Breaking; ಒಂದೇ ದಿನ ಜೆಡಿಎಸ್ನ 100ಕ್ಕೂ ಹೆಚ್ಚು ಕಾರ್ಯಕರ್ತರ ರಾಜೀನಾಮೆ
ತುಮಕೂರು, ಸೆಪ್ಟೆಂಬರ್ 25: ಗುಬ್ಬಿಯ ಜೆಡಿಎಸ್ ಶಾಸಕ ಎಸ್. ಆರ್. ಶ್ರೀನಿವಾಸ್ ಮತ್ತು ಪಕ್ಷದ ವರಿಷ್ಠರ ನಡುವಿನ ಜಟಾಪಟಿ ಮುಂದುವರೆದಿದೆ. ಒಂದೇ ದಿನ ಪಕ್ಷದ 100ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ.
ಪಕ್ಷದಿಂದ ಎಸ್. ಆರ್. ಶ್ರೀನಿವಾಸ್ಗೆ ಅನ್ಯಾಯವಾಗಿದೆ ಎಂದು ಆರೋಪಿಸಿರುವ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿದರು. ರಾಜೀನಾಮೆ ನೀಡಿದವರಲ್ಲಿ ಬಿದರೆ ಗ್ರಾಮ ಕಾರ್ಯಕರ್ತರೇ ಅಧಿಕವಾಗಿದ್ದಾರೆ.
ರಾಜೀನಾಮೆ ನೀಡಿರುವ ಕಾರ್ಯಕರ್ತರು 'ವಾಸಣ್ಣ ಅಭಿಮಾನಿ ಬಳಗ' ಸೇರುತ್ತಿದ್ದಾರೆ. ಗುಬ್ಬಿಯಲ್ಲಿ 50 ಸಾವಿರಕ್ಕೂ ಅಧಿಕ ಪಕ್ಷದ ಕಾರ್ಯಕರ್ತರಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ ಎಂದು ಶಂಕಿಸಲಾಗಿದೆ.
ಎಸ್. ಆರ್. ಶ್ರೀನಿವಾಸ್ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ಸಣ್ಣದಾಗಿ ಆರಂಭವಾದ ಅಸಮಾಧಾನ ಬಳಿಕ ದೊಡ್ಡದಾಯಿತು. ಗುಬ್ಬಿ ಕ್ಷೇತ್ರದಲ್ಲಿ ಎಸ್. ಆರ್. ಶ್ರೀನಿವಾಸ್ ಬದಲು ಬೇರೆ ಅಭ್ಯರ್ಥಿ ಕಣಕ್ಕಿಳಿಸುವ ಮಟ್ಟಿಗೆ ಅಸಮಾಧಾನ ಬೆಳೆದುನಿಂತಿದೆ.

ಕೆಲವು ದಿನಗಳ ಹಿಂದೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಎಸ್. ಆರ್. ಶ್ರೀನಿವಾಸ್ ಅಡ್ಡ ಮತದಾನ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆಗ ಎಸ್. ಆರ್. ಶ್ರೀನಿವಾಸ್ ತಿಥಿ ಕಾರ್ಡ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಕಾಂಗ್ರೆಸ್ಗೆ ಸೇರ್ಪಡೆ; ಎಸ್. ಆರ್. ಶ್ರೀನಿವಾಸ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಹಲವು ದಿನಗಳಿಂದ ಹಬ್ಬಿದೆ. ಕೆಲವು ದಿನಗಳ ಹಿಂದೆ ಗುಬ್ಬಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಬೃಹತ್ ಸಮಾವೇಶ ನಡೆದಿತ್ತು. ಈ ಸಮಾವೇಶಕ್ಕೆ ಎಸ್. ಆರ್. ಶ್ರೀನಿವಾಸ್ ಗೈರಾಗಿದ್ದರು.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆಗೆ ಎಸ್. ಆರ್. ಶ್ರೀನಿವಾಸ್ ಪಕ್ಷ ಸೇರುವ ಬಗ್ಗೆ ಮಾತುಕತೆ ನಡೆಸಿದ್ದಾರೆ. ಆದರೆ ಸ್ಥಳೀಯ ನಾಯಕರು ಒಪ್ಪಿಗೆ ನೀಡದ ಕಾರಣ ಇನ್ನೂ ಅವರು ತಮ್ಮ ತೀರ್ಮಾನ ಪ್ರಕಟಿಸಿಲ್ಲ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications