ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಕುಮಾರ ಸ್ವಾಮೀಜಿ ಬಿಜಿಎಸ್ ಆಸ್ಪತ್ರೆಯಿಂದ ಬಿಡುಗಡೆ

By ತುಮಕೂರು ಪ್ರತಿನಿಧಿ
|
Google Oneindia Kannada News

ಬೆಂಗಳೂರು, ಜನವರಿ 27 : ತುಮಕೂರು ಜಿಲ್ಲೆ, ಕ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಶನಿವಾರ ಬೆಂಗಳೂರಿನಲ್ಲಿರುವ ಬಿಜಿಎಸ್ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಅನಾರೋಗ್ಯದ ಕಾರಣಕ್ಕಾಗಿ ಈಚೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ನ್ಯುಮೋನಿಯಾ ಆಗಿತ್ತು ಎಂದು ಮೂಲಗಳು ತಿಳಿಸಿದ್ದವು.

ಇನ್ನು ಆಸ್ಪತ್ರೆಯಿಂದ ಬಿಡುಗಡೆಯಾದ ಡಾ.ಶಿವಕುಮಾರ ಸ್ವಾಮೀಜಿ, ತುಮಕೂರಿನ ಮಠಕ್ಕೆ ತೆರಳಲು ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಸಂಚಾರ ದಟ್ಟಣೆಯಿಂದ ಪೂರ್ತಿಯಾಗಿ ಮುಕ್ತ ಮಾಡಿಕೊಡಲಾಗಿದೆ. ಪೊಲೀಸ್ ಭದ್ರತೆಯಲ್ಲಿ ಸ್ವಾಮೀಜಿ ಆಸ್ಪತ್ರೆಯಿಂದ ನೇರವಾಗಿ ಸಿದ್ದಗಂಗಾ ಮಠಕ್ಕೆ ತೆರಳಿದರು.

ಸಿದ್ದಗಂಗಾ ಶ್ರೀಗಳಿಗೆ ಶಸ್ತ್ರಚಿಕಿತ್ಸೆ ಯಶಸ್ವಿ, ಆರೋಗ್ಯ ಸ್ಥಿರಸಿದ್ದಗಂಗಾ ಶ್ರೀಗಳಿಗೆ ಶಸ್ತ್ರಚಿಕಿತ್ಸೆ ಯಶಸ್ವಿ, ಆರೋಗ್ಯ ಸ್ಥಿರ

ಇನ್ನು ಮುಂದೆ ವೈದ್ಯರ ತಂಡವು ಸಿದ್ದಗಂಗಾ ಮಠದಲ್ಲೇ ಚಿಕಿತ್ಸೆ ಮುಂದುವರಿಸಲಿವೆ. ಶಿವಕುಮಾರ ಸ್ವಾಮೀಜಿಗೆ ಸೋಂಕು ಹಿನ್ನೆಲೆಯಲ್ಲಿ ಚಿಕಿತ್ಸೆಯನ್ನು ಮುಂದುವರಿಸಲಾಗುವುದು. ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವ ಸ್ವಾಮೀಜಿಗೆ ಸದ್ಯಕ್ಕೆ ವಿಶ್ರಾಂತಿ ಅಗತ್ಯವಿದ್ದು, ಹತ್ತು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸೂಚಿಸಿದ್ದಾರೆ.

Dr Shivakumara Swamiji discharged from Bengaluru BGS hospital

ಶಿವಕುಮಾರ ಸ್ವಾಮೀಜಿ ವಯಸ್ಸಿನ ಕಾರಣಕ್ಕೆ ಕೆಲ ಚಿಕಿತ್ಸೆಯನ್ನು ಅವರಿಗೆ ನೀಡುವುದಕ್ಕೆ ಸಾಧ್ಯವಿಲ್ಲ. ಆ ರೀತಿ ಬಲವಂತವಾಗಿ ಚಿಕಿತ್ಸೆಗೆ ಮುಂದಾದರೆ ಅವರಿಗೆ ಸಮಸ್ಯೆ ಆಗುತ್ತದೆ ಎಂದು ಬಿಜಿಎಸ್ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದರು.

English summary
Siddaganga mutt Dr Shivakumara Swamiji discharged from Bengaluru BGS hospital on Saturday. He had admitted in hospital recently due to ill health.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X