ಸ್ವಾತಂತ್ರ್ಯಕ್ಕಾಗಿ ಆರ್ಎಸ್ಎಸ್ ಬೆವರು ಸುರಿಸಿಲ್ಲ: ಪರಮೇಶ್ವರ್ ಕಟು ಟೀಕೆ
ತುಮಕೂರು, ಆಗಸ್ಟ್ 9: ಸ್ವಾತಂತ್ರ್ಯ ಹೋರಾಟ ಹಾಗೂ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಸಣ್ಣ ಬೆವರೂ ಹರಿಸದ ಆರ್ಎಸ್ಎಸ್ಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ಹಕ್ಕಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ತುಮಕೂರಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕ್ವಿಟ್ ಇಂಡಿಯಾ ಚಳುವಳಿಯ 76ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.
ಸ್ವಾತಂತ್ರ್ಯ ಹೋರಾಟದಲ್ಲಾಗಲಿ ಅಥವಾ ಕ್ವಿಟ್ ಇಂಡಿಯಾ ಚಳುವಳಿಯಲ್ಲಾಗಲಿ ಆರ್ಎಸ್ಎಸ್ ಭಾಗವಹಿಸಿರಲಿಲ್ಲ. ಸ್ವಾತಂತ್ರ್ಯ ಪಡೆಯಲು ಕಾಂಗ್ರೆಸ್ ಪಕ್ಷದ ನಾಯಕರು ಹೋರಾಡಿದ್ದಾರೆ. ನಮ್ಮ ಪಕ್ಷದ ಬಗ್ಗೆ ಮಾತನಾಡುವ ಹಕ್ಕು ಆರ್ಎಸ್ಎಸ್ಗಾಗಲಿ ಬಿಜೆಪಿಗಾಗಲಿ ಇಲ್ಲ ಎಂದು ವಾಗ್ದಾಳಿ ನಡೆಸಿದರು.

1942ರಲ್ಲಿ ಅಖಿಲ ಭಾರತ ಕಾಂಗ್ರೆಸ್ ಅಧಿವೇಶ ನಡೆಸಿ, ಬ್ರಿಟಿಷರನ್ನು ದೇಶಬಿಟ್ಟು ತೊಲಗಿ ಎಂಬ ಸಂದೇಶದೊಂದಿಗೆ ದೊಡ್ಡ ಮಟ್ಟದ ಹೋರಾಟ ನಡೆಸಿತು. ಇದರ ತೀವ್ರತೆ ಹೆಚ್ಚಿಸಲು ಮಾಡು ಇಲ್ಲವೇ ಮಡಿ ಎಂಬ ಘೋಷಣೆಯನ್ನು ಮಹಾತ್ಮ ಗಾಂಧೀಜಿ ಅವರು ಹೊರಡಿಸಿದರು.
ತಮ್ಮ ಬಿಗಿ ಸಡಿಲವಾಗುತ್ತಿರುವುದನ್ನು ಅರಿತ ಬ್ರಿಟಿಷರು ಸ್ವಾತಂತ್ರ್ಯ ಕೊಡಲು ಒಪ್ಪಿದರು. ಈ ಹೋರಾಟದಲ್ಲಿ ಕಾಂಗ್ರೆಸ್ನ ಹಲವು ನಾಯಕರು ಪ್ರಾಣ ತ್ಯಾಗ ಮಾಡಿದ್ದಾರೆ. ಅವರನ್ನು ಸ್ಮರಿಸಿ ನಮನ ಸಲ್ಲಿಸೋಣ ಎಂದರು.
ಪ್ರಸ್ತುತ ಸ್ಥಳೀಯ ಚುನಾವಣೆ ಘೋಷಣೆಯಾಗಿದೆ. ಈ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಳ್ಳದೇ ಪಕ್ಷದ ಅಡಿಯಲ್ಲಿ ಚುನಾವಣೆ ಎದುರಿಸಲಿದ್ದೇವೆ ಎಂದು ಹೇಳಿದರು.
ಲೋಕಸಭೆ ಚುನಾವಣೆ ಕೂಡ ಸಮೀಪಿಸುತ್ತಿದ್ದು, ಈ ಚುನಾವಣೆ ಸವಾಲಾಗಿದೆ. ಈಗಿಲಿಂದಲೇ ಎಲ್ಲ ರೀತಿ ತಯಾರಿ ನಡೆಸಿ, ಗೆಲ್ಲಲೇ ಬೇಕು. ನಮ್ಮ ವ್ಯಾಪ್ತಿಗೆ ಬರುವ ಕ್ಷೇತ್ರದಲ್ಲಿ ಮೂರು ಸಂಸದರು ಕಾಂಗ್ರೆಸ್ ನವರೇ ಇದ್ದಾರೆ. ಅವರನ್ನು ಮತ್ತೆ ಗೆಲ್ಲಿಸಿಕೊಳ್ಳಲೇ ಬೇಕು. ಎಲ್ಲ ಮುಖಂಡರು , ಕಾರ್ಯಕರ್ತರು ಚುರುಕಾಗಿ ತಯಾರಿ ನಡೆಸಿ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಟಿ.ಬಿ. ಜಯಚಂದ್ರ, ಸಂಸದ ಮುದ್ದ ಹನುಮೇಗೌಡ , ವೆಂಕಟ ರಮಣಪ್ಪ ಇದ್ದರು.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications