ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪ ಚುನಾವಣೆಗೆ ಡಿ. ಕೆ. ರವಿ ಪತ್ನಿ ಸ್ಪರ್ಧೆ; ಗೌರಮ್ಮ ಆಕ್ರೋಶ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 02: ಐಎಎಸ್ ಅಧಿಕಾರಿಯಾಗಿದ್ದ ಡಿ. ಕೆ. ರವಿ ಪತ್ನಿ ಹೆಚ್. ಕುಸುಮಾ ಉಪ ಚುನಾವಣೆ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಡಿ. ಕೆ. ರವಿ ತಾಯಿ ಗೌರಮ್ಮ ಕುಸುಮಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮಗನ ಹೆಸರು ಬಳಕೆ ಮಾಡಬಾರದು ಎಂದು ಹೇಳಿದ್ದಾರೆ.

ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಗೌರಮ್ಮ ಹೆಚ್. ಕುಸುಮಾ ಮತ್ತು ಅವರ ತಂದೆ ಹನುಮಂತರಾಯಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. "ನಾವು ಕಷ್ಟದಲ್ಲಿದ್ದಾಗ ನನ್ನ ಮಗನ ದುಡ್ಡಲ್ಲಿ ಒಂದು ಪೈಸೆನೂ ಕೊಡಲಿಲ್ಲ" ಎಂದು ಆರೋಪಿಸಿದರು.

ಆರ್. ಆರ್. ನಗರ ಉಪ ಚುನಾವಣೆ; ಮೌನ ಮುರಿದ ಹನುಮಂತರಾಯಪ್ಪ ಆರ್. ಆರ್. ನಗರ ಉಪ ಚುನಾವಣೆ; ಮೌನ ಮುರಿದ ಹನುಮಂತರಾಯಪ್ಪ

"ಈಗ ನನ್ನ ಮಗನ ಹೆಸರು ಹೇಳಿಕೊಂಡು ಚುನಾವಣೆಗೆ ನಿಲ್ಲುತ್ತಿದ್ದಾಳೆ. ಆಕೆ ಏನಾದರೂ ಮಾಡಲಿ ನನ್ನ ಮಗನ ಹೆಸರನ್ನು ಬಳಕೆ ಮಾಡಿಕೊಂಡು ಚುನಾವಣೆ ಪ್ರಚಾರ ಮಾಡುವುದು ಬೇಡ" ಎಂದು ಗೌರಮ್ಮ ಹೇಳಿದರು.

ಮುನಿರತ್ನ ವಿರುದ್ಧ ಡಿ. ಕೆ. ರವಿ ಪತ್ನಿ ಕಣಕ್ಕೆ?, ಸ್ವಾಮೀಜಿ ಭೇಟಿಮುನಿರತ್ನ ವಿರುದ್ಧ ಡಿ. ಕೆ. ರವಿ ಪತ್ನಿ ಕಣಕ್ಕೆ?, ಸ್ವಾಮೀಜಿ ಭೇಟಿ

ಡಿ. ಕೆ. ರವಿ ಪತ್ನಿ ಕುಸುಮಾ ಅಥವ ಮಾವ ಹನುಮಂತರಾಯಪ್ಪ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದೆ.

ಆರ್. ಆರ್. ನಗರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮ? ಆರ್. ಆರ್. ನಗರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮ?

ಒಂದು ಕಡ್ಡಿ, ಕರ್ಪೂರ ಹಚ್ಚಲಿಲ್ಲ

ಒಂದು ಕಡ್ಡಿ, ಕರ್ಪೂರ ಹಚ್ಚಲಿಲ್ಲ

"ನನ್ನಗಂಡ ಅಂತ ಒಂದು ಕಡ್ಡಿ ಕರ್ಪೂರ ಹಚ್ಚಲಿಲ್ಲ. ನನ್ನ ಮಗನ ಜೊತೆಯಲ್ಲಿಯೇ ಅವಳು ಹೋಗಿ ಬಿಟ್ಟಳು ಅಂತ ನಾನು ತಿಳಿದುಕೊಂಡಿದ್ದೇನೆ. ನನ್ನ ಮಗನಿಗೆ ಬಂದ ದುಡ್ಡಲ್ಲಿ ಒಂದು ರೂಪಾಯಿನೂ ನಮ್ಮ ಕಷ್ಟ ಸುಖಕ್ಕೆ ಕೊಡಲಿಲ್ಲ" ಎಂದು ಡಿ. ಕೆ. ರವಿ ತಾಯಿ ಗೌರಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಗನ ಹೆಸರು ಏಕೆ ಎತ್ತಿಕೊಳ್ಳಬೇಕು

ಮಗನ ಹೆಸರು ಏಕೆ ಎತ್ತಿಕೊಳ್ಳಬೇಕು

"ಅವಳು ಏಕೆ ನನ್ನ ಮಗನ ಹೆಸರು ಎತ್ತಿಕೊಂಡು ಚುನಾವಣೆಗೆ ನಿಲ್ಲಬೇಕು?. ನನ್ನ ಮಗನ ಹೆಸರು ಹೇಳಲು ಅವಳು ಯಾರು?. ಅಂದು ಮಣ್ಣಿಗೆ ಹಾಕಿ ಹೋದವಳು ಇಲ್ಲಿಯ ತನಕ ಬಂದಿಲ್ಲ. ಡಿ. ಕೆ. ರವಿ ಹೆಂಡತಿ ಅನ್ನುವ ಯೋಗ್ಯತೆ ಅವಳು ಕಳೆದುಕೊಂಡಿದ್ದಾಳೆ" ಎಂದು ಗೌರಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬ್ಯಾನರ್‌ಗಳಿಗೆ ಬೆಂಕಿ ಹಚ್ಚುವೆ

ಬ್ಯಾನರ್‌ಗಳಿಗೆ ಬೆಂಕಿ ಹಚ್ಚುವೆ

"ಅವಳು ಚುನಾವಣೆಗೆ ಆದರೂ ನಿಲ್ಲಲಿ, ಏನಾದರೂ ಮಾಡಲಿ ನನ್ನ ಮಗನ ಹೆಸರು, ಫೋಟೋ ಹಾಕಕೂಡದು. ಚುನಾವಣಾ ಪ್ರಚಾರದಲ್ಲಿ ಮಗನ ಫೋಟೋ ಬಳಸಿದರೆ ಬ್ಯಾನರ್, ಪಾಂಪ್ಲೆಟ್‌ಗಳಿಗೆ ಬೆಂಕಿ ಹಚ್ಚುತ್ತೇನೆ" ಎಂದು ಗೌರಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಆದಿಚುಂಚನಗಿರಿ ಮಠಕ್ಕೆ ಭೇಟಿ

ಆದಿಚುಂಚನಗಿರಿ ಮಠಕ್ಕೆ ಭೇಟಿ

ಹೆಚ್. ಕುಸುಮಾ ತಂದೆ ಹನುಮಂತರಾಯಪ್ಪ ಜೊತೆ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಗುರುವಾರ ಭೇಟಿ ನೀಡಿದ್ದರು. ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದಿದ್ದರು. ಆದರೆ, ಅವರು ಆರ್. ಆರ್. ನಗರ ಕ್ಷೇತ್ರದಿಂದ ಚುನಾವಣಾ ಕಣಕ್ಕೆ ಇಳಿಯುವ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ.

English summary
Late IAS officer D.K.Ravi's mother Gowramma upset with D. K. Ravi wife H. Kusuma and father-in-law Hanumantharayappa. Don't use my son name in election campaign said Gowramma.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X