ಅಬ್ಬಬ್ಬಾ..! ಒಂದಲ್ಲ..ಎರಡಲ್ಲ ಬರೋಬ್ಬರಿ ನಾಲ್ಕು ಕರುಗಳಿಗೆ ಜನ್ಮ ನೀಡಿದ ಹಸು!
ತುಮಕೂರು, ಜುಲೈ 04: ಈ ಜಗತ್ತು ವಿಸ್ಮಯಗಳ ಆಗರ. ಪ್ರತಿ ನಿತ್ಯ ಒಂದಲ್ಲ ಒಂದು ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತದೆ. ಸಾಮಾಜಿಕ ಜಾಲತಾಣಗಳು ಸಕ್ರಿಯವಾಗಿರುವ ಪ್ರಸ್ತುತ ದಿನಗಳಲ್ಲಿ ಜಗತ್ತಿನ ಯಾವುದೇ ಮೂಲೆಯಲ್ಲಿ ಆಶ್ಚರ್ಯಕರ ಘಟನೆಗಳು ನಡೆದರೂ ಸಹ ಶೀಘ್ರವಾಗಿಯೇ ಬೆಳಕಿಗೆ ಬರುತ್ತದೆ. ಅದೇ ರೀತಿ ಜನರು ಬಾಯಿ ಮೇಲೆ ಕೈ ಇಟ್ಟು ಕೇಳುವಂತಹ ಘಟನೆ ನಮ್ಮ ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಒಂದು ಹಸು ಒಂದು ಸಮಯಕ್ಕೆ ಎಷ್ಟು ಕರುಗಳಿಗೆ ಜನ್ಮ ನೀಡಬಹುದು? ಇಂದೆಥಾ ಪ್ರಶ್ನೆ ಎಂದು ಕೊಳ್ಳಬೇಡಿ. ಹಸು ಒಂದು ಬಾರಿಗೆ ಒಂದು ಕರುವಿಗೆ ಜನ್ಮ ನೀಡಬಹುದು. ಇದು ಸರ್ವೇ ಸಾಮಾನ್ಯ, ಇದಕ್ಕೂ ಮೀರಿ ಅವಳಿ ಕರುಗಳಿಗೆ ಕೆಲವು ಹಸುಗಳು ಜನ್ಮ ನೀಡುತ್ತವೆ. ಇದು ಬೆರಳೆಣಿಕೆಯ ಘಟನೆಗಳಾಗಿರುತ್ತವೆ. ಆದರೆ ಇಲ್ಲೊಂದು ಹಸು ಒಂದಲ್ಲ.. ಎರಡಲ್ಲ.. ಹೋಗ್ಲಿ ಮೂರು ಅಲ್ಲ ಬರೋಬ್ಬರಿ ನಾಲ್ಕು ಕರುಗಳಿಗೆ ಜನ್ಮ ನೀಡಿದೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದಲ್ಲಿ ಈ ಅಚ್ಚರಿಯ ಘಟನೆ ನಡೆದಿದೆ. ಚೇಳೂರು ಗ್ರಾಮದ ಮುನಿಯಪ್ಪ ಎನ್ನುವವರಿಗೆ ಸೇರಿದ ರೈತರ ಹಸುವೊಂದು ನಾಲ್ಕು ಕರುಗಳಿಗೆ ಜನ್ಮ ನೀಡಿದೆ. ಕಪ್ಪು ಬಿಳುಪಿನ ನಾಲ್ಕು ಮುದ್ದಾದ ಆರೋಗ್ಯವಂತ ಕರುಗಳಿಗೆ ಮುನಿಯಪ್ಪ ಅವರ ಮನೆಯ ಹಸು ಜನ್ಮ ನೀಡಿದೆ. ನಾಲ್ಕು ಕರುಗಳಲ್ಲಿ ಒಂದು ಹೆಣ್ಣು ಹಾಗೂ ಮೂರು ಗಂಡು ಕರುಗಳಾಗಿದ್ದು, ಸದ್ಯ ತಾಯಿ ಹಸು ಹಾಗೂ ನಾಲ್ಕೂ ಕರುಗಳು ಆರೋಗ್ಯವಾಗಿವೆ. ಒಮ್ಮೆಲೆ ನಾಲ್ಕು ಕರುಗಳ ಜನನದಿಂದ ರೈತ ಮುನಿಯಪ್ಪ ಅವರ ಮನೆಯಲ್ಲಿ ಖುಷಿ ಮನೆ ಮಾಡಿದೆ.
ಇನ್ನು 2023ರಲ್ಲಿ ಇದು ಎರಡನೇ ಘಟನೆಯಾಗಿದೆ. ಈ ಹಿಂದೆ ಬಾಗಲಕೋಟೆ ಜಿಲ್ಲೆಯ ಆಸಂಗಿ ಗ್ರಾಮದಲ್ಲಿ ಹಸುವೊಂದು ಒಂದೇ ಬಾರಿಗೆ 4 ಕರುಗಳಿಗೆ ಜನ್ಮ ನೀಡಿತ್ತು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದ ಮಹಾವೀರ ಶಿರಹಟ್ಟಿ ಎಂಬ ರೈತರಿಗೆ ಸೇರಿದ ಹಸು ಜನವರಿ 12ರಂದು ನಾಲ್ಕು ಆರೋಗ್ಯವಂತ ಕರುಗಳಿಗೆ ಜನ್ಮ ನೀಡಿತ್ತು. ಎರಡು ಹೆಣ್ಣು, ಎರಡು ಗಂಡು ಕರುಗಳಿಗೆ ಜನ್ಮ ನೀಡಿತ್ತು. ಇನ್ನು ಈ ಅಚ್ಚರಿಯನ್ನು ನೋಡಲು ಜನ ತಂಡೋಪಾದಿಯಲ್ಲಿ ಆಗಮಿಸಿ ಕರುಗಳನ್ನು ಮುದ್ದಾಡಿದ್ದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications