ಸಿದ್ದಗಂಗಾ ಶ್ರೀಗಳ ಆರೋಗ್ಯದ ಬಗ್ಗೆ ದೇವೇಗೌಡರ ಮಾರ್ಮಿಕ ಹೇಳಿಕೆ!
ತುಮಕೂರು, ಜನವರಿ 16: ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಸಿದ್ದಗಂಗಾ ಶ್ರೀಗಳ ದರ್ಶನ ಪಡೆದು ಶ್ರೀಗಳ ಆರೋಗ್ಯದ ಬಗ್ಗೆ ಮಾರ್ಮಿಕ ಹೇಳಿಕೆ ನೀಡಿದ್ದಾರೆ.
ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದ ದೇವೇಗೌಡ ಅವರು, 'ಸಾವನ್ನು ತಡೆದಿಟ್ಟುಕೊಳ್ಳುವ ಶಕ್ತಿ ಇದ್ದ ಭೀಷ್ಮ ಕೂಡ ಉತ್ತರಾಯಣ ಪುಣ್ಯಕಾಲದಲ್ಲಿ ದೇಹತ್ಯಾಗ ಮಾಡಿದ, ಈಗ ಉತ್ತರಾಯಣ ಪುಣ್ಯಕಾಲ ಪ್ರಾರಂಭವಾಗಿದೆ' ಎಂದಿದ್ದಾರೆ.
ಶ್ರೀಗಳ ಆರೋಗ್ಯದ ಕುರಿತ ದೇವೇಗೌಡ ಅವರ ಈ ಹೇಳಿಕೆ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇಂದೇ ಆಸ್ಪತ್ರೆಯಿಂದ ಶ್ರೀಗಳನ್ನು ಮಠಕ್ಕೆ ಕರೆತಂದಿರುವುದನ್ನೂ, ದೇವೇಗೌಡರ ಈ ಹೇಳಿಕೆಯನ್ನು ಸಮೀಕರಿಸಿದರೆ ಹೊಸ ಅರ್ಥವೊಂದು ಹುಟ್ಟುತ್ತಿರುವ ಅನುಮಾನ ಸಹ ವ್ಯಕ್ತವಾಗುತ್ತದೆ.

ಸ್ವಾಮಿಗಳನ್ನು 1968ರಿಂದಲೂ ನಾನು ಬಲ್ಲೆ. ಅವರು ಶಿಕ್ಷಣ, ಅನ್ನದಾನ, ಸಮಾಜ ಸೇವೆಗಳ ಮೂಲಕ ದೇವರನ್ನು ತಲುಪುವ ದಾರಿಯನ್ನು ಕಂಡುಕೊಂಡಿದ್ದಾರೆ ಎಂದು ದೇವೇಗೌಡ ಅವರು ಶ್ರೀಗಳ ಜೊತೆಗಿನ ಸಾಮಿಪ್ಯವನ್ನು ನೆನಪಿಸಿಕೊಂಡಿದ್ದಾರೆ.
ಶ್ರೀಗಳಿಗೆ 111 ವಯಸ್ಸಾಗಿದೆ. ಪ್ರಕೃತಿ ಸಹಜವಾಗಿ ಆರೋಗ್ಯದಲ್ಲಿ ವ್ಯತ್ಯ ಆಗಿದೆ. ಪುನರಪಿ ಜನನಂ ಅನ್ನು ಹಾಗೆ ಶ್ರೀಗಳು ಪರಮೇಶ್ವರನ ಸಾನಿಧ್ಯಕ್ಕೆ ಹೋಗಲು ದಾರಿ ಮಾಡಿಕೊಂಡಿದ್ದಾರೆ ಎನಿಸುತ್ತದೆ ಎಂದು ದೇವೇಗೌಡರು ಮಾರ್ಮಿಕವಾಗಿ ನುಡಿದಿದ್ದಾರೆ.
ಉತ್ತರಾಯಣ ಪುಣ್ಯಕಾಲದಲ್ಲಿ ಶ್ರೀಗಳ ದರ್ಶನ ಪಡೆದಿದ್ದೇನೆ. ವೈದ್ಯರು ಹೇಳುವ ಪ್ರಕಾರ ಅವರ ರಕ್ತದೊತ್ತಡ ಮತ್ತು ಸಕ್ಕರೆ ಅಂಶ ಸಾಮಾನ್ಯವಾಗಿದೆ. ಆದರೆ ಉಸಿರಾಟದಲ್ಲಿ ಸ್ವಲ್ಪ ಸಮಸ್ಯೆ ಇದೆ. ಶ್ರೀಗಳು ಕೆಲವೊಮ್ಮೆ ತಾವೇ ಉಸಿರಾಡುತ್ತಾರೆ, ಅದಾಗದೇ ಇದ್ದಾಗ ವೆಂಟಿಲೇಟರ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ದೇವೇಗೌಡರು ಮಾಹಿತಿ ನೀಡಿದರು.
-
ಅಪ್ಪನ ಸಕ್ಕರೆ ಚಟ ಬಿಡಿಸಲು ಮೋದಿ ಮೊರೆ ಹೋದ ಯುವಕ: ವಿಡಿಯೋ Viral, ಪ್ರಧಾನಿಯಿಂದ ಬಂತು ಅಚ್ಚರಿಯ ರಿಪ್ಲೈ -
ವಾಸ್ತು ಮಾತ್ರ ಸಾಲದು! ನಿಮ್ಮ ಜಾತಕವೇ ಯಶಸ್ಸನ್ನು ನಿರ್ಧರಿಸುತ್ತದೆ -
Vastu Alert: ಹಳೆಯ ಬಾವಿ ಮೇಲೆ ಮನೆ ಕಟ್ಟಿದ್ರೆ ಏನಾಗುತ್ತದೆ? ಇಲ್ಲಿದೆ ವಾಸ್ತು ಸತ್ಯಗಳು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications