ಗಂಗಾಕಲ್ಯಾಣ ಯೋಜನೆಯಲ್ಲಿ ಅಕ್ರಮ ತಡೆಗಟ್ಟಿ: ಡಿಸಿಎಂ ಸೂಚನೆ
ಕೊರಟಗೆರೆ, ಸೆಪ್ಟೆಂಬರ್ 17: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿತರಿಸಲಾಗಿರುವ ಪಂಪ್ ಸೆಟ್ ಗಳ ದುರುಪಯೋಗವನ್ನು ತಡೆಯಬೇಕು ಎಂದು ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸೂಚಿಸಿದರು.
ಕೊರಟಗೆರೆಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ರೈತರು ನಷ್ಟದ ಬೆಳೆ ಬೆಳೆದು ನೊಂದುಕೊಳ್ಳುವ ಬದಲು ಲಾಭದಾಯಕ ಬೆಳೆ ಬೆಳೆಯುವತ್ತ ಚಿಂತನೆ ನಡೆಸಿ,ತುಮಕೂರಿನ ರೈತರಿಗೆ ಬೆಂಗಳೂರು ಸಮೀಪವಿರುವುದರಿಂದ ಮಾರುಕಟ್ಟೆ ಸಮಸ್ಯೆಯೂ ಇರುವುದಿಲ್ಲ ಎಂದು ಸಲಹೆ ನೀಡಿದರು.
ಸಿದ್ದರಾಮಯ್ಯ ಜನ್ಮ ಜಾಲಾಡಿ, ಪರಂ ಮೇಲೆ ಗೂಬೆ ಕೂರಿಸಿದ ಈಶ್ವರಪ್ಪ
ಕೊರಟಗೆರೆ ಯಲ್ಲಿ ಡಾ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಮಂಡಳಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮ ಮಂಡಳಿ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಪಂಪ್ ಸೆಟ್ ಮತ್ತು ಪೂರಕ ಸಾಮಗ್ರಿಗಳನ್ನು ವಿತರಿಸಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ 75 ರೈತರಿಗೆ ಪಂಪ್ ಸೆಟ್ಗಳನ್ನು ವಿತರಿಸಲಾಗಿದೆ. ಕಳೆದ 40 ವರ್ಷದಿಂದ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಪರಿಶಿಷ್ಟ ವರ್ಗದವರ ಕಲ್ಯಾಣಕ್ಕೆ ಸಾಕಷ್ಟು ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ.
ಮಹತ್ವ ಪಡೆದುಕೊಂಡ ಸಿದ್ದರಾಮಯ್ಯ-ಪರಮೇಶ್ವರ್ ರಹಸ್ಯ ಮಾತುಕತೆ
ಅದರ ಭಾಗವಾಗಿ ರಾಜ್ಯ ಸರಕಾರ ಗಂಗಾ ಕಲ್ಯಾಣ ಯೋಜನೆ ತಂದು ಎಸ್ಸಿ ಎಸ್ಟಿ ರೈತರ ಸಹಾಯಕ್ಕಾಗಿ ನಿಂತಿದೆ. ಈ ರೈತರಿಗೆ ತಲಾ ಲಕ್ಷ ಮೊತ್ತದ ಪಂಪ್ ಸೆಟ್ ಹಾಗೂ ಪೂರಕ ಸಾಮಾಗ್ರಿ ನೀಡಿದೆ. ಇದರಲ್ಲಿ ಮೂರುವರೆ ಲಕ್ಷ ರು. ಸರಕಾರ ಸಬ್ಸಿಡಿ ದರದಲ್ಲಿ ನೀಡಲಿದೆ. ಉಳಿದ ಐವತ್ತು ಸಾವಿರ ಹಣವನ್ನು ಮಾತ್ರ ರೈತ ತುಂಬಬೇಕಿದೆ ಎಂದರು.
ಪರಂಗೆ ಸಂಪುಟ ಬಿಸಿ ತುಪ್ಪ, ಸ್ವಲ್ಪ ಆಯ ತಪ್ಪಿದರೂ ಬಿಜೆಪಿಗೆ ಕಪ್!
ಈಗ ವಿತರಿಸಿರುವ ಪಂಪ್ ಸೆಟ್ಗಳು ಸೂಕ್ತ ರೀತಿಯಲ್ಲಿ ಬಳಕೆಯಾಗುತ್ತಿದೆಯೇ ಎಂದು ಅಧಿಕಾರಿಗಳು ಪರಿಶೀಲನೆ ನಡೆಸುವಂತೆ ಸೂಚಿಸಿದರು. ಐದು ವರ್ಷದಲ್ಲಿ ನೀಡಿರುವ ಪಂಪ್ ಸೆಟ್ಗಳ ಬಳಕೆಯ ಮಾಹಿತಿ ತರಿಸಿಕೊಳ್ಳಿ. ದುರುಪಯೋಗವಾಗಿದ್ದರೆ ನನ್ನ ಗಮನಕ್ಕೆ ತನ್ನಿ ಎಂದರು.
ಪರಿಶಿಷ್ಟ ಜಾತಿ ಮತ್ತು ಪಂಗಡದವರ ಏಳಿಗೆಗಾಗಿ ವರ್ಷಕ್ಕೆ 75 ಕೋಟಿ ರೂಗಳಂತೆ ಐದು ವರ್ಷಕ್ಕೆ 82 ಸಾವಿರ ಕೋಟಿ ರೂ.ಗಳನ್ನು ತೆಗೆದಿಟ್ಟಿದೆ. ಈ ಮೊತ್ತ ಸಂಪೂರ್ಣ ಸದ್ಬಳಕೆಯಾಗಬೇಕು ಎಂಬುದೇ ಸರಕಾರದ ಉದ್ದೇಶ. ಈ ಹಣದಲ್ಲಿಯೇ ನಿಮಗೆ ಎಲ್ಲ ಸಲವತ್ತು ನೀಡಲಾಗುತ್ತಿದೆ ಎಂದರು.