ಎಚ್.​ಡಿ ಕುಮಾರಸ್ವಾಮಿಗೆ ಕುರಿಮರಿ ನೀಡಿ ಋಣಭಾರ ತೀರಿಸಿದ ರೈತರು

ತುಮಕೂರು, ಅಕ್ಟೋಬರ್ 23: ಮಾಜಿ ಮುಖ್ಯಮಂತ್ರಿ ಎಚ್.​ಡಿ ಕುಮಾರಸ್ವಾಮಿಗೆ ರೈತರು ಕುರಿಮರಿ ನೀಡಿ ಋಣಭಾರ ತೀರಿಸಿದ ವಿಶೇಷ ಸಂದರ್ಭ ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನಲ್ಲಿ ನಡೆದಿದೆ.

ಶಿರಾ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆ ಜೆಡಿಎಸ್​ ಅಭ್ಯರ್ಥಿ ಅಮ್ಮಾಜಮ್ಮ ಅವರ ಪರವಾಗಿ ಮತಯಾಚಿಸಲು ಎಚ್.ಡಿ ಕುಮಾರಸ್ವಾಮಿ ಅವರು ಶಿರಾ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಗುರುವಾರ ಬರಗೂರಿನಿಂದ ಶಿರಾ ಕಡೆಗೆ ಹೋಗುತ್ತಿದ್ದ ಕುಮಾರಸ್ವಾಮಿ ಅವರನ್ನು ಮಾರ್ಗಮಧ್ಯೆ ಸೀಗಲಹಳ್ಳಿಯಲ್ಲಿ ಜನರು ವಿಶೇಷವಾಗಿ ಸನ್ಮಾನಿಸಿದರು.

ರೈತರ ಸಾಲಮನ್ನಾ ಮಾಡಿದ ಕೃತಜ್ಞತಾ ಪೂರ್ವಕವಾಗಿ ರೈತರು ಹೊಲದಲ್ಲಿ ಬೆಳೆದಿದ್ದ ಪದಾರ್ಥಗಳು ಹಾಗೂ ಕುರಿಮರಿಯನ್ನು ಎಚ್​ಡಿಕೆಗೆ ನೀಡಿ ಋಣಭಾರ ತೀರಿಸಿದರು.

Tumakuru: Farmers Gave Lamb To HD Kumaraswamy In Sira

ಈ ಸಂದರ್ಭದಲ್ಲಿ ರೈತರ ಸನ್ಮಾನ ಸ್ವೀಕರಿಸಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಭಾವುಕರಾಗಿ ಮಾತನಾಡಿದರು. ರೈತರಿಗಾಗಿ ಇನ್ನೂ ಸಾಕಷ್ಟು ಕೆಲಸ ಮಾಡುವ ಕನಸಿದ್ದು, ಜೆಡಿಎಸ್​ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದ ದಿನ ನನ್ನ ಕನಸು ನನಸಾಗಲಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+