5 ವರ್ಷಗಳಿಗೊಮ್ಮೆ ಕನ್ಯೆಯರಿಗೆ ಕಾಲ್ತೊಳೆಯುವ ಹಬ್ಬ
ತುಮಕೂರು, ಜೂ9: ಹಬ್ಬಗಳಂದ್ರೆ ಸಂಭ್ರಮ, ಸಡಗರ. ಅದರಲ್ಲೂ ಗ್ರಾಮೀಣ ಭಾಗಗಳಲ್ಲಿ ಅನೇಕ ಬಗೆಯ ವಿಶಿಷ್ಠ ಹಬ್ಬಗಳನ್ನು ತಲೆತಲಾಂತರಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿಯೊಂದು ಹಬ್ಬವೂ ತನ್ನದೇ ಆದ ಪ್ರಸಿದ್ಧಿ, ವೈಶಿಷ್ಟ್ಯತೆ ಹೊಂದಿದ್ದು, ತುಮಕೂರು ಜಿಲ್ಲೆಯ ಪಾವಗಡದ ಲಂಬಾಣಿ ಸಮುದಾಯದವರು ಆಚರಿಸುತ್ತಿರುವ ಹಬ್ಬವೊಂದು ಒಮ್ಮೆ ಎಲ್ಲರನ್ನೂ ಆಕರ್ಷಿಸುತ್ತದೆ.
ಹೌದು, ದವಸ ಧಾನ್ಯ, ತೆಂಗಿನ ಕಾಯಿಯನ್ನು ತಲೆ ಮೇಲೆ ಹೊತ್ತು ಬರುವ ಕನ್ಯೆಯರಿಗೆ ಶುದ್ಧ ನೀರಿನಿಂದ ಕಾಲ್ತೊಳೆಯುವ ವಿಶೇಷ ಹಬ್ಬ ನಡೆಯುತ್ತಿದೆ. ಜಿಲ್ಲೆಯ ಪಾವಗಡ ತಾಲೂಕಿನ ಭೂಪೂರು ಸೇರಿದಂತೆ ಇತರೆ ಲಂಬಾಣಿ ತಾಂಡಗಳಲ್ಲಿ ಕನ್ಯೆಯರಿಗೆ ಕಾಲ್ತೊಳೆಯುವ ಹಬ್ಬ ನಡೆಯುತ್ತಿದೆ.
ಮನೆ ಮನೆಗಳಿಗೆ ತೆರಳಿ ನೈವೇದ್ಯ ಅರ್ಪಣೆ
ಪ್ರತಿ ಮನೆಯಿಂದ ಒಬ್ಬರು ಅಥವಾ ಇಬ್ಬರು ಕನ್ಯೆಯರು ತಮ್ಮ ಮನೆಯಿಂದ ದವಸ ಧಾನ್ಯ ಹೊತ್ತು ಕುಲದೇವತೆಗಳಾದ ತೋಳಚ ಶಕ್ತಿ, ಭೀಮಾಸತಿ, ಭೀಮಾ ಭೂಕ್ಯಾ ದೇವತೆಗಳನ್ನು ಆರಾಧಿಸುವ ಮನೆಗಳಿಗೆ ತೆರಳಿ ನೈವೇದ್ಯ ಅರ್ಪಿಸುತ್ತಾರೆ.

ಈ ವೇಳೆ ಮನೆಗೆ ಬರುವ ಕನ್ಯೆಯರಿಗೆ ಶುದ್ದ ನೀರಿನಿಂದ ಕಾಲು ತೊಳೆದು, ಅವರ ಪಾದಗಳಿಂದ ಆರ್ಶಿವಾದ ಪಡೆದು ಮನೆಯೊಳಗೆ ಬರಮಾಡಿಕೊಳ್ಳುತ್ತಾರೆ. ಮನೆಗೆ ಬರುವ ವೇಳೆ ಕನ್ಯೆಯರು ಬರುವ ಹಾದಿಗೆ ನೀರನ್ನಾಕುವ ಮೂಲಕ ಬರಮಾಡಿಕೊಳ್ಳುತ್ತಾರೆ. ನಂತರ ಮನೆಯ ಮುಂದೆ ಬೆಂಕಿ ಹಾಕಿ, ಭೂಮಿಗೆ ನಮನ ಸಲ್ಲಿಸಿ, ವೆಂಕಟರಮಣಸ್ವಾಮಿ ಹಾಗೂ ಆಂಜನೇಯ ಸ್ವಾಮಿಗೆ ಹೋಮದ ಮೂಲಕ ಪೂಜೆ ಮಾಡಲಾಗುವುದು. ಬಳಿಕ ಎಲ್ಲರೂ ಸೇರಿ ಅಲ್ಲಿಯೇ ಊಟ ಸೇವಿಸುತ್ತಾರೆ. ಐದು ವರ್ಷಕ್ಕೊಮ್ಮೆ ಬರುವ ಈ ವಿಶಿಷ್ಟ ಹಬ್ಬವನ್ನು ಎರಡು ದಿನಗಳ ಕಾಲ ಸಂಭ್ರಮದಿಂದ ಆಚರಿಸಲಾಗುತ್ತದೆ.
ಲಂಬಾಣಿ ಯುವತಿಯರಿಗೆ ದೀಪಾವಳಿ ಹಬ್ಬ ವಿಶೇಷತೆ
ದೀಪಾವಳಿಯು ಬರೀ ಬಾಣ, ಬಿರುಸುಗಳ ಸದ್ದಲ್ಲ, ಆದರಾಚೆಯೂ ಸಾಂಪ್ರಾದಾಯಿಕವಾದ ವಿಶಿಷ್ಟ ಆಚರಣೆ, ಆದರಲ್ಲೂ ಲಂಬಾಣಿ ಸಮುದಾಯದವರು ಬೆಳಕಿನ ಹಬ್ಬ ದೀಪಾವಳಿಯನ್ನು ವಿಶೇಷವಾಗಿ ಆಚರಿಸುತ್ತಾರೆ. ಇನ್ನೂ ದೀಪಾವಳಿಯು ಲಂಬಾಣಿ ಯುವತಿಯರ ಹಬ್ಬವೆಂದೂ ಕರೆಯುತ್ತಾರೆ.
ಬೆಟ್ಟ-ಗುಡ್ಡದಲ್ಲಿ ವಿವಿಧ ಬಗೆಯ ಹೂಗಳನ್ನ ಸಂಗ್ರಹಿಸುತ್ತಿರೋ ಯುವತಿಯರು, ಮನೆ ಮನೆಗೆ ತೆರಳಿ ಸೆಗಣಿ ಮೇಲೆ ಹೂಗಳಿಂದ ಅಲಂಕಾರ ಬಳಿಕ ಸಾಂಪ್ರಾದಾಯಿಕ ಬಟ್ಟೆ ಧರಿಸಿ ವಾದ್ಯಗೋಷ್ಠಿಗೆ ಹೆಜ್ಜೆ ಹಾಕ್ತಿರೋ ಹೆಂಗಳೆಯರು.ಈ ಸಾಂಪ್ರದಾಯಿಕ ವಿಶಿಷ್ಟ ಆಚರಣೆ ಕಂಡು ಬಂದಿದ್ದು ಗಡಿಗಾಡು ಪಾವಗಡದಲ್ಲಿ. ಆಧುನಿಕ ಭರಾಟೆಯಲ್ಲಿ ಜಾನಪದ ಸೊಗಡಿನ ಅನೇಕ ನೃತ್ಯ ಪ್ರಕಾರಗಳು, ಕಲೆಗಳು ಮರೆಯಾಗುತ್ತಿದೆ. ಆದರೆ ಲಂಬಾಣಿ ಸಮುದಾಯದವರು ಇಂದಿಗೂ ತಮ್ಮ ಸಾಂಪ್ರದಾಯದ ನೃತ್ಯಗಳನ್ನ ಉಳಿಸಿಕೊಂಡು ಬರುತ್ತಿರುವುದು ವಿಶೇಷ, ಹದಿನೈದು ದಿನಗಳ ಕಾಲ ತಾಂಡಾಗಳಲ್ಲಿ ದೀಪಾವಳಿಯ ಹಬ್ಬ ಸಂಭ್ರಮ ಮನೆ ಮಾಡಿರುತ್ತೆ.
(ಒನ್ಇಂಡಿಯಾ ಸುದ್ದಿ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications