ಚೀನಾದಿಂದ ಬಂದವನಿಗೆ ಅನಾರೋಗ್ಯ: ತುಮಕೂರಿನಲ್ಲಿ ಕೊರೊನಾ ಭೀತಿ
ತುಮಕೂರು, ಫೆಬ್ರವರಿ 05: ತುಮಕೂರಿನಲ್ಲೂ ಕೊರೊನಾ ವೈರಸ್ ಬಗ್ಗೆ ಆತಂಕ ಸೃಷ್ಟಿಯಾಗಿದೆ. ಶಂಕಿತ ಯುವಕನನ್ನು ವೈದ್ಯಾಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದು ವರದಿಗಾಗಿ ನಿರೀಕ್ಷಿಸಲಾಗುತ್ತಿದೆ.
ಇತ್ತೀಚೆಗೆ ಯುವಕನೊಬ್ಬ ಚೀನಾದಿಂದ ತುಮಕೂರಿಗೆ ವಾಪಸ್ಸಾಗಿದ್ದ, ಆತನಿಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಆತನ ರಕ್ತ, ಕಫದ ಮಾದರಿಯನ್ನು ಸಂಗ್ರಹಿಸಿ ಪುಣೆಗೆ ತಪಾಸಣೆಗೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ಈ ಬಗ್ಗೆ ರಾಜ್ಯ ಸರ್ಕಾರಕ್ಕೂ ಮಾಹಿತಿ ನೀಡಲಾಗಿದೆ.
ಚೀನಾದಲ್ಲಿದ್ದ ತುಮಕೂರಿನ ಯುವಕ ಅಲ್ಲಿ ಕೊರೊನಾ ವೈರಸ್ ಹೆಚ್ಚಾದ ಬಳಿಕ ತುಮಕೂರಿಗೆ ವಾಪಸ್ಸಾಗಿದ್ದು. ಆತನಿಗೆ ಕೆಲವು ದಿನದ ಹಿಂದೆ ನೆಗಡಿ, ಕೆಮ್ಮು, ಜ್ವರ ನಿಶ್ಯಕ್ತಿ ಕಾಣಿಸಿಕೊಂಡಿತು. ಆತನನ್ನು ಆತನ ಮನೆಯಲ್ಲಿಯೇ ಪ್ರತ್ಯೇಕವಾಗಿ ಇರಿಸಿ ಜಿಲ್ಲಾ ವೈದ್ಯಾಧಿಕಾರಿಗಳು ದಿನಕ್ಕೆರಡು ಬಾರಿ ಭೇಟಿ ನೀಡಿ ಚಿಕಿತ್ಸೆ ನೀಡುತ್ತಿದ್ದಾರೆ.

ಆತನಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಪ್ರಕಾರ ಖಾಯಿಲೆಯ ಲಕ್ಷಣಗಳು ಕೊರೊನಾ ವೈರಸ್ ಮಾದರಿಯಲ್ಲಿಲ್ಲ, ಆದರೂ ಸಹ ಮುಂಜಾಗೃತೆಯಿಂದಾಗಿ ರಕ್ತ, ಕಫ ಪರೀಕ್ಷೆ ಮಾಡಲಾಗುತ್ತಿದೆ ಎಂದಿದ್ದಾರೆ.
ದಕ್ಷಿಣ ಕನ್ನಡ, ಹುಬ್ಬಳ್ಳಿ ಗಳಲ್ಲಿ ಕೊರೊನಾ ವೈರಸ್ ಶಂಕಿತ ಪ್ರಕರಣಗಳು ಪತ್ತೆಯಾಗಿದ್ದವು. ಆದರೆ ಪರೀಕ್ಷೆಯ ನಂತರ ಇವು ಕೊರೊನಾ ವೈರಸ್ ಪ್ರಕರಣಗಳು ಅಲ್ಲವೆಂಬುದು ಖಾತ್ರಿಯಾಯಿತು. ಆದರೂ ಸಹ ರಾಜ್ಯದಾದ್ಯಂತ ಕೊರೊನಾ ವೈರಸ್ ಬಗ್ಗೆ ಹೈಅಲರ್ಟ್ ಘೋಷಿಸಲಾಗಿದೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications