5 ವರ್ಷಗಳಿಗೊಮ್ಮೆ ಕನ್ಯೆಯರಿಗೆ ಕಾಲ್ತೊಳೆಯುವ ಹಬ್ಬ
ತುಮಕೂರು, ಜೂ9: ಹಬ್ಬಗಳಂದ್ರೆ ಸಂಭ್ರಮ, ಸಡಗರ. ಅದರಲ್ಲೂ ಗ್ರಾಮೀಣ ಭಾಗಗಳಲ್ಲಿ ಅನೇಕ ಬಗೆಯ ವಿಶಿಷ್ಠ ಹಬ್ಬಗಳನ್ನು ತಲೆತಲಾಂತರಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿಯೊಂದು ಹಬ್ಬವೂ ತನ್ನದೇ ಆದ ಪ್ರಸಿದ್ಧಿ, ವೈಶಿಷ್ಟ್ಯತೆ ಹೊಂದಿದ್ದು, ತುಮಕೂರು ಜಿಲ್ಲೆಯ ಪಾವಗಡದ ಲಂಬಾಣಿ ಸಮುದಾಯದವರು ಆಚರಿಸುತ್ತಿರುವ ಹಬ್ಬವೊಂದು ಒಮ್ಮೆ ಎಲ್ಲರನ್ನೂ ಆಕರ್ಷಿಸುತ್ತದೆ.
ಹೌದು, ದವಸ ಧಾನ್ಯ, ತೆಂಗಿನ ಕಾಯಿಯನ್ನು ತಲೆ ಮೇಲೆ ಹೊತ್ತು ಬರುವ ಕನ್ಯೆಯರಿಗೆ ಶುದ್ಧ ನೀರಿನಿಂದ ಕಾಲ್ತೊಳೆಯುವ ವಿಶೇಷ ಹಬ್ಬ ನಡೆಯುತ್ತಿದೆ. ಜಿಲ್ಲೆಯ ಪಾವಗಡ ತಾಲೂಕಿನ ಭೂಪೂರು ಸೇರಿದಂತೆ ಇತರೆ ಲಂಬಾಣಿ ತಾಂಡಗಳಲ್ಲಿ ಕನ್ಯೆಯರಿಗೆ ಕಾಲ್ತೊಳೆಯುವ ಹಬ್ಬ ನಡೆಯುತ್ತಿದೆ.
ಮನೆ ಮನೆಗಳಿಗೆ ತೆರಳಿ ನೈವೇದ್ಯ ಅರ್ಪಣೆ
ಪ್ರತಿ ಮನೆಯಿಂದ ಒಬ್ಬರು ಅಥವಾ ಇಬ್ಬರು ಕನ್ಯೆಯರು ತಮ್ಮ ಮನೆಯಿಂದ ದವಸ ಧಾನ್ಯ ಹೊತ್ತು ಕುಲದೇವತೆಗಳಾದ ತೋಳಚ ಶಕ್ತಿ, ಭೀಮಾಸತಿ, ಭೀಮಾ ಭೂಕ್ಯಾ ದೇವತೆಗಳನ್ನು ಆರಾಧಿಸುವ ಮನೆಗಳಿಗೆ ತೆರಳಿ ನೈವೇದ್ಯ ಅರ್ಪಿಸುತ್ತಾರೆ.

ಈ ವೇಳೆ ಮನೆಗೆ ಬರುವ ಕನ್ಯೆಯರಿಗೆ ಶುದ್ದ ನೀರಿನಿಂದ ಕಾಲು ತೊಳೆದು, ಅವರ ಪಾದಗಳಿಂದ ಆರ್ಶಿವಾದ ಪಡೆದು ಮನೆಯೊಳಗೆ ಬರಮಾಡಿಕೊಳ್ಳುತ್ತಾರೆ. ಮನೆಗೆ ಬರುವ ವೇಳೆ ಕನ್ಯೆಯರು ಬರುವ ಹಾದಿಗೆ ನೀರನ್ನಾಕುವ ಮೂಲಕ ಬರಮಾಡಿಕೊಳ್ಳುತ್ತಾರೆ. ನಂತರ ಮನೆಯ ಮುಂದೆ ಬೆಂಕಿ ಹಾಕಿ, ಭೂಮಿಗೆ ನಮನ ಸಲ್ಲಿಸಿ, ವೆಂಕಟರಮಣಸ್ವಾಮಿ ಹಾಗೂ ಆಂಜನೇಯ ಸ್ವಾಮಿಗೆ ಹೋಮದ ಮೂಲಕ ಪೂಜೆ ಮಾಡಲಾಗುವುದು. ಬಳಿಕ ಎಲ್ಲರೂ ಸೇರಿ ಅಲ್ಲಿಯೇ ಊಟ ಸೇವಿಸುತ್ತಾರೆ. ಐದು ವರ್ಷಕ್ಕೊಮ್ಮೆ ಬರುವ ಈ ವಿಶಿಷ್ಟ ಹಬ್ಬವನ್ನು ಎರಡು ದಿನಗಳ ಕಾಲ ಸಂಭ್ರಮದಿಂದ ಆಚರಿಸಲಾಗುತ್ತದೆ.
ಲಂಬಾಣಿ ಯುವತಿಯರಿಗೆ ದೀಪಾವಳಿ ಹಬ್ಬ ವಿಶೇಷತೆ
ದೀಪಾವಳಿಯು ಬರೀ ಬಾಣ, ಬಿರುಸುಗಳ ಸದ್ದಲ್ಲ, ಆದರಾಚೆಯೂ ಸಾಂಪ್ರಾದಾಯಿಕವಾದ ವಿಶಿಷ್ಟ ಆಚರಣೆ, ಆದರಲ್ಲೂ ಲಂಬಾಣಿ ಸಮುದಾಯದವರು ಬೆಳಕಿನ ಹಬ್ಬ ದೀಪಾವಳಿಯನ್ನು ವಿಶೇಷವಾಗಿ ಆಚರಿಸುತ್ತಾರೆ. ಇನ್ನೂ ದೀಪಾವಳಿಯು ಲಂಬಾಣಿ ಯುವತಿಯರ ಹಬ್ಬವೆಂದೂ ಕರೆಯುತ್ತಾರೆ.
ಬೆಟ್ಟ-ಗುಡ್ಡದಲ್ಲಿ ವಿವಿಧ ಬಗೆಯ ಹೂಗಳನ್ನ ಸಂಗ್ರಹಿಸುತ್ತಿರೋ ಯುವತಿಯರು, ಮನೆ ಮನೆಗೆ ತೆರಳಿ ಸೆಗಣಿ ಮೇಲೆ ಹೂಗಳಿಂದ ಅಲಂಕಾರ ಬಳಿಕ ಸಾಂಪ್ರಾದಾಯಿಕ ಬಟ್ಟೆ ಧರಿಸಿ ವಾದ್ಯಗೋಷ್ಠಿಗೆ ಹೆಜ್ಜೆ ಹಾಕ್ತಿರೋ ಹೆಂಗಳೆಯರು.ಈ ಸಾಂಪ್ರದಾಯಿಕ ವಿಶಿಷ್ಟ ಆಚರಣೆ ಕಂಡು ಬಂದಿದ್ದು ಗಡಿಗಾಡು ಪಾವಗಡದಲ್ಲಿ. ಆಧುನಿಕ ಭರಾಟೆಯಲ್ಲಿ ಜಾನಪದ ಸೊಗಡಿನ ಅನೇಕ ನೃತ್ಯ ಪ್ರಕಾರಗಳು, ಕಲೆಗಳು ಮರೆಯಾಗುತ್ತಿದೆ. ಆದರೆ ಲಂಬಾಣಿ ಸಮುದಾಯದವರು ಇಂದಿಗೂ ತಮ್ಮ ಸಾಂಪ್ರದಾಯದ ನೃತ್ಯಗಳನ್ನ ಉಳಿಸಿಕೊಂಡು ಬರುತ್ತಿರುವುದು ವಿಶೇಷ, ಹದಿನೈದು ದಿನಗಳ ಕಾಲ ತಾಂಡಾಗಳಲ್ಲಿ ದೀಪಾವಳಿಯ ಹಬ್ಬ ಸಂಭ್ರಮ ಮನೆ ಮಾಡಿರುತ್ತೆ.
(ಒನ್ಇಂಡಿಯಾ ಸುದ್ದಿ)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications