ಜ.21ರ ದಾಸೋಹ ದಿನದಂದು ಸಿದ್ದಗಂಗಾ ಮಠಕ್ಕೆ ಸಿಎಂ ಬೊಮ್ಮಾಯಿ ಭೇಟಿ
ತುಮಕೂರು, ಜನವರಿ 20: ಸಿದ್ದಗಂಗಾ ಮಠಾಧೀಶರಾಗಿದ್ದ ದಿವಂಗತ ಶಿವಕುಮಾರ ಸ್ವಾಮೀಜಿಯವರ 3ನೇ ವರ್ಷದ ಪುಣ್ಯ ಸ್ಮರಣೆ ಶುಕ್ರವಾರ (ಜ.21) ಮಠದ ಆವರಣದಲ್ಲಿ ನಡೆಯಲಿದೆ.
ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮಗಳನ್ನು ನಡೆಸಲು ಮಠದ ಆಡಳಿತ ಮಂಡಳಿ ನಿರ್ಧರಿಸಿದ್ದು, ಸಿದ್ದಗಂಗಾ ಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಠದ ದೇವರಾದ ಸಿದ್ದಲಿಂಗೇಶ್ವರ ಸ್ವಾಮಿಗೆ ವಿಶೇಷ ರುದ್ರಾಭಿಷೇಕ ನಡೆಯಲಿದೆ.
ಜ.21ರಂದು ಶುಕ್ರವಾರ ಸಿದ್ದಗಂಗಾ ಮಠಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದು, ಗದ್ದುಗೆಯ ದರ್ಶನ ಪಡೆಯಲಿದ್ದಾರೆ. ನಂತರ ದಾಸೋಹ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಜ.21 ದಾಸೋಹ ದಿನವೆಂದು ಘೋಷಣೆ
ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಶಿವಕುಮಾರ ಮಹಾಸ್ವಾಮಿಗಳ ಪುಣ್ಯಸ್ಮರಣೆಯ ದಿನವನ್ನು ದಾಸೋಹ ದಿನ ಎಂದು (ಜನವರಿ 21) ಘೋಷಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು.
ಶಿವಕುಮಾರ ಮಹಾಸ್ವಾಮಿಗಳು ಕಾಯಕವೇ ಕೈಲಾಸ ಎಂಬ ತತ್ವದಡಿ 1930ರಲ್ಲಿ ಸಿದ್ದಗಂಗಾ ಮಠದ ಜವಾಬ್ದಾರಿಯನ್ನು ಹೊತ್ತು ಅಂದಿನಿಂದಲೂ ನಿರಂತರವಾಗಿ ಮಠಕ್ಕೆ ಬರುವ ಲಕ್ಷಾಂತರ ಬಡ ಮಕ್ಕಳಿಗೆ ಜಾತಿ-ಧರ್ಮ ಭೇದವಿಲ್ಲದೆ ವಿದ್ಯೆ, ವಸತಿ ಹಾಗೂ ಅನ್ನ ದಾಸೋಹ ನೀಡಿ ತ್ರಿವಿಧ ದಾಸೋಹಿಗಳಾಗಿದ್ದರು.
1960ರ ದಶಕದಲ್ಲಿ ಭಾರತ ದೇಶವೇ ಆಹಾರದ ಕೊರತೆಯನ್ನು ಎದುರಿಸುತ್ತಿದ್ದಾಗ ಶ್ರೀಗಳು ತಾವೇ ಜೋಳಿಗೆ ಹಿಡಿದು ಜನರಿಂದ ದಾನ ಪಡೆದು ಹಸಿವು ನೀಗಿಸಿದರು.
ಶ್ರೀಗಳ ಪರಂಪರೆಯಂತೆ ಇಂದಿಗೂ ಸಾವಿರಾರು ಬಡ ಮಕ್ಕಳಿಗೆ ಹಾಗೂ ಭಕ್ತರಿಗೆ ನಿತ್ಯ ದಾಸೋಹ ಮಾಡಲಾಗುತ್ತಿದೆ. ಶಿವಕುಮಾರ ಶ್ರೀಗಳು ಒಂಬತ್ತು ದಶಕಗಳಿಗೂ ಮೀರಿ ನಿತ್ಯ ದಾಸೋಹಗೈದು ನಾಡಿನ ಇತರೆ ಎಲ್ಲರಿಗೂ ಮಾದರಿಯಾಗಿದ್ದು, ದಾಸೋಹ ಶ್ರೇಷ್ಠರಾಗಿದ್ದರು. ಶಿವಕುಮಾರ ಮಹಾಸ್ವಾಮಿಗಳ ಈ ಕೈಂಕರ್ಯ ಪರಿಗಣನೆಯಲ್ಲಿ 2007ರಲ್ಲಿ ಭಾರತ ಸರ್ಕಾರವು ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿರುತ್ತದೆ.

ಶಿವಕುಮಾರ ಮಹಾಸ್ವಾಮಿಗಳ ಸಮಾಜ ಸೇವಾ ಕಾರ್ಯ ಕ್ಷೇತ್ರಗಳಾದ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮನ್ನೆ ತಾವು ತೊಡಗಿಸಿಕೊಂಡು ಲಿಂಗೈಕ್ಯರಾಗಿದ್ದು, ಇವರು ನಿತ್ಯಪೂಜ್ಯರು ಹಾಗೂ ಕಾಲಕಾಲಕ್ಕೂ ಅನುಸರಣೀಯವಾಗಿದ್ದು, ಇವರ ಅಭೂತಪೂರ್ವ ಸೇವೆಯನ್ನು ಸ್ಮರಿಸುವ ಸಲುವಾಗಿ, ಶ್ರೀಗಳು ಲಿಂಗೈಕ್ಯರಾದ ದಿನವನ್ನು ಅಂದರೆ ಜನವರಿ 21ರಂದು ಸರ್ಕಾರದ ವತಿಯಿಂದ ದಾಸೋಗ ದಿನವೆಂದು ಆಚರಿಸುವಂತೆ ಆದೇಶ ಹೊರಡಿಸಲಾಗಿದೆ.
ಈ ಬಗ್ಗೆ ಪೂಜ್ಯ ಡಾ. ಶಿವಕುಮಾರ ಮಹಾಸ್ವಾಮಿಗಳ ಭಾವಚಿತ್ರದ ಪ್ರತಿಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪಡೆದುಕೊಂಡು, ಸದರಿ ದಿನದಂದು ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಪಟ್ಟ ಇಲಾಖೆಗಳು ಈ ಬಗ್ಗೆ ರೂಪುರೇಷೆಗಳನ್ನು ತಯಾರಿಸಿ ಕಾರ್ಯಕ್ರಮವನ್ನು ಜಾರಿಗೊಳಿಸಲು ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಪತ್ರದಲ್ಲಿ ತಿಳಿಸಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications