ಉಪ ಚುನಾವಣೆಗೆ ಡಿ. ಕೆ. ರವಿ ಪತ್ನಿ ಸ್ಪರ್ಧೆ; ಗೌರಮ್ಮ ಆಕ್ರೋಶ
ಬೆಂಗಳೂರು, ಅಕ್ಟೋಬರ್ 02: ಐಎಎಸ್ ಅಧಿಕಾರಿಯಾಗಿದ್ದ ಡಿ. ಕೆ. ರವಿ ಪತ್ನಿ ಹೆಚ್. ಕುಸುಮಾ ಉಪ ಚುನಾವಣೆ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಡಿ. ಕೆ. ರವಿ ತಾಯಿ ಗೌರಮ್ಮ ಕುಸುಮಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮಗನ ಹೆಸರು ಬಳಕೆ ಮಾಡಬಾರದು ಎಂದು ಹೇಳಿದ್ದಾರೆ.
ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಗೌರಮ್ಮ ಹೆಚ್. ಕುಸುಮಾ ಮತ್ತು ಅವರ ತಂದೆ ಹನುಮಂತರಾಯಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. "ನಾವು ಕಷ್ಟದಲ್ಲಿದ್ದಾಗ ನನ್ನ ಮಗನ ದುಡ್ಡಲ್ಲಿ ಒಂದು ಪೈಸೆನೂ ಕೊಡಲಿಲ್ಲ" ಎಂದು ಆರೋಪಿಸಿದರು.
"ಈಗ ನನ್ನ ಮಗನ ಹೆಸರು ಹೇಳಿಕೊಂಡು ಚುನಾವಣೆಗೆ ನಿಲ್ಲುತ್ತಿದ್ದಾಳೆ. ಆಕೆ ಏನಾದರೂ ಮಾಡಲಿ ನನ್ನ ಮಗನ ಹೆಸರನ್ನು ಬಳಕೆ ಮಾಡಿಕೊಂಡು ಚುನಾವಣೆ ಪ್ರಚಾರ ಮಾಡುವುದು ಬೇಡ" ಎಂದು ಗೌರಮ್ಮ ಹೇಳಿದರು.
ಡಿ. ಕೆ. ರವಿ ಪತ್ನಿ ಕುಸುಮಾ ಅಥವ ಮಾವ ಹನುಮಂತರಾಯಪ್ಪ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದೆ.

ಒಂದು ಕಡ್ಡಿ, ಕರ್ಪೂರ ಹಚ್ಚಲಿಲ್ಲ
"ನನ್ನಗಂಡ ಅಂತ ಒಂದು ಕಡ್ಡಿ ಕರ್ಪೂರ ಹಚ್ಚಲಿಲ್ಲ. ನನ್ನ ಮಗನ ಜೊತೆಯಲ್ಲಿಯೇ ಅವಳು ಹೋಗಿ ಬಿಟ್ಟಳು ಅಂತ ನಾನು ತಿಳಿದುಕೊಂಡಿದ್ದೇನೆ. ನನ್ನ ಮಗನಿಗೆ ಬಂದ ದುಡ್ಡಲ್ಲಿ ಒಂದು ರೂಪಾಯಿನೂ ನಮ್ಮ ಕಷ್ಟ ಸುಖಕ್ಕೆ ಕೊಡಲಿಲ್ಲ" ಎಂದು ಡಿ. ಕೆ. ರವಿ ತಾಯಿ ಗೌರಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಗನ ಹೆಸರು ಏಕೆ ಎತ್ತಿಕೊಳ್ಳಬೇಕು
"ಅವಳು ಏಕೆ ನನ್ನ ಮಗನ ಹೆಸರು ಎತ್ತಿಕೊಂಡು ಚುನಾವಣೆಗೆ ನಿಲ್ಲಬೇಕು?. ನನ್ನ ಮಗನ ಹೆಸರು ಹೇಳಲು ಅವಳು ಯಾರು?. ಅಂದು ಮಣ್ಣಿಗೆ ಹಾಕಿ ಹೋದವಳು ಇಲ್ಲಿಯ ತನಕ ಬಂದಿಲ್ಲ. ಡಿ. ಕೆ. ರವಿ ಹೆಂಡತಿ ಅನ್ನುವ ಯೋಗ್ಯತೆ ಅವಳು ಕಳೆದುಕೊಂಡಿದ್ದಾಳೆ" ಎಂದು ಗೌರಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬ್ಯಾನರ್ಗಳಿಗೆ ಬೆಂಕಿ ಹಚ್ಚುವೆ
"ಅವಳು ಚುನಾವಣೆಗೆ ಆದರೂ ನಿಲ್ಲಲಿ, ಏನಾದರೂ ಮಾಡಲಿ ನನ್ನ ಮಗನ ಹೆಸರು, ಫೋಟೋ ಹಾಕಕೂಡದು. ಚುನಾವಣಾ ಪ್ರಚಾರದಲ್ಲಿ ಮಗನ ಫೋಟೋ ಬಳಸಿದರೆ ಬ್ಯಾನರ್, ಪಾಂಪ್ಲೆಟ್ಗಳಿಗೆ ಬೆಂಕಿ ಹಚ್ಚುತ್ತೇನೆ" ಎಂದು ಗೌರಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಆದಿಚುಂಚನಗಿರಿ ಮಠಕ್ಕೆ ಭೇಟಿ
ಹೆಚ್. ಕುಸುಮಾ ತಂದೆ ಹನುಮಂತರಾಯಪ್ಪ ಜೊತೆ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಗುರುವಾರ ಭೇಟಿ ನೀಡಿದ್ದರು. ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದಿದ್ದರು. ಆದರೆ, ಅವರು ಆರ್. ಆರ್. ನಗರ ಕ್ಷೇತ್ರದಿಂದ ಚುನಾವಣಾ ಕಣಕ್ಕೆ ಇಳಿಯುವ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ.
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei












Click it and Unblock the Notifications