ಕಲ್ಲಿನಿಂದ ಹಲ್ಲೆ: ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಹೇಳಿದ್ದೇನು?
ತುಮಕೂರು, ಏಪ್ರಿಲ್ 29: ಕೊರಟಗೆರೆ ವಿಧಾನಸಭಾ ಕ್ಷೇತ್ರದ ನರಸಾಪುರ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ತಮ್ಮ ಮೇಲೆ ಕಲ್ಲಿನಿಂದ ಆದ ದಾಳಿ ಬಗ್ಗೆ ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಇದು ಆಕಸ್ಮಿಕವಾಗಿ ಆಗಿರುವ ಘಟನೆಯಲ್ಲಿ, ಯಾವ ಉದ್ದೇಶಕ್ಕಾಗಿ ದಾಳಿ ಮಾಡಿದ್ದಾರೆ ತಿಳಿಯುತ್ತಿಲ್ಲ ಎಂದು ಹೇಳಿದ್ದಾರೆ.
ಯಾರೋ ದುಷ್ಕರ್ಮಿಗಳು ನನಗೆ ಕಲ್ಲಿನಿಂದ ಹೊಡೆದಿರಬಹುದು, ಯಾವ ಉದ್ದೇಶ ಇಟ್ಟುಕೊಂಡು ಈ ರೀತಿ ಮಾಡಿದ್ದಾರೆ ಎಂದು ಗೊತ್ತಿಲ್ಲ. 35 ವರ್ಷದ ನನ್ನ ರಾಜಕೀಯ ಜೀವನದಲ್ಲಿ ನನಗೆ ಯಾರೂ ಶತ್ರುಗಳು ಇಲ್ಲ ಎಂದು ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

ಯಾವ ಉದ್ದೇಶ ಇಟ್ಟುಕೊಂಡು ಈ ರೀತಿ ಮಾಡಿದ್ದಾರೆ ಎಂದು ಹೇಳುವುದು ಕಷ್ಟ. ನನಗೆ ಶತ್ರುಗಳು ತುಂಬಾ ಕಡಿಮೆ ಎಂದುಕೊಂಡಿದ್ದೇನೆ. ಪ್ರಾಮಾಣಿಕವಾಗಿ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ಚುನಾವಣೆ ಎನ್ನುವುದು ಜನರ ತೀರ್ಪು, ಅದನ್ನು ಜನರಿಗೆ ಬಿಡಬೇಕು. ಜನರ ಬಳಿ ಹೋಗಿ ಮತ ಕೇಳುತ್ತೇವೆ, ಆಶ್ವಾಸನೆ ನೀಡುತ್ತೇವೆ, ಮಾಡಿರುವ ಕೆಲಸದ ಬಗ್ಗೆ ಹೇಳಿಕೊಳ್ಳುತ್ತೇವೆ, ಇಷ್ಟು ಬಿಟ್ಟರೆ ಬೇರೆ ಯಾವುದು ನಡೆಯಬಾರದು ಎಂದರು.
ಒಂದು ವೇಳೆ ನನ್ನ ಮೇಲೆ ದ್ವೇಷ ಇದ್ದರೆ ಈ ರೀತಿ ಸಾರ್ವಜನಿಕ ಜೀವನದಲ್ಲಿ ಅದನ್ನು ತೀರಿಸಿಕೊಳ್ಳಬಾರದು. ನಾನು ಯಾರನ್ನೂ ದೂಷಿಸಲು ಹೋಗುವುದಿಲ್ಲ, ಇದು ಹೂವಿನಲ್ಲಿ ಬಂದಿರುವ ಕಲ್ಲು ಅಲ್ಲ, ಪೆಟ್ಟು ತಿಂದವನು ನನಗೆ ಗೊತ್ತಾಗುತ್ತದೆ. ಯಾರೋ ಬೇಕೆಂದೆ ಮಾಡಿದ್ದಾರೆ ಎನಿಸುತ್ತದೆ. ಈ ಘಟನೆ ಕುರಿತಂತೆ ನಾನು ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಪರಮೇಶ್ವರ್ ಹೇಳಿದರು.
ಸದ್ಯ ಪರಮೇಶ್ವರ್ ತುಮಕೂರಿನ ಸಿದ್ಧಾರ್ಥ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಪರಮೇಶ್ವರ್ ಅವರಿಗೆ ದೊಡ್ಡ ಮಟ್ಟದ ಗಾಯವಾಗಿಲ್ಲ, ತಲೆಗೆ ಸಣ್ಣ ಗಾಯವಾಗದೆ, ಚಿಕಿತ್ಸೆ ನೀಡಿದ್ದೇವೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆ ಬಗ್ಗೆ ತೀವ್ರ ಖಂಡನೆ
ಪರಮೇಶ್ವರ್ ಮೇಲೆ ಹಲ್ಲೆ ನಡೆದಿರುವ ಘಟನೆ ಬಗ್ಗೆ ಕಾಂಗ್ರೆಸ್ ನಾಯಕರು ಭಾರಿ ಟೀಕೆ ಮಾಡಿದ್ದಾರೆ. ಬಿಜೆಪಿ ಮೇಲೆ ಕಿಡಿ ಕಾರಿರುವ ಕಾಂಗ್ರೆಸ್ ರಾಜ್ಯದಲ್ಲಿ ಆಗಲೇ ಗಲಭೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದೆ. ಇನ್ನು ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಇದು ಪರಮೇಶ್ವರ ಮಾಡ್ತಿರುವ ನಾಟಕ ಎಂದು ವ್ಯಂಗ್ಯವಾಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications