ಗಂಗಾಕಲ್ಯಾಣ ಯೋಜನೆಯಲ್ಲಿ ಅಕ್ರಮ ತಡೆಗಟ್ಟಿ: ಡಿಸಿಎಂ ಸೂಚನೆ
ಕೊರಟಗೆರೆ, ಸೆಪ್ಟೆಂಬರ್ 17: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿತರಿಸಲಾಗಿರುವ ಪಂಪ್ ಸೆಟ್ ಗಳ ದುರುಪಯೋಗವನ್ನು ತಡೆಯಬೇಕು ಎಂದು ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸೂಚಿಸಿದರು.
ಕೊರಟಗೆರೆಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ರೈತರು ನಷ್ಟದ ಬೆಳೆ ಬೆಳೆದು ನೊಂದುಕೊಳ್ಳುವ ಬದಲು ಲಾಭದಾಯಕ ಬೆಳೆ ಬೆಳೆಯುವತ್ತ ಚಿಂತನೆ ನಡೆಸಿ,ತುಮಕೂರಿನ ರೈತರಿಗೆ ಬೆಂಗಳೂರು ಸಮೀಪವಿರುವುದರಿಂದ ಮಾರುಕಟ್ಟೆ ಸಮಸ್ಯೆಯೂ ಇರುವುದಿಲ್ಲ ಎಂದು ಸಲಹೆ ನೀಡಿದರು.
ಕೊರಟಗೆರೆ ಯಲ್ಲಿ ಡಾ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಮಂಡಳಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮ ಮಂಡಳಿ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಪಂಪ್ ಸೆಟ್ ಮತ್ತು ಪೂರಕ ಸಾಮಗ್ರಿಗಳನ್ನು ವಿತರಿಸಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ 75 ರೈತರಿಗೆ ಪಂಪ್ ಸೆಟ್ಗಳನ್ನು ವಿತರಿಸಲಾಗಿದೆ. ಕಳೆದ 40 ವರ್ಷದಿಂದ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಪರಿಶಿಷ್ಟ ವರ್ಗದವರ ಕಲ್ಯಾಣಕ್ಕೆ ಸಾಕಷ್ಟು ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ.
ಅದರ ಭಾಗವಾಗಿ ರಾಜ್ಯ ಸರಕಾರ ಗಂಗಾ ಕಲ್ಯಾಣ ಯೋಜನೆ ತಂದು ಎಸ್ಸಿ ಎಸ್ಟಿ ರೈತರ ಸಹಾಯಕ್ಕಾಗಿ ನಿಂತಿದೆ. ಈ ರೈತರಿಗೆ ತಲಾ ಲಕ್ಷ ಮೊತ್ತದ ಪಂಪ್ ಸೆಟ್ ಹಾಗೂ ಪೂರಕ ಸಾಮಾಗ್ರಿ ನೀಡಿದೆ. ಇದರಲ್ಲಿ ಮೂರುವರೆ ಲಕ್ಷ ರು. ಸರಕಾರ ಸಬ್ಸಿಡಿ ದರದಲ್ಲಿ ನೀಡಲಿದೆ. ಉಳಿದ ಐವತ್ತು ಸಾವಿರ ಹಣವನ್ನು ಮಾತ್ರ ರೈತ ತುಂಬಬೇಕಿದೆ ಎಂದರು.
ಈಗ ವಿತರಿಸಿರುವ ಪಂಪ್ ಸೆಟ್ಗಳು ಸೂಕ್ತ ರೀತಿಯಲ್ಲಿ ಬಳಕೆಯಾಗುತ್ತಿದೆಯೇ ಎಂದು ಅಧಿಕಾರಿಗಳು ಪರಿಶೀಲನೆ ನಡೆಸುವಂತೆ ಸೂಚಿಸಿದರು. ಐದು ವರ್ಷದಲ್ಲಿ ನೀಡಿರುವ ಪಂಪ್ ಸೆಟ್ಗಳ ಬಳಕೆಯ ಮಾಹಿತಿ ತರಿಸಿಕೊಳ್ಳಿ. ದುರುಪಯೋಗವಾಗಿದ್ದರೆ ನನ್ನ ಗಮನಕ್ಕೆ ತನ್ನಿ ಎಂದರು.
ಪರಿಶಿಷ್ಟ ಜಾತಿ ಮತ್ತು ಪಂಗಡದವರ ಏಳಿಗೆಗಾಗಿ ವರ್ಷಕ್ಕೆ 75 ಕೋಟಿ ರೂಗಳಂತೆ ಐದು ವರ್ಷಕ್ಕೆ 82 ಸಾವಿರ ಕೋಟಿ ರೂ.ಗಳನ್ನು ತೆಗೆದಿಟ್ಟಿದೆ. ಈ ಮೊತ್ತ ಸಂಪೂರ್ಣ ಸದ್ಬಳಕೆಯಾಗಬೇಕು ಎಂಬುದೇ ಸರಕಾರದ ಉದ್ದೇಶ. ಈ ಹಣದಲ್ಲಿಯೇ ನಿಮಗೆ ಎಲ್ಲ ಸಲವತ್ತು ನೀಡಲಾಗುತ್ತಿದೆ ಎಂದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications