ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇವೇಗೌಡರಿಗೆ ಗಂಗೆ ಶಾಪ ಇದೆ, ತುಮಕೂರಲ್ಲಿ ಸ್ಪರ್ಧಿಸಿದರೆ ಸೋಲು ಖಚಿತ: ಸುರೇಶ್ ಗೌಡ

|
Google Oneindia Kannada News

ತುಮಕೂರು, ಮಾರ್ಚ್ 19: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರಿಗೆ ಗಂಗೆ ಶಾಪ ಇದೆ. ಅವರು ತುಮಕೂರಿನಿಂದ ಸ್ಪರ್ಧಿಸಿದರೆ ಸೋಲು ಖಚಿತ ಎಂದು ತುಮಕೂರು ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಹೇಳಿದ್ದಾರೆ.

ತುಮಕೂರು ಟಿಕೆಟ್ : ಪರಮೇಶ್ವರ ಭೇಟಿಯಾದ ದಿನೇಶ್ ಗುಂಡೂರಾವ್ ತುಮಕೂರು ಟಿಕೆಟ್ : ಪರಮೇಶ್ವರ ಭೇಟಿಯಾದ ದಿನೇಶ್ ಗುಂಡೂರಾವ್

ದೇವೇಗೌಡರಿಗೆ ಗಂಗೆ ಶಾಪ ಇರುವುದಾಗಿ ಈಗಾಗಲೇ ಜೋತಿಷಿಗಳು ಹೇಳಿದ್ದಾರೆ. ಈ ವಿಚಾರ ಸ್ವತಃ ದೇವೇಗೌಡರಿಗೂ ತಿಳಿದಿದೆ. ಈ ಶಾಪ ಇರುವಾಗ ಅವರು ತುಮಕೂರಿನಿಂದ ಲೋಕಸಭೆಗೆ ಸ್ಪರ್ಧಿಸಿದರೆ ಸೋಲುವುದು ಗ್ಯಾರಂಟಿ ಎಂದು ಸುರೇಶ್ ಗೌಡ ಭವಿಷ್ಯ ನುಡಿದಿದ್ದಾರೆ.

ದೇವೇಗೌಡರು ಸ್ಪರ್ಧೆ ಮಾಡಿದರೆ ಹೆದರುವುದಕ್ಕೆ ನಾನು ಸೀರೆ ಉಟ್ಟಿಲ್ಲ: ಜಿಎಸ್ ಬಿದೇವೇಗೌಡರು ಸ್ಪರ್ಧೆ ಮಾಡಿದರೆ ಹೆದರುವುದಕ್ಕೆ ನಾನು ಸೀರೆ ಉಟ್ಟಿಲ್ಲ: ಜಿಎಸ್ ಬಿ

ಹೇಮಾವತಿ ನೀರು ಬಿಡದೆ ತುಮಕೂರು ಜಿಲ್ಲೆಗೆ ದೇವೇಗೌಡರು ವಂಚಿಸಿದ್ದಾರೆ. ಲಕ್ಷಾಂತರ ರೈತರ ಕಣ್ಣೀರ ಶಾಪದಿಂದಾಗಿ ಗಂಗಾ ಮಾತೆ ದೇವೇಗೌಡರ ಮೇಲೆ ಮುನಿಸಿಕೊಂಡು ಶಾಪ ನೀಡಿದ್ದಾಳೆ. ಈ ಶಾಪದಿಂದ ಅವರು ಸೋಲುವುದು ನಿಶ್ಚಿತ ಎಂದಿದ್ದಾರೆ.

Devegowa has Ganga mata curse he will be defeated if contested in Tumakuru BJP leader Suresh Gowda

ತುಮಕೂರು ಕ್ಷೇತ್ರದಲ್ಲಿ ಬಿಜೆಪಿಯ ಸಂಭಾವ್ಯ ಅಭ್ಯರ್ಥಿ ಪಟ್ಟಿಯಲ್ಲಿ ನನ್ನ ಹೆಸರೂ ಇದೆ. ಸಾಮಾಜಿಕ ಜಾಲತಾಣದಲ್ಲಿ ಪಕ್ಷ ನಡೆಸಿದ ಸಮೀಕ್ಷೆಯಲ್ಲಿ ನನ್ನ ಪರ ಹೆಚ್ಚಿನವರು ಒಲವು ತೋರಿಸಿದ್ದಾರೆ. ಅಲ್ಲದೆ, ನಾನು ಯಡಿಯೂರಪ್ಪ ಅವರ ಶಿಷ್ಯ ಎಂಬುದು ಜನರಿಗೆ ಗೊತ್ತು. ಹೀಗಾಗಿ ನನಗೇ ಟಿಕೆಟ್ ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತುಮಕೂರು ವಾಪಸ್ ಕೊಡಿ: ದೇವೇಗೌಡರಿಗೆ ಪರಮೇಶ್ವರ್ ಮನವಿ ತುಮಕೂರು ವಾಪಸ್ ಕೊಡಿ: ದೇವೇಗೌಡರಿಗೆ ಪರಮೇಶ್ವರ್ ಮನವಿ

ತುಮಕೂರು ಲೋಕಸಭೆ ಕ್ಷೇತ್ರವನ್ನು ಜೆಡಿಎಸ್‌ಗೆ ಕಾಂಗ್ರೆಸ್ ಬಿಟ್ಟುಕೊಟ್ಟಿದೆ. ಈ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಪ್ರಬಲ ಅಭ್ಯರ್ಥಿಗಳು ಇಲ್ಲದ ಕಾರಣ ದೇವೇಗೌಡ ಅವರೇ ಇಲ್ಲಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

English summary
Tumakuru BJP leader Suresh Gowda said that, Deve Gowda has Ganga Mata curse. So he will get defeated if he contest in Lok Sabha elections from Tumakuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X