ಹೆಣದ ರಾಶಿಯ ಮೇಲೆ ಪಿಪಿಇ ಕಿಟ್ ದುಡ್ಡು ಹೊಡೆದಿದ್ದಾರೆ!
ಬೆಂಗಳೂರು, ಅ. 31: ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದವರು, ಶಿರಾ ಉಪಚುನಾವಣೆಯಲ್ಲೂ ಅಡ್ಡದಾರಿ ಹಿಡಿದಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ. ಶಿರಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಅವರ ಪರವಾಗಿ ಪ್ರಚಾರ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆ ಶಿರಾ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬಿಜೆಪಿಯವರು ಉಪ ಚುನಾವಣೆಯಲ್ಲಿ ಹಣಬಲ, ತೋಳ್ಬಲ ಉಪಯೋಗ ಮಾಡುತ್ತಿದ್ದಾರೆ. ಚುನಾವಣಾ ಆಯೋಗವನ್ನೂ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ವಾಮಮಾರ್ಗದ ಮೂಲಕ ಚುನಾವಣೆಯಲ್ಲಿ ಗೆಲ್ಲಲು ಹೊರಟಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 15 ತಿಂಗಳುಗಳಾಗಿವೆ. ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ಜನ ಬೀದಿಗೆ ಬಂದಿದ್ದಾರೆ. ಅವರಿಗೆ ಏನಾದರೂ ಪರಿಹಾರ ಕೊಟ್ಟಿದ್ದಾರಾ? ಎಂದು ಈಶ್ವರ್ ಖಂಡ್ರೆ ಪ್ರಶ್ನೆ ಮಾಡಿದ್ದಾರೆ.
ಕೊರೊನಾ ನಿರ್ವಹಣೆ ಮಾಡುವುದರಲ್ಲಿ ಹಾಗೂ ಸೋಂಕು ತಡೆಗಟ್ಟುವಲ್ಲಿ ಯಡಿಯೂರಪ್ಪ ಅವರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಲಕ್ಷಾಂತರ ಜನರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಹೆಣದ ರಾಶಿಯ ಮೇಲೆ ಪಿಪಿಇ ಕಿಟ್ ದುಡ್ಡು ಹೊಡೆದಿದ್ದಾರೆ. ಇವರು ಭ್ರಷ್ಟಾಚಾರದಲ್ಲಿ ನಂಬರ್ ಒನ್ ಆಗಿದ್ದಾರೆ. ಈಗ ಮತ್ತೆ ಪ್ರವಾಹ ಬಂದಿದ್ದು ಜನರನ್ನು ಬೀದಿಗೆ ತಂದಿದೆ. ಆದರೂ ನಯಾ ಪೈಸೆ ಪರಿಹಾರವನ್ನು ಇಲ್ಲಿವರೆಗೆ ನೀಡಿಲ್ಲ. ಕೇಂದ್ರವು ರಾಜ್ಯಕ್ಕೆ ಐದು ಪೈಸೆ ನೆರವು ಕೊಟ್ಟಿಲ್ಲ. ಕೇಂದ್ರ, ರಾಜ್ಯದಲ್ಲಿ ನಮ್ಮದೇ ಸರ್ಕಾರ ಅಂತಾರೆ, ಕೇಂದ್ರ ಯಾಕೆ ಇನ್ನೂ ನೆರವು ನೀಡಿಲ್ಲ ಹೇಳ್ರಪ್ಪಾ? ಎಂದು ಬಿಜೆಪಿ ನಾಯಕರ ವಿರುದ್ಧ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದರು.

15ನೇ ಹಣಕಾಸು ಆಯೋಗದ ಹಣವೂ ಬಂದಿಲ್ಲ. ಪ್ರವಾಹದ ನೆರವು ಇನ್ನೂ ಸಿಕ್ಕಿಲ್ಲ. ರಾಜ್ಯದ ಬಿಜೆಪಿ ಸಂಸದರು ಅಂಜುಬುರಕರು. ಕೇಂದ್ರದ ಮೇಲೆ ಯಾಕೆ ಒತ್ತಡ ತರಲಿಲ್ಲ? ಬರಬೇಕಾದ ನೆರವು ಕೊಡಿಸೋಕೆ ಆಗಲಿಲ್ಲ? ಶಿರಾ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ. ಮುಂದೆ ಬರುವ ಎಲ್ಲಾ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಜಯಸಾಧಿಸಲಿದೆ. ನಮ್ಮ ಅಭ್ಯರ್ಥಿ ಟಿಬಿ ಜಯಚಂದ್ರ ಅವರು ಉತ್ತಮ ಸೇವೆ ಸಲ್ಲಿಸಿದ್ದಾರೆ. ಅಂತಹವರನ್ನು ನೀವೆಲ್ಲರೂ ಆರಿಸಿ ಕಳಿಸಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications