ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಮಕೂರು ಅಭ್ಯರ್ಥಿಯ ಗೆಲುವಿಗಾಗಿ ಡಿಸಿಎಂ ಪರಮೇಶ್ವರ ಅವರಿಂದ ವಿಶೇಷ ಪೂಜೆ

|
Google Oneindia Kannada News

ತುಮಕೂರು, ಮಾರ್ಚ್ 30: ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ವರಿಷ್ಠ ದೇವೇಗೌಡರೇ ಅಭ್ಯರ್ಥಿ ಎಂದು ಘೋಷಣೆಯಾಗಿದೆ. ಕಾಂಗ್ರೆಸ್ ಎಂಪಿ ಮುದ್ದಹನುಮೇಗೌಡ ಕಣದಿಂದ ಹಿಂದೆ ಸರಿದಿದ್ದಾರೆ. ಮೇಲ್ನೋಟಕ್ಕೆ ಎಲ್ಲಾ ತೊಂದರೆ, ಸವಾಲುಗಳು ದೂರವಾದಂತಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಇದೀಗ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ತುಮಕೂರು ಅಭ್ಯರ್ಥಿಯ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿದ್ದಾರೆ. ಕಾಡಸಿದ್ದೇಶ್ವರ ಮಠದಲ್ಲಿ ಪೂಜೆ ಸಲ್ಲಿಸಿದ್ದಾರೆ. ನೊಣವಿನಕೆರೆಯಲ್ಲಿರುವ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದ ಡಿಸಿಎಂ ಪರಮೇಶ್ವರ್​, ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಸ್ವಾಮೀಜಿಯನ್ನು ಭೇಟಿಯಾಗಿದ್ದಾರೆ.

ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡಲು ಸಿದ್ಧ: ದೇವೇಗೌಡರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡಲು ಸಿದ್ಧ: ದೇವೇಗೌಡ

ಅಲ್ಲದೆ ಶ್ರೀಗಳ ಮಾರ್ಗದರ್ಶನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪ್ರಸಕ್ತ ರಾಜಕೀಯ ನಡೆಸಲು ಮೈತ್ರಿ ಸರ್ಕಾರಕ್ಕೆ ಗುರುಬಲ ತುಂಬುವಂತೆ ಪ್ರಾರ್ಥಿಸಿದ್ದಾರೆ ಎನ್ನಲಾಗಿದೆ.

Dcm paid special Pooja at kadasiddeshwar mutt in Tumkuru

ಸ್ವಾಮೀಜಿಯವರೊಂದಿಗೆ ರಾಜಕೀಯದ ಕುರಿತು ಚರ್ಚೆಯನ್ನೂ ನಡೆಸಿದ್ದಾರೆ. ಈ ಮಠಕ್ಕೆ ಸಚಿವ ಡಿ.ಕೆ. ಶಿವಕುಮಾರ್​ ಕೂಡ ಆಗಾಗ ಭೇಟಿ ಮಾಡುತ್ತಾರೆ. ಅಂತೂ ತುಮಕೂರು ಲೋಕಸಭಾ ಚುನಾವಣೆಗಿದ್ದ ತೊಡಕುಗಳೆಲ್ಲವೂ ದೂರವಾದಂತಾಗಿದೆ. ಎಚ್‌ಡಿ ದೇವೇಗೌಡ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.

English summary
Deputy Chief Minister Dr G Parameshwar visited to Kadasiddeshwar mutt of Tumkuru to pray the God for Deve Gowda win in Lok sabha election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X