ಭಕ್ತರ ಒತ್ತಡಕ್ಕೆ ಮಣಿದು ಕಿಟಕಿ ಮೂಲಕ ಸಿದ್ದಗಂಗಾ ಶ್ರೀ ದರ್ಶನಕ್ಕೆ ಅವಕಾಶ
ತುಮಕೂರು, ಜನವರಿ 16 : ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಮೇಲೆ ಜನರಿಗೆ ಇರುವ ಪ್ರೀತಿ ಮತ್ತು ಅದಕ್ಕೆ ಅವರು ಹಾಗೂ ಮಠದ ಸ್ಪಂದನೆ ಹೇಗಿರುತ್ತದೆ ಎಂಬುದಕ್ಕೆ ಬುಧವಾರ ಮತ್ತೆ ಸಾಕ್ಷ್ಯ ದೊರೆಯಿತು. ತೀವ್ರತರದ ಅನಾರೋಗ್ಯ ಸಮಸ್ಯೆ ಇದ್ದರೂ ಬುಧವಾರ ಬೆಳಗಿನ ಜಾವ ಶ್ರೀಗಳ ಆಸೆಯಂತೆಯೇ ಮಠಕ್ಕೆ ಕರೆತರಲಾಗಿದೆ.
ಆದರೆ, ಶಿವಕುಮಾರ ಸ್ವಾಮೀಜಿ ಆರೋಗ್ಯದ ಬಗ್ಗೆ ಆತಂಕಗೊಂಡಿದ್ದ ಭಕ್ತ ಸಮೂಹ ಭಾರೀ ಸಂಖ್ಯೆಯಲ್ಲಿ ಮಠಕ್ಕೆ ಧಾವಿಸಿದೆ. ಈ ಮಧ್ಯೆ ಕಿರಿಯ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿ ಕಣ್ಣೀರು ಹಾಕಿದ್ದರಿಂದ ಪರಿಸ್ಥಿತಿ ಮತ್ತಷ್ಟು ಭಾವನಾತ್ಮಕ ಆಗಿದೆ. ಬೆಳಗ್ಗೆಯಿಂದ ವಿಪರೀತ ಸಂಖ್ಯೆಯಲ್ಲಿ ಜನರು ಸೇರಿದರೂ, ಪರಿಸ್ಥಿತಿ ಸೂಕ್ಷ್ಮವಾಗಿದ್ದರೂ ಮಠದಲ್ಲಿ ಕಿಟಕಿ ಮೂಲಕ ಶಿವಕುಮಾರ ಸ್ವಾಮೀಜಿ ನೋಡಲು ಅವಕಾಶ ನೀಡಲಾಗಿದೆ.

ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ದಗಂಗಾ ಮಠವು ಸಾವಿರಾರು ವಿದ್ಯಾರ್ಥಿಗಳ ಪಾಲಿಗೆ ಅನ್ನ-ಶಿಕ್ಷಣ-ಜ್ಞಾನವನ್ನು ನೀಡುತ್ತಿದೆ. ಈ ಕೈಂಕರ್ಯದಲ್ಲಿ ಶಿವಕುಮಾರ ಸ್ವಾಮೀಜಿ ಬದ್ಧತೆ ಹಾಗೂ ಶ್ರದ್ಧೆಯ ಬಗ್ಗೆ ರಾಜ್ಯ ಮಾತ್ರವಲ್ಲ, ದೇಶದಾದ್ಯಂತ ಗೌರವ ಇದೆ. 111 ವರ್ಷದ ಸ್ವಾಮೀಜಿಗೆ ಈಚೆಗೆ ಆರೋಗ್ಯ ಸಮಸ್ಯೆ ಎದುರಾಗಿತ್ತು. ಆ ನಂತರ ಅವರಿಗೆ ಚೆನ್ನೈನಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಲಾಗಿತ್ತು.

ಆದರೆ, ಅಲ್ಲಿಂದ ವಾಪಸಾದ ನಂತರ ಅವರ ಚೇತರಿಕೆ ನಿಧಾನವಾಗುತ್ತಿದೆ. ವಿವಿಧ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡು, ಚಿಕಿತ್ಸೆ ಮುಂದುವರಿಸಲಾಗಿದೆ. ಈ ಮಧ್ಯೆ ಶ್ರೀಗಳಿಗೆ ಭಾರತ ರತ್ನ ಗೌರವ ನೀಡಬೇಕು ಎಂದು ಕಾಂಗ್ರೆಸ್ ನ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿವಿಧ ನಾಯಕರು ಆಗ್ರಹಿಸಿದ್ದಾರೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications