Muddahanumegowda: ಮುದ್ದಹನುಮೇಗೌಡ ಕಾಂಗ್ರೆಸ್ ಸೇರ್ಪಡೆಗೆ ಡೇಟ್ ಫಿಕ್ಸ್, ತುಮಕೂರಿನಿಂದ ಕಣಕ್ಕೆ!?
ಬೆಂಗಳೂರು, ಫೆಬ್ರವರಿ.22: ಕೆಲವು ದಿನಗಳಿಂದ ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಸಕತ್ ಹೈಪ್ನಲ್ಲಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಯಾರಿಗೆ ಟಿಕೆಟ್ ಸಿಗಲಿದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದೆ ನಡುವೆ ಕೈ ಕೊಟ್ಟು ಹೋದವರು ಮತ್ತೆ ಕೈ ಹಿಡಿಯಲು ತುದಿಗಾಲಿನಲ್ಲಿ ನಿಂತಿದ್ದಾರೆ.
ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಧ್ವಜ ಹಿಡಿಯಲು ನಿಂತಿದ್ದಾರೆ. ಇಷ್ಟು ದಿನ ಅವರನ್ನು ಮತ್ತೆ ಕಾಂಗ್ರೆಸ್ಗೆ ಸೇರಿಸಿಕೊಳ್ಳಲು ಪಕ್ಷದಲ್ಲಿಯೇ ಕೆಲವು ಅಪಸ್ವರ ಎದ್ದಿದ್ದವು. ಹಿಗಾಗಿ ಅವರನ್ನು ಕಾಂಗ್ರೆಸ್ ಸೇರಿಸಿಕೊಳ್ಳಲು ನಾಯಕರು ಚಿಂತಿಸುತ್ತಿದ್ದರು.

ಈಗ ಎಲ್ಲದಕ್ಕೂ ಕಾಲ ಕೂಡಿಬಂದಿದ್ದು, ಮತ್ತೆ ತಮ್ಮ ಮಾತೃಪಕ್ಷಕ್ಕೆ ಮರಳಲು ಮಾಜಿ ಸಂಸದ ಮುದ್ದಹನುಮೇಗೌಡ ಅವರಿಗೆ ಗ್ರೀನ್ ಸಿಗ್ನಲ್ ದೊರಲಿದೆ. ಫೆಬ್ರವರಿ 22ರ ಗುರುವಾರ ಸಂಜೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಗಳಿವೆ. ಗುರುವಾರ ಸಂಜೆ 4 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಚಿವರಾದ ಜಿ.ಪರಮೇಶ್ವರ್, ಕೆ ಎನ್ ರಾಜಣ್ಣ ಸಮ್ಮುಖದಲ್ಲಿ ಸೇರ್ಪಡೆ ನಡೆಯಲಿದೆ.
ಕೈ ಕೊಟ್ಟು ಕೇಸರಿ ಪಾಳಯ ಸೇರಿದ್ದ ಮುದ್ದಹನುಮೇಗೌಡ
ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದರಿಂದ ಮುದ್ದಹನುಮೇಗೌಡ ಅವರು ಬಿಜೆಪಿ ಸೇರಿದ್ದರು. ಆ ವೇಳೆ ಜೆಡಿಎಸ್, ಕಾಂಗ್ರೆಸ್ ಮೈತ್ರಿಯಾಗಿದ್ದರಿಂದ ತುಮಕೂರು ಕ್ಷೇತ್ರ ಜೆಡಿಎಸ್ ಪಾಲಾಗಿತ್ತು. ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರು ಕಣಕ್ಕಿಳಿದಿದ್ದರು. ಇದರಿಂದ ಮುದ್ದಹನುಮೇಗೌಡ ಕಮಲ ಪಾಳಯ ಸೇರಿದ್ದರು.
ಇದಾದ ನಂತರ ಬಿಜೆಪಿಯಲ್ಲೂ ಅವರಿಗೆ ಟಿಕೆಟ್ ಸಿಗಲಿಲ್ಲ. 2023ರ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಮುದ್ದಹನುಮೇಗೌಡರಿಗೆ ಟಿಕೆಟ್ ನೀಡಲಿಲ್ಲ. ಹೀಗಾಗಿ ಮತ್ತೆ ಕೈ ಹಿಡಿಯಲು ನಿರ್ಧರಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡುವ ಸಾಧ್ಯೆತಯಿದೆ ಎಂಬ ಮಾಹಿತಿಯಿದೆ.

ತುಮಕೂರಿನಿಂದ ಮುದ್ದಹನುಮೇಗೌಡ ಕಾಂಗ್ರೆಸ್ ಅಭ್ಯರ್ಥಿ!
ಇನ್ನು, ಮಾಜಿ ಸಂಸದ ಮುದ್ದಹನುಮೇಗೌಡ ಅವರೇ ತುಮಕೂರಿನಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಗುವ ಅವಕಾಶ ಇದೆ. ಕಾಂಗ್ರೆಸ್ಗೆ ಮತ ನೀಡಬೇಕು ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತುಮಕೂರು ಜನರಲ್ಲಿ ಮನವಿ ಮಾಡಿದ್ದರು. ಹೀಗಾಗಿ ಅವರಿಗೆ ಟಿಕೆಟ್ ಸಿಗುವುದು ಬಹುತೇಕ ಪಕ್ಕಾ ಆಗಿದೆ.
"ನಾನು ನೇರವಾಗಿ ಲೋಕಸಭೆ ಚುನಾವಣೆಗೆ ಮತ ಕೇಳಲು ಬರುತ್ತೇನೆ. ಕಾಂಗ್ರೆಸ್ಗೆ ಮತ ನೀಡಬೇಕು. ಈಗಲೇ ಹೇಳ್ತಾ ಇದ್ದೇನೆ ಆಮೇಲೆ ನಾನು ಹೇಳಿಲ್ಲ ಅಂತಾ ಬೇರೆ ತೀರ್ಮಾನ ಮಾಡಬಾರದು. ಈಗಿನ ಸ್ಥಿತಿಯಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಈ ಬಗ್ಗೆ ಹೈಕಮಾಂಡ್ ಕೂಡ ಸೂಕ್ಷ್ಮವಾಗಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಒಂದು ವೇಳೆ ಮುದ್ದಹನುಮೇಗೌಡ ಬಿಟ್ಟು ಬೇರೆ ಯಾರಿಗೇ ಟಿಕೆಟ್ ಸಿಗಲಿ, 100ಕ್ಕೆ 99ರಷ್ಟು ಭಾಗ ಕಾಂಗ್ರೆಸ್ಗೆ ವೋಟ್ ಹಾಕಬೇಕು" ಎಂದು ಸಚಿವ ಕೆ ಎನ್ ರಾಜಣ್ಣ ಹೇಳಿದ್ದರು.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications