೂರಿನಲ್ಲಿ ನಡೆದಿತ್ತು.ತುಮಕೂರಿನ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಮಂಜುನಾಥ್ ವಿ.ಕೆ, ಜಿಎಸ್ಟಿ ಹಣ ಕಡಿತಗೊಳಿಸಲು ವ್ಯಕ್ತಿಯೊಬ್ಬರ ಬಳಿ ಬರೋಬ್ಬರಿ 50 ಸಾವಿರ ಲಂಚಕ್ಕೆ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.
ಇಂದು (ಮಾರ್ಚ್ 12) ಮಂಗಳವಾರ ತುಮಕೂರಿನ ಕಚೇರಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಮಂಜುನಾಥ್ ವಿ.ಕೆ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಅಧಿಕಾರಿ 40 ಸಾವಿರ ಹಣ ತೆಗೆದುಕೊಳ್ಳುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿತ್ತು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications