ದೇವೇಗೌಡರು 4 ಜನರ ಹೆಗಲ ಮೇಲೆ ಹೋಗುವ ಕಾಲ ಹತ್ತಿರವಿದೆ: ರಾಜಣ್ಣ ವಿವಾದಾತ್ಮಕ ಹೇಳಿಕೆ
ತುಮಕೂರು, ಜುಲೈ 1: "ಮಾಜಿ ಪ್ರಧಾನಿ ದೇವೇಗೌಡರು ಈಗ ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಿದ್ದಾರೆ, ನಾಲ್ವರ ಮೇಲೆ ಹೋಗುವ ಕಾಲ ಹತ್ತಿರದಲ್ಲೇ ಇದೆ" ಎಂದು ಮಾಜಿ ಶಾಸಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ. ಎನ್. ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಾವಣದಾಲದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಜೆಡಿಎಸ್ ವರಿಷ್ಠ ದೇವೇಗೌಡರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಜಾಲಾತಾಣದಲ್ಲಿ ಈ ಹೇಳಿಕೆ ವಿಡಿಯೋಗಳು ವೈರಲ್ ಆಗಿವೆ.
ದೇಶದ ಮಾಜಿ ಪ್ರಧಾನಿ ಕುರಿತು ಈ ರೀತಿ ಹೇಳಿಕೆ ನೀಡಿರುವುದು ಸರಿಯೇ? ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದು, ಇದು ಅವರ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.
ರಾಜಣ್ಣ ತಮ್ಮ ರಾಜಕೀಯದ ನಡೆ ಬಗ್ಗೆ ಪ್ರತಿಕ್ರಿಯೆ ನೀಡಿ, "ಇದು ನನ್ನ ಕೊನೆಯ ಚುನಾವಣೆ, ಶೋಕಿಗಾಗಿ ರಾಜಕಾರಣ ಮಾಡುವುದು ಬೇಡ, ನಾನು ಎಂಎಲ್ಎ ಆದರೆ ನೀವು ಆದಂತೆ, ನಾನು ನಾಮಕಾವಸ್ಥೆಗೆ ಇರುತ್ತೀನಿ. ಏನಾದರೂ ಕೆಲಸ ಆಗಬೇಕಾದರೆ ನೀವೇ ಅಧಿಕಾರಿಗಳನ್ನು ಕೇಳುವಂತಹ ಶಕ್ತಿ ನಿಮಗೆ ಬರುತ್ತದೆ" ಎಂದರು.
"ಮುಂದಿನ ಚುನಾವಣಗೆ ನಿಮ್ಮ ಮನೆ ಬಾಗಿಲಿಗೆ ಬಂದು ಮತ ಕೇಳುತ್ತೇನೆ. ನನ್ನ ಕೊನೆಯ ಚುನಾವಣೆ, ಮುಂದೆ ನೀವೇ ನಿಲ್ಲಿ ಎಂದು ಕೇಳಿಕೊಂಡರೂ ನಾನು ನಿಲ್ಲಲ್ಲ. ಈಗ ನನಗೆ 72 ವರ್ಷ , 77 ವರ್ಷ ಆದರೆ ಓಡಾಡುವುದಕ್ಕೂ ಆಗಲ್ಲ. ಹಾಗಾಗಿ ನನ್ನನ್ನು ನೀವು ಗೆಲ್ಲಿಸಿದ್ದರೆ, ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ನಾನು ಮಂತ್ರಿಯಾಗುತ್ತೇನೆ" ಎಂದು ಹೇಳಿದ್ದಾರೆ.

ಈ ಹಿಂದೆಯೂ ದೇವೇಗೌಡರ ಬಗ್ಗೆ ಹಗುರ ಮಾತು
ಕೆ. ಎನ್. ರಾಜಣ್ಣ ದೇವೇಗೌಡರ ಬಗ್ಗೆ ಮಾತನಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಸಮ್ಮಿಶ್ರ ಸರಕಾರ ಇದ್ದ ವೇಳೆ, "ದೇವೇಗೌಡ ಮೂಗರ್ಜಿ ಗಿರಾಕಿ. ಅವರು ಸಾಕಷ್ಟು ಜನರ ವಿರುದ್ಧ ಮೂಗರ್ಜಿ ಬರೆದಿದ್ದಾರೆ. ಬೇಕಾದರೆ ಪ್ರಮಾಣ ಮಾಡಲು ಹೇಳಿ" ಎಂದು ಹೇಳಿಕೆ ನೀಡಿ ಜೆಡಿಎಸ್ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದರು.

ದೇವೇಗೌಡರಿಗೆ ಸಾವಿಲ್ಲ
ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ, "ದೇವೇಗೌಡರು ಕೇವಲ ಕುಮಾರಸ್ವಾಮಿ, ಇಬ್ರಾಹಿಂಗೆ ತಂದೆಯಲ್ಲ, ಇಡೀ ಆರೂವರೆ ಕನ್ನಡಿಗರ ತಂದೆ. ನಿಮ್ಮನ್ನ ಶಾಸಕ, ಮಂತ್ರಿಯನ್ನಾಗಿ ಮಾಡಿದ ದೇವೇಗೌಡರ ಹುಟ್ಟು-ಸಾವಿನ ಬಗ್ಗೆ ಮಾತನಾಡುತ್ತೀರಾ. ನಿಮಗೆ ತಂದೆ ಇಲ್ವಾ, ತಂದೆ ಬಗ್ಗೆ ನಿಮಗೆ ಮಮಕಾರ ಇಲ್ವಾ, ತಿಂದ ಮನೆಗೆ ದ್ರೋಹ ಬಗೆಯುತ್ತೀರಾ?" ಎಂದು ಪ್ರಶ್ನಿಸಿದ್ದಾರೆ.
"ಇದಕ್ಕೆ ಇಡೀ ಕರ್ನಾಟಕದ ಜನ ನಿಮಗೆ ಉತ್ತರ ಕೊಡುತ್ತಾರೆ. ದೇವೇಗೌಡರು ನಮಗೆ ಸ್ಪೂರ್ತಿ, ಶಕ್ತಿ. ದೇವೇಗೌಡರು ಅಜರಾಮರು, ಅವರಿಗೆ ಸಾವಿಲ್ಲ. ಸೂರ್ಯ ಚಂದ್ರ ಇರುವವರೆಗೂ ದೇವೇಗೌಡರ ಹೆಸರು ಕರ್ನಾಟಕ, ದೇಶದಲ್ಲಿ ಚಿರವಾಗಿರುತ್ತದೆ. ಕೆಂಪುಕೋಟೆಯಲ್ಲಿ ಬಾವುಟ ಹಾರಿಸಿದ ಕನ್ನಡಿಗರು ಅವರು. ಕೂಡಲೇ ದೇವೇಗೌಡರ ಮನೆಗೆ ಬಂದು ಕ್ಷಮೆ ಕೇಳಬೇಕು" ಎಂದು ಸಿ. ಎಂ. ಇಬ್ರಾಹಿಂ ಆಗ್ರಹಿಸಿದರು.

ರಾಜಣ್ಣ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ರಾಜಣ್ಣ ಹೇಳಿಕೆ ವಿರುದ್ಧ ಕಿಡಿಕಾರಿರುವ ಎಚ್. ಡಿ. ಕುಮಾರಸ್ವಾಮಿ, "ಇದು ಆತನ ಸಂಸ್ಕೃತಿಯನ್ನು ತೋರುತ್ತದೆ. ಅವತ್ತು ವಿಧಾನಸಭೆ ಚುನಾವಣೆಗೆ ನಿಂತಾಗ , ದೇವೇಗೌಡರು ಪ್ರಚಾರಕ್ಕೆ ಬರಲೇಬೇಕು ಎಂದು ಹಠ ಹಿಡಿದಿದ್ದ, ಅವತ್ತು ದೇವೇಗೌಡರು ಪ್ರಚಾರ ಮಾಡಿದ್ದಕ್ಕೆ ರಾಜಣ್ಣ ಗೆದ್ದಿದ್ದು. ಈಗ ಅವರ ಬಗ್ಗೆಯೇ ಮಾತಾಡುತ್ತಾರೆ. ದೇವೇಗೌಡರು ನಿಮ್ಮನ್ನ ಗೆಲ್ಲಿಸಿದರೆ ನೀವು ಲೋಕಸಭೆಯಲ್ಲಿ ಅವರ ಸೋಲಿಗೆ ಕಾರಣರಾದಿರಿ. ಇಂದು ದೇವೇಗೌಡರ ಅನಾರೋಗ್ಯಕ್ಕೆ ನಿಮ್ಮಂತಹವರೇ ಕಾರಣ. ಎರಡು ತಿಂಗಳು ಕಾದುನೋಡು, ಯಾರ ಸಹಾಯವಿಲ್ಲದೆ ನಡೆದಾಡುತ್ತಾರೆ, ನಿನ್ನನ್ನು ಕ್ಷಮೆ ಕೇಳು ಅಂತಾ ಹೇಳಲ್ಲ, ಹುಷಾರ್ ಅಂತಾ ಹೇಳಲು ಬಯಸುತ್ತೇನೆ" ಎಂದರು.

ದೇವರೇ ಉತ್ತರ ಕೊಡುತ್ತಾನೆ
"ದೇವೇಗೌಡರಿಗೆ ಇಬ್ಬರು ಹೆಗಲಿಗೆ ಹೆಗಲು ಕೊಡುತ್ತಾರೆ. ನಾವು ಪ್ರತಿನಿತ್ಯ ದೇವರಿಗೆ ಪೂಜೆ ಸಲ್ಲಿಸಿ, ಉತ್ಸವ ಮೂರ್ತಿಗೆ ಹೆಗಲು ಕೊಡುತ್ತೀವಲ್ಲ ಹಾಗೆ. ರಾಜಣ್ಣ ಮಾತು ಕೇಳಿ ನನ್ನ ಮನಸ್ಸಿಗೂ ನೋವಾಗಿದೆ. ನಾನು ಸಾವಿನ ಮನೆಗೆ ಹೋದಾಗಲೂ ಕಣ್ಣೀರು ಹಾಕಿದ್ದೇನೆ. ಆದರೆ ಇಂತಹ ದುರಹಂಕಾರದ ಮಾತಿಗೆ ಮೇಲಿರುವ ಒಬ್ಬ ದೇವರು ನೋಡಿಕೊಳ್ಳುತ್ತಾನೆ. ದೇವೇಗೌಡರ ಬದುಕು ಆಯಸ್ಸು, ಭಗವಂತ ನಿರ್ಧಾರ ಮಾಡಿದ್ದಾನೆ, ನನಗೆ ವಿಶ್ವಾಸ ಇದೆ, ದೇವೇಗೌಡರು ನೂರು ವರ್ಷ ಪೂರೈಸುತ್ತಾರೆ" ಎಂದು ಕುಮಾರಸ್ವಾಮಿ ಹೇಳಿದರು.
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications