5 ವರ್ಷಗಳ ಕಾಲ ಗೊರವನಹಳ್ಳಿ ದೇಗುಲ ಸರ್ಕಾರದ ವಶಕ್ಕೆ
ಕೊರಟಗೆರೆ, ಸೆ. 05: ತುಮಕೂರು ಜಿಲ್ಲೆಯ ಪ್ರಸಿದ್ದ ಶ್ರೀಗೊರವನಹಳ್ಳಿ ಲಕ್ಷ್ಮಿದೇವಸ್ಥಾನದ ಆಸ್ತಿ ಹಾಗೂ ಆಡಳಿತವನ್ನು ಸಂಪೂರ್ಣವಾಗಿ ಸರ್ಕಾರ ವಶಕ್ಕೆ ತೆಗೆದುಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶ್ರೀ ಗೊರವನಹಳ್ಳಿ ಲಕ್ಷ್ಮಿ ದೇವಸ್ಥಾನವನ್ನು ಧಾರ್ಮಿಕ ದತ್ತಿ ಇಲಾಖೆ ವಶಕ್ಕೆ ತೆಗೆದುಕೊಳ್ಳಲಾಗಿದೆ. ಐದು ವರ್ಷಗಳ ಕಾಲ ಇಲಾಖೆಯ ವಶದಲ್ಲಿರುತ್ತದೆ ಎಂದು ಹೇಳಿದರು.
ಐದು ವರ್ಷಕ್ಕೆ ಮುನ್ನ ಗ್ರಾಮಸ್ಥರು ಹಾಗೂ ದೇವಾಲಯದ ಟ್ರಸ್ಟ್ನವರು ಯಾವುದೇ ವಿವಾದವಿಲ್ಲ, ನಾವು ಸಮರ್ಥವಾಗಿ ದೇವಸ್ಥಾನವನ್ನು ನಡೆಸಿಕೊಂಡು ಹೋಗುತ್ತೇವೆ ಎಂದು ಒಮ್ಮತದ ನಿರ್ಧಾರದಿಂದ ಸರ್ಕಾರದ ಮುಂದೆ ಬಂದರೆ ದೇವಸ್ಥಾನವನ್ನು ಟ್ರಸ್ಟ್ ವಶಕ್ಕೆ ಒಪ್ಪಿಸಲಾಗುವುದು ಎಂದು ತಿಳಿಸಿದರು. [ದೇಗುಲದ ವಿವಾದವೇನು?]

ತುಮಕೂರು ಅಥವಾ ಮಧುಗಿರಿ ಉಪವಿಭಾಗಾಧಿಕಾರಿಯನ್ನು ದೇವಾಲಯಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗುವುದು ರಾಜ್ಯವಷ್ಟೇ ಅಲ್ಲದೆ, ಹೊರಗಿನ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಇಲ್ಲಿಗೆ ಬರುತ್ತಾರೆ. ಭಕ್ತ ಸಂದಣಿ ಹೆಚ್ಚಾಗುವುದರಿಂದ ಯಾರಿಗೂ ತೊಂದರೆಯಾಗದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆ ನೀಡಿದ್ದೇನೆ.
ಜಿಲ್ಲೆಗೆ ನೂತನವಾಗಿ ಬಂದ ಜಿಲ್ಲಾಧಿಕಾರಿ ಪಲ್ಲವಿ ಅಕುರತಿ ದೀರ್ಘ ರಜೆ ಮೇಲೆ ತೆರಳಿದ್ದಾರೆ. ಹಾಗಾಗಿ ಪರ್ಯಾಯವಾಗಿ ಬೇರೆ ಜಿಲ್ಲಾಧಿಕಾರಿಯನ್ನು ಶೀಘ್ರವೇ ನೇಮಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೇನೆ ಎಂದು ಸಚಿವರು ತಿಳಿಸಿದರು.
ಶ್ರೀ ಮಹಾಲಕ್ಷ್ಮೀ ದೇವಿದೇವಾಲಯ: ಇತಿಹಾಸ ಹೇಳುವಂತೆ ಬಡವರಾಗಿದ್ದ ಅಬ್ಬಯ್ಯ ಎಂಬುವವರು ಮೊದಲು ಶ್ರೀ ಮಹಾಲಕ್ಷ್ಮೀ ದೇವಿಯ ವಿಗ್ರಹವನ್ನು ಪಡೆದು ಪೂಜೆ ಮಾಡಲು ಆರಂಭಿಸಿದರು. ಮಹಾಲಕ್ಷ್ಮೀ ಪೂಜೆ ಮಾಡಿದ ನಂತರ ಅಬ್ಬಯ್ಯ ಶ್ರೀಮಂತರಾದರು ಮತ್ತು ಸಮಾಜ ಸೇವಾಕಾರ್ಯದಲ್ಲಿ ತೊಡಗಿಸಿಕೊಂಡರು. ಆದ್ದರಿಂದ, ಅವರ ಮನೆ 'ಲಕ್ಷ್ಮೀ ನಿವಾಸ' ಎಂದು ಪ್ರಸಿದ್ಧವಾಯಿತು.[ಮಾಹಿತಿ ದೇವಾಲಯದ ವೆಬ್ ಸೈಟ್]
ಮಹಾಲಕ್ಷ್ಮೀ ದೇವಾಲಯದಲ್ಲಿ ಪ್ರತಿ ಮಂಗಳವಾರ, ಶುಕ್ರವಾರ ಹಾಗು ಭಾನುವಾರಗಳಂದು ವಿಶೇಷ ಪೂಜೆ ಇರುತ್ತದೆ. ಕಾರ್ತಿಕಮಾಸದಲ್ಲಿ ವಿಶೇಷ ಪೂಜೆಗಳು ನಡೆಯುತ್ತವೆ. ಲಕ್ಷಾಂತರ ಭಕ್ತರು ಈ ಸಮಯದಲ್ಲಿ ದೇವಿಯ ದರ್ಶನಕ್ಕಾಗಿ ಆಗಮಿಸುತ್ತಾರೆ.
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications