ಶಿವಕುಮಾರರ ದರ್ಶನ ಪಡೆಯದೆ ಶಿವೈಕ್ಯರಾದ ಗೌರಿಶಂಕರ ಶ್ರೀ
ತುಮಕೂರು, ಜನವರಿ 11: ಕೆಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೌರಿಶಂಕರ ಶ್ರೀಗಳು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಶಿವೈಕ್ಯರಾಗಿದ್ದಾರೆ. ಸಿದ್ದಗಂಗಾ ಶ್ರೀಗಳನ್ನು ನೋಡಬೇಕು ಮಾತನಾಡಿಸಬೇಕು, ಆಶೀರ್ವಾದ ಪಡೆಯಬೇಕು ಎಂಬ ಅವರ ಆಸೆ ಕೊನೆಗೂ ಆಸೆಯಾಗಿಯೇ ಉಳಿದಿದೆ.
1975ರ ಮೇ 26ರಂದು ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಅಂದಿನ ರಾಷ್ಟ್ರಪತಿ ಜೈಲ್ ಸಿಂಗ್ ಮತ್ತು ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ದೇವರಾಜ ಅರಸು ಅವರ ಸಮ್ಮುಖದಲ್ಲಿ ಗೌರಿಶಂಕರ ಸ್ವಾಮೀಜಿ ಆಯ್ಕೆಯಾಗಿದ್ದರು. ಆದರೆ ಸಲಿಂಗ ಕಾಮ ಆರೋಪ ಮೇಲೆ 1987ರಲ್ಲಿ ಅವರನ್ನು ಹೊರಹಾಕಲಾಗಿತ್ತು. ಇದಾದ ಮೇಲೆ ಗೌರಿ ಶಂಕರ ಸ್ವಾಮೀಜಿಗಳು ಶ್ರೀ ಶಿವಕುಮಾರ ಸ್ವಾಮೀಜಿಯವರನ್ನು ಸಂದಿಸಿಯೇ ಇಲ್ಲ.[ಗೌರಿಶಂಕರ ಸ್ವಾಮೀಜಿ ನಿಧನ: ಸಿದ್ದಗಂಗಾ ಮಠದಲ್ಲಿ ಬಿಗಿಭದ್ರತೆ]

2008ರಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಆರೋಪಗಳೆಲ್ಲವೂ ದೋಷಮುಕ್ತವಾದ ಮೇಲೆಯೂ ಗೌರಿ ಶಂಕರ ಸ್ವಾಮೀಜಿ, ಶಿವಕುಮಾರ ಸ್ವಾಮೀಜಿಯನ್ನು ದರ್ಶನ ಮಾಡಬೇಕೆಂಬ ಹಂಬಲ ಪೂರೈಸಲೇ ಇಲ್ಲ. ಶ್ರೀ ಶಿವಕುಮಾರ ಸ್ವಾಮೀಜಿಯವರ ಜನ್ಮದಿನದಂದು ಅವರನ್ನು ಕಾಣಬೇಕು, ಅವರ ಆಶೀರ್ವಾದ ಪಡೆಯಬೇಕು ಎಂಬ ಹೆಬ್ಬೆಯಕೆಯನ್ನು ದೇವರು ಪೂರ್ಣ ಮಾಡಲೇ ಇಲ್ಲ.[ಅಧಿಕಾರ ಹಸ್ತಾಂತರಕ್ಕೆ ಗೌರಿಶಂಕರ ಸ್ವಾಮೀಜಿ ಆಕ್ಷೇಪ]
ಅದರೆ 4 ತಿಂಗಳ ಹಿಂದೆ ಅವರನ್ನು ಕಾಣಲು ಸಿದ್ದಗಂಗಾ ಮಠಕ್ಕೆ ಹೋದರು ಶ್ರೀಗಳನ್ನು ನೋಡಲಾಗಲಿಲ್ಲ. ಅದರೆ ಭಕ್ತರಿಗೆ ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದ ನನ್ನ ಮೇಲಿದೆ ಎಂದು ಹೇಳಿಕೊಂಡಿದ್ದರು ಎನ್ನಲಾಗಿದೆ. ಅದ್ಯಾವ ಕಾಣದ ಶಕ್ತಿ ಗುರುಶಿಷ್ಯರನ್ನು ಒಂದು ಮಾಡಲು ಬಿಡಲೇ ಇಲ್ಲ ಎಂಬುದೇ ತಿಳಿಯದಾಗಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications