ತಿಪಟೂರು ಸಬ್ ಜೈಲಿನಲ್ಲಿ ಎಣ್ಣೆ ಏಟಿನಲ್ಲಿ ಕೈದಿಗಳ ದಾಂಧಲೆ, ಕಿತ್ತಾಟ
ತಿಪಟೂರು, (ತುಮಕೂರು ಜಿಲ್ಲೆ), ಫೆಬ್ರವರಿ 15: ಇಲ್ಲಿನ ಉಪಬಂದೀಖಾನೆಯಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಬುಧವಾರ ರಾತ್ರಿ ಹೊಡೆದಾಟ ನಡೆದು, ಪೀಠೋಪಕರಣಗಳಿಗೆ ಬೆಂಕಿ ಹೊತ್ತಿಸಿ, ಧ್ವಂಸ ಮಾಡಿದ ಘಟನೆ ನಡೆದಿದೆ.
ಸಬ್ ಜೈಲಿನ ಕೈದಿಗಳು ಪಾನಮತ್ತರಾಗಿ ಜೈಲಿನ ಟೇಬಲ್, ಟಿವಿ ಒಡೆದು ಗಲಾಟೆ ಮಾಡಿದ್ದಾರೆ. ಪೊಲೀಸ್ ಹಾಗೂ ಜೈಲು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರೋಲ್ ಮೇಲೆ ಬಿಡುಗಡೆಯಾಗಿ ವಾಪಸ್ ಬಂದ ಹರೀಶ್ ಎಂಬಾತ ಜೈಲಿಗೆ ಮದ್ಯ ತಂದಿದ್ದು, ಮದ್ಯದ ಮತ್ತಿನಲ್ಲಿ ಕೈದಿಗಳು ರಂಪಾಟ ನಡೆಸಿದ್ದಾರೆ.
ರಾತ್ರಿ 2.30 ಸುಮಾರಿಗೆ ಘಟನೆ ನಡೆದಿದ್ದು, ಇದೇ ವೇಳೆ ಕಾಗದಗಳಿಗೆ ಬೆಂಕಿ ಹೊತ್ತಿಸಿ, ಪೊಲೀಸ್ ಹಾಗೂ ಜೈಲು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ನಂತರ ಸ್ಥಳಕ್ಕೆ ನ್ಯಾಯಾಧೀಶರು ಹಾಗೂ ಎಸ್ಪಿ ದಿವ್ಯಾ ಗೋಪಿನಾಥ್ ಭೇಟಿ ನೀಡಿದ್ದು, ಸನ್ನಿವೇಶ ಹತೋಟಿಗೆ ಬಂದಿದೆ.

ವಿಚಾರಾಣಾಧೀನ ಕೈದಿಗಳಾದ ನಾಗೇಶ ಅಲಿಯಾಸ್ ನಾಗೇಂದ್ರ, ಚೇತನ್, ಹರೀಶ್, ಬೂತರಾಜ, ನರಸಿಂಹಮೂರ್ತಿ, ಗುರುಮೂರ್ತಿ, ಯೊಗೇಶ್ ಕುಡಿದ ಮತ್ತಿನಲ್ಲಿ ಜಗಳವಾಡಿಕೊಂಡು, ಆ ನಂತರ ಜೈಲಿನ ಅಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ತಿಳಿದುಬಂದಿದೆ. ದಾಂಧಲೆ ನಡೆಸಿದವರ ವಿರುದ್ಧ ದೂರು ದಾಖಲಾಗಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications